AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಮಾಸ್ ಮುಖ್ಯಸ್ಥನ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಮೇಲೆ ಯುದ್ಧಕ್ಕೆ ಇರಾನ್​ನ ಖಮೇನಿ ಆದೇಶ

ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹತ್ಯೆಯ ನಂತರ ಇರಾನ್‌ನ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ಮೇಲೆ 'ನೇರ' ದಾಳಿಗೆ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ಹಮಾಸ್ ಮುಖ್ಯಸ್ಥನ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಮೇಲೆ ಯುದ್ಧಕ್ಕೆ ಇರಾನ್​ನ ಖಮೇನಿ ಆದೇಶ
ಅಯತೊಲ್ಲಾ ಅಲಿ ಖಮೇನಿ
ಸುಷ್ಮಾ ಚಕ್ರೆ
|

Updated on:Aug 01, 2024 | 10:50 PM

Share

ನವದೆಹಲಿ: ಹಮಾಸ್​ ಮುಖ್ಯಸ್ಥರಾಗಿದ್ದ ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿರುವ ಇರಾನ್​ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್ ಮೇಲೆ ಯುದ್ಧ ಸಾರಿದ್ದಾರೆ. ಇಸ್ಮಾಯಿಲ್ ಹನಿಯೆಹ್ ಅವರ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದು ಟೆಹ್ರಾನ್‌ನ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಟೆಹ್ರಾನ್‌ನಲ್ಲಿ ಹಮಾಸ್‌ನ ಉನ್ನತ ನಾಯಕ ಇಸ್ಮಾಯಿಲ್ ಹನಿಯೆಹ್ ಅವರ ಹತ್ಯೆಗೆ ಪ್ರತೀಕಾರವಾಗಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಇಸ್ರೇಲ್ ಮೇಲೆ “ನೇರ ದಾಳಿ” ಗೆ ಆದೇಶಿಸಿದ್ದಾರೆ ಎಂದು ಮೂವರು ಇರಾನ್ ಅಧಿಕಾರಿಗಳನ್ನು ಉಲ್ಲೇಖಿಸಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ನನ್ನ ಅವಧಿಯಲ್ಲೇ ಭಾರತ ಮೂರನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಲಿದೆ: ನರೇಂದ್ರ ಮೋದಿ

ಹನಿಯೆಹ್ ಅವರ ಸಾವನ್ನು ಘೋಷಿಸಿದ ಬೆನ್ನಲ್ಲೇ ಇರಾನ್ ಬುಧವಾರ ಬೆಳಿಗ್ಗೆ ದೇಶದ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ. ಅಧಿಕಾರಿಗಳ ಪ್ರಕಾರ, ಈ ಸಭೆಯಲ್ಲಿ ಖಮೇನಿ ಇಸ್ರೇಲ್ ಮೇಲೆ ದಾಳಿಯ ಆದೇಶವನ್ನು ನೀಡಿದ್ದಾರೆ. ಇಂತಹ ಸಭೆಯು ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ನಡೆಸಲಾಗುತ್ತದೆ. ಹಿಂದಿನ ಏಪ್ರಿಲ್‌ನಲ್ಲಿ ಸಿರಿಯಾದಲ್ಲಿ ಇಸ್ರೇಲಿ ವಾಯುದಾಳಿಯು ಇಬ್ಬರು ಉನ್ನತ ಇರಾನ್ ಮಿಲಿಟರಿ ಕಮಾಂಡರ್‌ಗಳನ್ನು ಕೊಲ್ಲುವ ಸಮಯದಲ್ಲಿ ಇದೇ ರೀತಿಯ ಸಭೆಯನ್ನು ಕರೆಯಲಾಗಿತ್ತು.

ಇದನ್ನೂ ಓದಿ: ವಿಯೆಟ್ನಾಂ ಪ್ರಧಾನಿ ಜತೆ ಮೋದಿ ಮಾತುಕತೆ; ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಕುರಿತು ಚರ್ಚೆ

ಒಂದುವೇಳೆ ಇರಾನ್ ಮತ್ತು ಅದರ ಪ್ರಾಕ್ಸಿಗಳು ನಮ್ಮ ದೇಶದ ವಿರುದ್ಧ ಯಾವುದೇ ದಾಳಿ ನಡೆಸಿದರೆ ಇಸ್ರೇಲ್ ಪೂರ್ಣ ಪ್ರಮಾಣದ ಯುದ್ಧಕ್ಕೆ ಹೋಗಲು ಸಿದ್ಧವಾಗಿದೆ ಎಂದು ರಾಜತಾಂತ್ರಿಕ ಬ್ಯಾಕ್‌ಚಾನಲ್‌ಗಳ ಮೂಲಕ ಇರಾನ್‌ಗೆ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ಇಸ್ರೇಲ್‌ನ ಚಾನೆಲ್ ವರದಿ ಮಾಡಿದೆ.

ಇರಾನ್‌ನ ಸರ್ಕಾರಿ ಪ್ರೆಸ್ ಟಿವಿ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಇಂದು ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರ ಅಂತ್ಯಕ್ರಿಯೆಯ ಪ್ರಾರ್ಥನೆಯನ್ನು ನಡೆಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:38 pm, Thu, 1 August 24

ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ