AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ

ಇರಾನ್‌ನ ಹಾಲಿ ನಾಯಕ ಮೊಜ್ತಬಾ ಖಮೇನಿ ತಮ್ಮ ತಂದೆ, ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಭದ್ರತಾ ಕಾರಣಗಳಿಂದ ಪಾಲ್ಗೊಳ್ಳುತ್ತಿಲ್ಲ. ಇಸ್ರೇಲಿ ಬೆದರಿಕೆ ಹಾಗೂ ಕಣ್ಗಾವಲು ಹೆಚ್ಚಿರುವ ಕಾರಣ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪಾಯಕಾರಿ ಎಂದು ಅವರ ಪ್ರತಿನಿಧಿ ತಿಳಿಸಿದ್ದಾರೆ. ಭಾರತದಿಂದ ಉನ್ನತ ಮಟ್ಟದ ನಿಯೋಗವು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ.

ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ
ಅಲಿ ಖಮೇನಿ
ನಯನಾ ರಾಜೀವ್
|

Updated on: Jul 03, 2026 | 7:51 AM

Share

ಟೆಹ್ರಾನ್, ಜುಲೈ 03: ಇರಾನ್‌ನ ಪ್ರಸ್ತುತ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಅವರು ಭದ್ರತಾ ಕಾರಣಗಳಿಂದಾಗಿ ತಮ್ಮ ತಂದೆ ಹಾಗೂ ಇರಾನ್‌ನ ಮಾಜಿ ನಾಯಕ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ. ಭಾರತದಲ್ಲಿನ ಅವರ ಅಧಿಕೃತ ಪ್ರತಿನಿಧಿ ಅಯತೊಲ್ಲಾ ಹಕೀಮ್ ಇಲಾಹಿ ಈ ವಿಷಯವನ್ನು ಖಚಿತಪಡಿಸಿದ್ದು, ಇಸ್ರೇಲಿ ಪಡೆಗಳ ಕಣ್ಗಾವಲು ಮತ್ತು ಭದ್ರತಾ ಬೆದರಿಕೆಗಳು ಹೆಚ್ಚಿರುವುದರಿಂದ ಮೊಜ್ತಬಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅತ್ಯಂತ ಅಪಾಯಕಾರಿ ಎಂದು ತಿಳಿಸಿದ್ದಾರೆ.

36 ವರ್ಷಗಳ ಕಾಲ ಇರಾನ್ ಅನ್ನು ಮುನ್ನಡೆಸಿದ್ದ ಅಲಿ ಖಮೇನಿ ಅವರು ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ದಾಳಿಯ ವೇಳೆ ಮೃತಪಟ್ಟಿದ್ದರು. ಯುದ್ಧದ ಪರಿಸ್ಥಿತಿಯ ಕಾರಣದಿಂದಾಗಿ ವಿಳಂಬವಾಗಿದ್ದ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಈಗ ಅಧಿಕೃತವಾಗಿ ಆರಂಭವಾಗುತ್ತಿವೆ.

ಜುಲೈ 4 ರಂದು ರಾಜಧಾನಿ ಟೆಹ್ರಾನ್‌ನಲ್ಲಿ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ಆರಂಭವಾಗಲಿದ್ದು, ಜುಲೈ 7 ರಂದು ಪವಿತ್ರ ನಗರವಾದ ಕೋಮ್‌ನಲ್ಲಿ ಧಾರ್ಮಿಕ ಆಚರಣೆಗಳು ನಡೆಯಲಿವೆ. ಜುಲೈ 9 ರಂದು ಅವರ ತವರು ನಗರವಾದ ಮಶಾದ್‌ನಲ್ಲಿ ಸಮಾಧಿ ಮಾಡುವ ಮೂಲಕ ಇದು ಮುಕ್ತಾಯಗೊಳ್ಳಲಿದೆ.

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದರು. ಪ್ರಧಾನಿ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲವಾದರೂ, ಭಾರತದ ಪರವಾಗಿ ಉನ್ನತ ಮಟ್ಟದ ನಿಯೋಗ ಇರಾನ್‌ಗೆ ತೆರಳಲಿದೆ. ಬಿಹಾರ ಗವರ್ನರ್ ಜನರಲ್ ಸೈಯದ್ ಹಸ್ನೈನ್ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಪವಿತ್ರಾ ಮಾರ್ಗರಿಟಾ ಅವರು ಭಾರತ ಸರ್ಕಾರದ ನಿಯೋಗವನ್ನು ಪ್ರತಿನಿಧಿಸಲಿದ್ದಾರೆ.

ಮತ್ತಷ್ಟು ಓದಿ: ಸತ್ತಿರಬಹುದು ಅಥವಾ ಕೆಟ್ಟ ಸ್ಥಿತಿಯಲ್ಲಿರಬಹುದು; ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ

ಕಾಂಗ್ರೆಸ್ ಪಕ್ಷದ ಪರವಾಗಿ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇರಾನ್ ಮತ್ತು ಅಮೆರಿಕ ಇತ್ತೀಚೆಗಷ್ಟೇ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರೂ, ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ ಪಡೆಗಳು ವಾಣಿಜ್ಯ ಹಡಗನ್ನು ಗುರಿಯಾಗಿಸಿಕೊಂಡಿದ್ದಕ್ಕೆ ಪ್ರತಿಯಾಗಿ ಅಮೆರಿಕ ಮಿಲಿಟರಿ ಇರಾನ್‌ನ 10 ನೆಲೆಗಳ ಮೇಲೆ ದಾಳಿ ನಡೆಸಿತ್ತು. ತದನಂತರ ಇರಾನ್ ಸಹ ಕುವೈತ್ ಮತ್ತು ಬಹ್ರೇನ್‌ನಲ್ಲಿರುವ ಯುಎಸ್ ನೆಲೆಗಳ ಮೇಲೆ ದಾಳಿ ನಡೆಸಿತ್ತು.

ಆದಾಗ್ಯೂ, ಪ್ರಸ್ತುತ ಉಭಯ ದೇಶಗಳ ನಡುವಿನ ಗುಂಡಿನ ಚಕಮಕಿ ಕಡಿಮೆಯಾಗಿದ್ದು, ಕತಾರ್ ಮತ್ತು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ದೋಹಾದಲ್ಲಿ ನಡೆದಿರುವ 14 ಅಂಶಗಳ ತಿಳುವಳಿಕೆ ಒಪ್ಪಂದದ ಸಮಾಲೋಚನೆಯಲ್ಲಿ ಸಕಾರಾತ್ಮಕ ಪ್ರಗತಿ ಕಂಡುಬಂದಿದೆ ಎಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೋಡ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
ಮೋಡ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
ಜಗದೊದ್ಧಾರನ ಆಡಿಸಿದಳೆಶೋದೆ ಕೀರ್ತನೆ ಹುಟ್ಟಿದ ತಾಣದಲ್ಲಿ ಜನ್ಮಾಷ್ಟಮಿಸಂಭ್ರಮ
ಜಗದೊದ್ಧಾರನ ಆಡಿಸಿದಳೆಶೋದೆ ಕೀರ್ತನೆ ಹುಟ್ಟಿದ ತಾಣದಲ್ಲಿ ಜನ್ಮಾಷ್ಟಮಿಸಂಭ್ರಮ
ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!
ಸದ್ದಿಲ್ಲದೆ ತಮಿಳುನಾಡಿಗೆ ಹರಿಯುತ್ತಿದೆ ಕಾವೇರಿ ನೀರು!
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ