AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Girl’s Education: ಇರಾನ್​ನಲ್ಲಿ ಶಾಲೆಗೆ ಹೋಗುವುದನ್ನು ತಡೆಯಲು ಹೆಣ್ಣುಮಕ್ಕಳಿಗೆ ವಿಷಪ್ರಾಶನ

ಇರಾನ್​ನಲ್ಲಿ ಹೆಣ್ಣುಮಕ್ಕಳ ಶಿಕ್ಷಣವನ್ನು ತೀರಾ ಕಡೆಗಣಿಸಲಾಗುತ್ತಿದೆ, ಶಾಲೆಗೆ ಹೋಗದಂತೆ ತಡೆಯಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಆದರೆ ಇರಾನ್​ನ ಖೋಂ ನಗರದಲ್ಲಿ ಹೆಣ್ಣುಮಕ್ಕಳಿಗೆ ಶಾಲೆಗೆ ಹೋಗದಂತೆ ತಡೆಯಲು ವಿಷವುಣಿಸಿದ ಘಟನೆ ವರದಿಯಾಗಿದೆ.

Girl's Education: ಇರಾನ್​ನಲ್ಲಿ ಶಾಲೆಗೆ ಹೋಗುವುದನ್ನು ತಡೆಯಲು ಹೆಣ್ಣುಮಕ್ಕಳಿಗೆ ವಿಷಪ್ರಾಶನ
ವಿದ್ಯಾರ್ಥಿನಿಯರುImage Credit source: NDTV
ನಯನಾ ರಾಜೀವ್
|

Updated on:Feb 27, 2023 | 9:11 AM

Share

ಇರಾನ್​ನಲ್ಲಿ ಹೆಣ್ಣುಮಕ್ಕಳ ಶಿಕ್ಷಣವನ್ನು ತೀರಾ ಕಡೆಗಣಿಸಲಾಗುತ್ತಿದೆ, ಶಾಲೆಗೆ ಹೋಗದಂತೆ ತಡೆಯಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಆದರೆ ಇರಾನ್​ನ ಖೋಂ ನಗರದಲ್ಲಿ ಹೆಣ್ಣುಮಕ್ಕಳಿಗೆ ಶಾಲೆಗೆ ಹೋಗದಂತೆ ತಡೆಯಲು ವಿಷವುಣಿಸಿದ ಘಟನೆ ವರದಿಯಾಗಿದೆ. ಕಳೆದ ನವೆಂಬರ್​ನಿಂದ ಉಸಿರಾಟಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ತೆಹ್ರಾನ್​ನ ಖೋಂ ನಗರದಲ್ಲಿ ವರದಿಯಾಗುತ್ತಿವೆ. ಈ ಮಕ್ಕಳಿಗೆ ಸಣ್ಣ ಪ್ರಮಾಣದಲ್ಲಿ ವಿಷವುಣಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಭಾನುವಾರ ಉಪ ಆರೋಗ್ಯ ಸಚಿವ ಯುನೆಸ್ ಪನಾಹಿ, ವಿಷವನ್ನು ಉದ್ದೇಶಪೂರ್ವಕವಾಗಿ ಕೊಡಲಾಗಿದೆ ಎಂಬುದನ್ನು ಖಚಿತಪಡಿಸಿದ್ದಾರೆ. ಖೋಂ ಶಾಲೆಗಳಲ್ಲಿ ಹಲವಾರು ವಿದ್ಯಾರ್ಥಿಗಳಿಗೆ ವಿಷಪ್ರಾಶನದ ನಂತರ, ಹಲವು ಮಂದಿ ಎಲ್ಲಾ ಶಾಲೆಗಳನ್ನು, ವಿಶೇಷವಾಗಿ ಬಾಲಕಿಯರ ಶಾಲೆಗಳನ್ನು ಮುಚ್ಚಬೇಕೆಂದು ಒತ್ತಾಯಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳ ಪೋಷಕರು ಫೆ.14ರಂದು ನಗರದ ಗವರ್ನರೇಟ್ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿ ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ಗುಪ್ತಚರ ಮತ್ತು ಶಿಕ್ಷಣ ಸಚಿವಾಲಯಗಳು ವಿಷದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಫ್ಘಾನಿಸ್ತಾನದಲ್ಲಿ ಕಾಲೇಜುಗಳ ತರಗತಿ ಆರಂಭ; ಗಂಡು- ಹೆಣ್ಣು ಮಕ್ಕಳ ನಡುವೆ ಪರದೆ ಹಾಕಿ ಪಾಠ

ಕಳೆದ ವಾರ, ಪ್ರಾಸಿಕ್ಯೂಟರ್ ಜನರಲ್ ಮೊಹಮ್ಮದ್ ಜಾಫರ್ ಮೊಂಟಜೆರಿ ಘಟನೆಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದರು. ಮಹಿಳೆಯರಿಗಾಗಿ ದೇಶದ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿದ ಆರೋಪದ ಮೇಲೆ 22 ವರ್ಷದ ಇರಾನಿನ ಕುರ್ದ್ ಮಹ್ಸಾ ಅಮಿನಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ, ಡಿಸೆಂಬರ್ 16 ರಿಂದ ಇರಾನ್ ಪ್ರತಿಭಟನೆಗಳಿಂದ ತತ್ತರಿಸಿ ಹೋಗಿದೆ, ಇನ್ನೊಂದೆಡೆ ಈ ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಘಟನೆಯು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಇನ್ನೊಂದೆಡೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದಾಗಿನಿಂದ, ವಿಶ್ವವಿದ್ಯಾಲಯಗಳ ಶಿಕ್ಷಣದಿಂದ ಹೆಣ್ಣುಮಕ್ಕಳನ್ನು ನಿರ್ಬಂಧಿಸಿದೆ. ತಾಲಿಬಾನ್ ಆಗಸ್ಟ್ 2021ರಲ್ಲಿ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಬಳಿಕ ಮೂಲಭೂತ ಹಕ್ಕುಗಳನ್ನು ವಿಶೇಷವಾಗಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಹಕ್ಕುಗಳನ್ನು ನಿರ್ಬಂಧಿಸುವ ನೀತಿಗಳನ್ನು ಜಾರಿಗೆ ತಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:11 am, Mon, 27 February 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ