AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಧನದ ಬೆಲೆ ಕಡಿಮೆ ಮಾಡುವ ಪ್ಲಾನ್; ಟ್ರಂಪ್ ಜೊತೆ ಯಾವ ಮಾತುಕತೆಯೂ ನಡೆದಿಲ್ಲ ಎಂದ ಇರಾನ್

ಇರಾನ್ ಜೊತೆ ಉತ್ಪಾದಕ ಮಾತುಕತೆ ನಡೆಯುತ್ತಿದ್ದು, ಸಂಘರ್ಷಕ್ಕೆ ತೆರೆ ಬೀಳುವ ಸಾಧ್ಯತೆಯಿದೆ ಎಂಬ ಸುಳಿವು ನೀಡುವ ಪೋಸ್ಟ್ ಅನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದರು. ಅಲ್ಲದೆ, ಇರಾನ್ ಮೇಲಿನ ದಾಳಿಯನ್ನು 5 ದಿನಗಳವರೆಗೆ ಮುಂದೂಡಿರುವುದಾಗಿಯೂ ಅವರು ಘೋಷಿಸಿದ್ದರು. ಹೀಗಾಗಿ, ಕದನವಿರಾಮ ಉಂಟಾಗಲಿದೆ ಎಂದೇ ಭಾವಿಸಲಾಗಿತ್ತು. ಆದರೆ, ಟ್ರಂಪ್ ಅವರ ಹೇಳಿಕೆಯನ್ನು ಇರಾನ್ ನಿರಾಕರಿಸಿದೆ. ಅಮೆರಿಕದ ಜೊತೆ ಯಾವ ಮಾತುಕತೆಗಳೂ ನಡೆದಿಲ್ಲ ಎಂದು ಇರಾನ್ ಸ್ಪಷ್ಟಡಿಸಿದೆ.

ಇಂಧನದ ಬೆಲೆ ಕಡಿಮೆ ಮಾಡುವ ಪ್ಲಾನ್; ಟ್ರಂಪ್ ಜೊತೆ ಯಾವ ಮಾತುಕತೆಯೂ ನಡೆದಿಲ್ಲ ಎಂದ ಇರಾನ್
Us President Trump
ಸುಷ್ಮಾ ಚಕ್ರೆ
|

Updated on:Mar 23, 2026 | 7:03 PM

Share

ಟೆಹ್ರಾನ್, ಮಾರ್ಚ್ 23: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇರಾನ್ ಜೊತೆ ‘ಪ್ರೊಡಕ್ಟಿವ್ ಮಾತುಕತೆ’ ನಡೆಸಿದ್ದೇವೆ ಎಂಬ ಹೇಳಿಕೆಯನ್ನು ಇರಾನ್ ತಳ್ಳಿಹಾಕಿದೆ. ಇಂಧನದ ಬೆಲೆಗಳನ್ನು ಕಡಿಮೆ ಮಾಡುವ ಪ್ರಯತ್ನಗಳ ಭಾಗವಾಗಿ ಅಮೆರಿಕ ಈ ರೀತಿಯ ಹೇಳಿಕೆ ನೀಡಿದೆ ಎಂದು ಇರಾನ್ ಟೀಕಿಸಿದೆ. ಇರಾನ್ ಮೇಲೆ ನಡೆಸಲು ಯೋಚಿಸಲಾಗಿದ್ದ ಮಿಲಿಟರಿ ದಾಳಿಗಳಿಗೆ ವಿರಾಮ ನೀಡುವುದಾಗಿ ಟ್ರಂಪ್ ಘೋಷಿಸಿದ ಸ್ವಲ್ಪ ಸಮಯದ ನಂತರ ಇರಾನ್ ರಾಯಭಾರ ಕಚೇರಿ ಈ ಹೇಳಿಕೆ ಬಿಡುಗಡೆ ಮಾಡಿದೆ.

“ಇರಾನ್‌ನ ದೃಢ ಎಚ್ಚರಿಕೆಯ ನಂತರ ಟ್ರಂಪ್ ನಮ್ಮ ದೇಶದ ಮೇಲೆ ದಾಳಿ ನಡೆಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇರಾನ್‌ನ ಇಂಧನ ಮೂಲಸೌಕರ್ಯದ ಮೇಲೆ ಯಾವುದೇ ಯುಎಸ್ ದಾಳಿ ನಡೆದರೂ ಅದು ಇಡೀ ಪ್ರದೇಶದ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸುವುದಾಗಿ ಇರಾನ್ ಬೆದರಿಕೆ ಹಾಕಿತ್ತು. ಇದಾದ ನಂತರವೇ ಟ್ರಂಪ್ ಹಿಂದೆ ಸರಿದು ಇರಾನ್ ಮೇಲಿನ ದಾಳಿಯನ್ನು ಮುಂದೂಡಲು ಆದೇಶ ಹೊರಡಿಸಿದ್ದಾರೆ” ಎಂದು ಇರಾನ್​ನ ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ಟ್ರಂಪ್ ಅವರ ಈ ಹೇಳಿಕೆಗಳು ಇಂಧನದ ಬೆಲೆಗಳನ್ನು ಕಡಿಮೆ ಮಾಡುವ ಮತ್ತು ಮುಂದಿನ ದಾಳಿಗೆ ಸಮಯವನ್ನು ಮಾಡಿಕೊಳ್ಳುವ ಗುರಿಯನ್ನು ಹೊಂದಿವೆ ಎಂದು ಇರಾನಿನ ಮಾಧ್ಯಮ ವರದಿ ಮಾಡಿದೆ. ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಈ ಬಗ್ಗೆ ವರದಿ ಮಾಡಿದ್ದು, ಇರಾನ್ ಮತ್ತು ಅಮೆರಿಕದ ನಡುವೆ ಪ್ರಸ್ತುತ ಯಾವುದೇ ಮಾತುಕತೆಗಳು ನಡೆಯುತ್ತಿಲ್ಲ ಎಂದು ಹೇಳಿದೆ.

ಇದರ ನಡುವೆ, ಇಸ್ರೇಲಿನ ಸೈನ್ಯವು ಇಂದು ಇರಾನ್​ನಲ್ಲಿ ಮತ್ತೊಂದು ದಾಳಿಯನ್ನು ಪ್ರಾರಂಭಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:03 pm, Mon, 23 March 26

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!