AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್-ಅಮೆರಿಕ ಸಂಧಾನಕ್ಕೆ ‘ಪರಮಾಣು’ ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?

ಇಸ್ಲಾಮಾಬಾದ್‌ನಲ್ಲಿ ನಡೆದ ಇರಾನ್-ಅಮೆರಿಕ ಸಂಧಾನ, 21 ಗಂಟೆಗಳ ಮ್ಯಾರಥಾನ್ ಚರ್ಚೆಯ ನಂತರ ವಿಫಲವಾಗಿದೆ. ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ಸಂಪೂರ್ಣ ತೆರೆ ಎಳೆಯುವಂತೆ ಅಮೆರಿಕ ಷರತ್ತು ವಿಧಿಸಿದ್ದು, ಇದಕ್ಕೆ ಇರಾನ್ ಒಪ್ಪಲಿಲ್ಲ. ತಮ್ಮ ಪರಮಾಣು ಉದ್ದೇಶಗಳು ಶಾಂತಿಯುತ ಎಂದು ಇರಾನ್ ವಾದಿಸಿತು. ಈ ವೈಫಲ್ಯದಿಂದ ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಉದ್ವಿಗ್ನತೆ ಹೆಚ್ಚುವ ಸಾಧ್ಯತೆಯಿದ್ದು, ಟ್ರಂಪ್ ಮಿಲಿಟರಿ ಒತ್ತಡದ ಸುಳಿವು ನೀಡಿದ್ದಾರೆ.

ಇರಾನ್-ಅಮೆರಿಕ ಸಂಧಾನಕ್ಕೆ 'ಪರಮಾಣು' ತಡೆ: ಇಸ್ಲಾಮಾಬಾದ್ ಮ್ಯಾರಥಾನ್ ಮಾತುಕತೆ ಹಳಿ ತಪ್ಪಿದ್ದೇಕೆ?
ಡೊನಾಲ್ಡ್​ ಟ್ರಂಪ್-ಮೊಜ್ತಬಾ Image Credit source: NDTV
ನಯನಾ ರಾಜೀವ್
|

Updated on:Apr 12, 2026 | 10:05 AM

Share

ಇಸ್ಲಾಮಾಬಾದ್, ಏಪ್ರಿಲ್ 12: ಜಾಗತಿಕ ಶಾಂತಿ ಮತ್ತು ಸ್ಥಿರತೆ ಮೇಲೆ ಭಾರಿ ಪರಿಣಾಮ ಬೀರಬಹುದಾಗಿದ್ದ ಅಮೆರಿಕ-ಇರಾನ್(Iran) ನಡುವಿನ ಹೈ-ವೋಲ್ಟೇಜ್ ಸಂಧಾನ ಸದ್ಯಕ್ಕೆ ಹಳಿತಪ್ಪಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಸುದೀರ್ಘ ಮ್ಯಾರಥಾನ್ ಚರ್ಚೆಯು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದು, ಈ ವೈಫಲ್ಯದ ಹಿಂದಿನ ಆಘಾತಕಾರಿ ಕಾರಣಗಳು ಇಲ್ಲಿವೆ. ಅಮೆರಿಕ ಮತ್ತು ಇರಾನ್ ನಡುವೆ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯ ಹಾಡಲು ಪಾಕಿಸ್ತಾನ ಹಮ್ಮಿಕೊಂಡಿದ್ದ ಸಂಧಾನ ಸಭೆಯು ಅನಿಶ್ಚಿತವಾಗಿ ಕೊನೆಗೊಂಡಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗವು ಇದು ಇರಾನ್‌ಗೆ ಕೆಟ್ಟ ಸುದ್ದಿ ಎಂದು ಹೇಳುತ್ತಾ ಮಾತುಕತೆಯಿಂದ ಹೊರಬಂದಿದೆ.

ವಿಫಲತೆಗೆ ಪ್ರಮುಖ ಕಾರಣ: ಪರಮಾಣು ಹಠ 21 ಗಂಟೆಗಳ ಕಾಲ ನಡೆದ ಈ ಮ್ಯಾರಥಾನ್ ಚರ್ಚೆಯು ಪರಮಾಣು ಶಸ್ತ್ರಾಸ್ತ್ರಗಳ ವಿಷಯದಲ್ಲಿ ಮುಗ್ಗರಿಸಿತು. ಇರಾನ್ ತನ್ನ ಪರಮಾಣು ಶಸ್ತ್ರಾಸ್ತ್ರಗಳ ತಯಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಮತ್ತು ಭವಿಷ್ಯದಲ್ಲಿ ಅಂತಹ ಆಯುಧಗಳನ್ನು ತಯಾರಿಸುವ ಯಾವುದೇ ಹಾದಿಯನ್ನು ಹುಡುಕಬಾರದು ಎಂಬುದು ಅಮೆರಿಕದ ಪ್ರಮುಖ ಷರತ್ತು. ಇದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಗುರಿಯಾಗಿದೆ.

ಇರಾನ್‌ನ ನಿಲುವು ಇರಾನ್ ತನ್ನ ಪರಮಾಣು ಕಾರ್ಯಕ್ರಮವು ಶಾಂತಿಯುತ ಉದ್ದೇಶಕ್ಕಾಗಿ ಎಂದು ವಾದಿಸುತ್ತಿದೆ. ಆದರೆ ಇರಾನ್ ದೀರ್ಘಾವಧಿಯಲ್ಲಿ ಪರಮಾಣು ಅಸ್ತ್ರ ತ್ಯಜಿಸುವ ಇಚ್ಛಾಶಕ್ತಿ ಹೊಂದಿದೆಯೇ ಎಂಬ ಪ್ರಶ್ನೆಗೆ ವ್ಯಾನ್ಸ್ ಅವರಿಂದ ಬಂದ ಉತ್ತರ ಇನ್ನೂ ಅಂತಹ ಬದ್ಧತೆ ಕಂಡಿಲ್ಲ ಎಂಬುದು.

ಹಾರ್ಮುಜ್ ಜಲಸಂಧಿ ಮತ್ತು ಆಸ್ತಿ ಮುಟ್ಟುಗೋಲು ಮಾತುಕತೆಯಲ್ಲಿ ಕೇವಲ ಪರಮಾಣು ವಿಷಯ ಮಾತ್ರವಲ್ಲದೆ ಇನ್ನುಳಿದ ಪ್ರಮುಖ ಅಂಶಗಳೂ ಚರ್ಚೆಗೆ ಬಂದಿವೆ:

ಹಾರ್ಮುಜ್ ಜಲಸಂಧಿ: ಜಾಗತಿಕ ತೈಲ ಸಾರಿಗೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿರಿಸುವ ಬಗ್ಗೆ ತೀವ್ರ ಚರ್ಚೆ ನಡೆದಿದೆ.

ಆಸ್ತಿ ಬಿಡುಗಡೆ: ಅಮೆರಿಕ ಮುಟ್ಟುಗೋಲು ಹಾಕಿಕೊಂಡಿರುವ ಇರಾನ್‌ನ ಆಸ್ತಿಗಳ ಬಿಡುಗಡೆಯ ಬಗ್ಗೆಯೂ ಚರ್ಚೆಯಾಗಿದ್ದರೂ, ಅಂತಿಮವಾಗಿ ಇರಾನ್ ಅಮೆರಿಕದ ಷರತ್ತುಗಳಿಗೆ ಒಪ್ಪಿಗೆ ಸೂಚಿಸಲಿಲ್ಲ.

ಪರಸ್ಪರ ಆರೋಪಗಳ ಸುರಿಮಳೆ ಮಾತುಕತೆ ಮುರಿದುಬಿದ್ದ ನಂತರ ಎರಡೂ ದೇಶಗಳು ಪರಸ್ಪರ ದೂಷಿಸಿಕೊಂಡಿವೆ. ನಾವು ಸಾಕಷ್ಟು ಹೊಂದಿಕೊಳ್ಳುವ ಸ್ವಭಾವದಿಂದಲೇ ಬಂದಿದ್ದೆವು ಮತ್ತು ಉತ್ತಮ ಆಫರ್​ಗಳನ್ನು ನೀಡಿದ್ದೆವು. ಆದರೆ ಇರಾನ್ ಒಪ್ಪಲಿಲ್ಲ ಎಂದು ವ್ಯಾನ್ಸ್ ಹೇಳಿದ್ದಾರೆ.

ಮತ್ತಷ್ಟು ಓದಿ: ಇರಾನ್ ಬಯಸಿದರೂ ಹಾರ್ಮುಜ್ ಜಲಸಂಧಿ ತೆರೆಯಲು ಸಾಧ್ಯವಿಲ್ಲ; ಇಲ್ಲಿದೆ ಕಾರಣ

ಯಾವುದೇ ಬ್ಯಾಕಪ್ ಪ್ಲಾನ್ ಇಲ್ಲ: ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ ಈ ಮಾತುಕತೆ ವಿಫಲವಾದರೆ ನಿಮ್ಮ ಮುಂದಿನ ದಾರಿಯೇನು ಎಂಬ ಪ್ರಶ್ನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ ಗಂಭೀರವಾಗಿ ಪ್ರತಿಕ್ರಿಯಿಸಿದ್ದಾರೆ. ನಮಗೆ ಯಾವುದೇ ಪ್ಲಾನ್ ಬಿ (Plan B) ಅಗತ್ಯವಿಲ್ಲ. ಏಕೆಂದರೆ ಇರಾನ್‌ನ ಸೇನೆ ಈಗಾಗಲೆ ಸೋತಿದೆ. ಅವರ ಉತ್ಪಾದನಾ ಸಾಮರ್ಥ್ಯ ಮತ್ತು ಕ್ಷಿಪಣಿಗಳನ್ನು ನಾವು ತೀವ್ರವಾಗಿ ಹೊಡೆದುರುಳಿಸಿದ್ದೇವೆ. ನಮ್ಮ ಸೇನೆ ಅದ್ಭುತ ಕೆಲಸ ಮಾಡಿದೆ, ಎಂದು ಟ್ರಂಪ್ ಹೇಳುವ ಮೂಲಕ ಇರಾನ್ ಮೇಲೆ ಮಿಲಿಟರಿ ಒತ್ತಡವನ್ನು ಮುಂದುವರಿಸುವ ಮುನ್ಸೂಚನೆ ನೀಡಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಈ 21 ಗಂಟೆಗಳ ಸಂಧಾನವು ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ಬದಲು, ಎರಡು ರಾಷ್ಟ್ರಗಳ ನಡುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ಉಲ್ಬಣಿಸುವ ಸಾಧ್ಯತೆಯಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:04 am, Sun, 12 April 26

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!