AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ

ಇರಾನ್ ಮೇಲೆ ಅಮೆರಿಕ ದಾಳಿ ನಡೆಸಲು ಕಾರಣವೇನೆಂಬುದರ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದಾರೆ. ಇರಾನ್ ಕ್ಷಿಪಣಿಗಳೊಂದಿಗೆ ಅಮೆರಿಕದ ಮೇಲೆ ದಾಳಿ ನಡೆಸುವ ಬೆದರಿಕೆ ಹಾಕಿತ್ತು. ನಾವು ಅಯತೊಲ್ಲಾ ಖಮೇನಿಯನ್ನು ಕೊಲ್ಲದಿದ್ದರೆ ಅವರೇ ನಮ್ಮನ್ನು ಕೊಲ್ಲುತ್ತಿದ್ದರು. ಹೀಗಾಗಿ, ನಾವು ಇರಾನ್ ಮೇಲೆ ದಾಳಿ ನಡೆಸಿದೆವು. ಈ ದಾಳಿಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಇನ್ನೂ ನಾಲ್ಕೈದು ವಾರ ದಾಳಿ ಮುಂದುವರೆಯಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ.

ಇರಾನ್ ಮೇಲೆ 4-5 ವಾರ ದಾಳಿ ಮುಂದುವರೆಯಲಿದೆ; ಟ್ರಂಪ್ ಘೋಷಣೆ
Donald Trump
ಸುಷ್ಮಾ ಚಕ್ರೆ
|

Updated on:Mar 02, 2026 | 11:29 PM

Share

ವಾಷಿಂಗ್ಟನ್, ಮಾರ್ಚ್ 2: ಇರಾನ್ ವಿರುದ್ಧ ದಾಳಿ ನಡೆಸಲು 5 ವಾರಗಳಿಂದ ತಯಾರಿ ನಡೆಸಲಾಗಿತ್ತು. ಇನ್ನೂ ದಾಳಿ ನಿಂತಿಲ್ಲ. ಅಗತ್ಯವಿದ್ದರೆ ಯುದ್ಧವನ್ನು ತೀವ್ರಗೊಳಿಸುತ್ತೇವೆ. ಇರಾನ್ (Iran War) ವಿರುದ್ಧ ಇನ್ನೂ 4-5 ವಾರ ಯುದ್ಧ ಮುಂದುವರಿಯಲಿದೆ. ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮೇಲುಗೈ ಸಾಧಿಸಿದೆ ಎಂದು ವಾಷಿಂಗ್ಟನ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಬಲವಾದ ಎಚ್ಚರಿಕೆ ನೀಡಿದ್ದು, ಇರಾನ್ ಮೇಲೆ ಮತ್ತೊಂದು ದೊಡ್ಡ ದಾಳಿ ನಡೆಯಲಿದೆ ಎಂದು ಹೇಳಿದ್ದಾರೆ. ನಾವು ಇದುವರೆಗೂ ದಾಳಿಯ ತೀವ್ರತೆಯನ್ನು ಹೆಚ್ಚಿಸಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡ ದಾಳಿಗಳನ್ನು ನಡೆಸಲಾಗುವುದು. ಪ್ರಾಣ ಉಳಿಸಿಕೊಳ್ಳಲು ಇರಾನಿನ ಜನರು ಮನೆಯೊಳಗೆ ಇರಬೇಕೆಂದು ಮತ್ತು ಹೊರಗೆ ಹೋಗದಂತೆ ಟ್ರಂಪ್ ಮನವಿ ಮಾಡಿದ್ದಾರೆ.

ಇರಾನ್ ಅಮೆರಿಕಕ್ಕೆ ದ್ರೋಹ ಬಗೆದಿದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ. ಇರಾನ್ ವಿರುದ್ಧ ಐದು ವಾರಗಳ ಸಿದ್ಧತೆಗಳು ನಡೆದಿವೆ. ಅಗತ್ಯವಿದ್ದರೆ, ಯುದ್ಧವು ಉಲ್ಬಣಗೊಳ್ಳುತ್ತದೆ. ಇರಾನ್ ತನ್ನ ಶಸ್ತ್ರಾಸ್ತ್ರಗಳನ್ನು ಶರಣಾಗಿಸಬೇಕು, ಇಲ್ಲದಿದ್ದರೆ ಜಗತ್ತು ಹಿಂದೆಂದೂ ನೋಡಿರದ ಕಾರ್ಯಾಚರಣೆಗಳನ್ನು ನಾವು ನಡೆಸಬೇಕಾಗುತ್ತದೆ. ಇರಾನ್ ಭಯೋತ್ಪಾದನೆಯ ಜಾಗತಿಕ ಪ್ರಾಯೋಜಕ. ಇರಾನ್ ಅಮೆರಿಕದ ಮೇಲೆ ದಾಳಿ ಮಾಡಲು ಬಯಸಿತ್ತು. ನಾನು ಜನರಲ್ ಸೊಲೈಮಾನಿಯನ್ನು ಕೊಂದೆ. ಇಲ್ಲಿಯವರೆಗೆ, 10 ಇರಾನಿನ ಯುದ್ಧನೌಕೆಗಳು ನಾಶವಾಗಿವೆ ಎಂದು ಟ್ರಂಪ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ

ಇರಾನ್ ಮೇಲೆ ದಾಳಿ ನಡೆಸಿ ನನಗೆ ಇನ್ನೂ ಬೇಸರವಾಗಿಲ್ಲ. ಈ ದಾಳಿ ಇನ್ನೂ ನಾಲ್ಕೈದು ವಾರ ಮುಂದುವರೆಯಲಿದೆ. ಇರಾನ್ ಶರಣಾಗುವವರೆಗೂ ದಾಳಿ ನಡೆಸುತ್ತಲೇ ಇರುತ್ತೇವೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಮಾಧ್ಯಮವು ದಾಳಿಗಳಲ್ಲಿ ಕನಿಷ್ಠ 555 ಜನರು ಸಾವನ್ನಪ್ಪಿದ್ದಾರೆ ಮತ್ತು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದೆ. ಇದರಲ್ಲಿ ಮಿನಾಬ್‌ನಲ್ಲಿ ಬಾಲಕಿಯರ ಶಾಲೆಯ ಮೇಲೆ ಅಮೆರಿಕ, ಇಸ್ರೇಲ್ ಮಿಲಿಟರಿ ದಾಳಿ ನಡೆಸಿದಾಗ ಸುಮಾರು 115 ಜನರು ಸಾವನ್ನಪ್ಪಿದ್ದಾರೆ. ಇರಾನ್ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೂವರು ಅಮೇರಿಕನ್ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 5 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಯುಎಸ್ ಮಿಲಿಟರಿ ಪ್ರಕಟಿಸಿದೆ.

ಇದನ್ನೂ ಓದಿ: ಇರಾನ್​ ಜೊತೆಗಿನ ಸಂಘರ್ಷದಲ್ಲಿ ಇಸ್ರೇಲ್ ಜೊತೆ ನಿಂತಿದ್ದಕ್ಕೆ ಪ್ರಧಾನಿ ಮೋದಿಗೆ ನೆತನ್ಯಾಹು ಧನ್ಯವಾದ

ಲೆಬನಾನ್‌ನಲ್ಲಿ, ದೇಶದ ದಕ್ಷಿಣ ಭಾಗದಲ್ಲಿ ಇಸ್ರೇಲಿ ದಾಳಿಯಿಂದಾಗಿ 31 ಜನರು ಸಾವನ್ನಪ್ಪಿದ್ದಾರೆ. ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷದಿಂದಾಗಿ ಸುಮಾರು 149 ಜನರು ಗಾಯಗೊಂಡಿದ್ದಾರೆ. ಯುಎಇಯಲ್ಲಿ, ದುಬೈ ಮತ್ತು ಅಬುಧಾಬಿಯಲ್ಲಿ ನಡೆದ ದಾಳಿಯಲ್ಲಿ ಒಬ್ಬ ಪಾಕಿಸ್ತಾನಿ, ಒಬ್ಬ ನೇಪಾಳಿ ಮತ್ತು ಒಬ್ಬ ಬಾಂಗ್ಲಾದೇಶಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 11:26 pm, Mon, 2 March 26

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ