AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಹತಾಶೆಯೇ ಈ ಒಪ್ಪಂದಕ್ಕೆ ಕಾರಣ ಎಂದ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ

ಇರಾನ್ ಮತ್ತು ಅಮೆರಿಕ ಜಂಟಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ದೃಢಪಡಿಸಿದ್ದಾರೆ. ಅಮೆರಿಕದ ಯುದ್ಧ ಮುಗಿಸುವ ಹತಾಶೆಯೇ ಈ ಒಪ್ಪಂದಕ್ಕೆ ಕಾರಣ ಎಂದು ಖಮೇನಿ ಲೇವಡಿ ಮಾಡಿದ್ದಾರೆ. ಮಿಲಿಟರಿ ಕಾರ್ಯಾಚರಣೆ ನಿಲುಗಡೆ, ಅಮೆರಿಕ ನೌಕಾ ದಿಗ್ಬಂಧನ ಹಿಂತೆಗೆತ, ಹಾರ್ಮುಜ್ ಜಲಸಂಧಿ ಸಂಚಾರ ಸುಗಮಗೊಳಿಸುವುದು ಪ್ರಮುಖ ಅಂಶಗಳಾಗಿವೆ. ಇದು ಮಧ್ಯಂತರ ಒಪ್ಪಂದವಾಗಿದ್ದು, ಅಂತಿಮ ಒಪ್ಪಂದಕ್ಕೆ 60 ದಿನಗಳ ಕಾಲಾವಕಾಶವಿದೆ.

ಅಮೆರಿಕದ ಹತಾಶೆಯೇ ಈ ಒಪ್ಪಂದಕ್ಕೆ ಕಾರಣ ಎಂದ ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ
ಮೊಜ್ತಬಾ ಖಮೇನಿ Image Credit source: Getty Images
ನಯನಾ ರಾಜೀವ್
|

Updated on: Jun 19, 2026 | 8:08 AM

Share

ಟೆಹ್ರಾನ್, ಜೂನ್ 19: ವಿಶ್ವ ರಾಜಕಾರಣದಲ್ಲಿ ಭಾರಿ ತಿರುವು ಸಿಕ್ಕಿದೆ. ಇರಾನ್(Iran) ಮತ್ತು ಅಮೆರಿಕ ಜಂಟಿಯಾಗಿ ಇಸ್ಲಾಮಾಬಾದ್ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅಧಿಕೃತವಾಗಿ ದೃಢಪಡಿಸಿದ್ದಾರೆ. ಆದರೆ, ಈ ಒಪ್ಪಂದಕ್ಕೆ ಇರಾನ್‌ನ ಉತ್ಸಾಹ ಕಾರಣವಲ್ಲ, ಬದಲಿಗೆ ಯುದ್ಧ ಮುಗಿಸಲೇಬೇಕಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತಾಶೆಯೇ ಕಾರಣ ಎಂದು ಖಮೇನಿ ಲೇವಡಿ ಮಾಡಿದ್ದಾರೆ.

ವರ್ಸೈಲ್ಸ್ ಅರಮನೆಯಲ್ಲಿ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಆಯೋಜಿಸಿದ್ದ ಜಿ7 ಶೃಂಗಸಭೆಯ ಔತಣಕೂಟದ ವೇಳೆ ಈ ಒಪ್ಪಂದದ ಸಿದ್ಧತೆ ನಡೆದಿದ್ದು, ಶುಕ್ರವಾರ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ಇದಕ್ಕೆ ಔಪಚಾರಿಕವಾಗಿ ಸಹಿ ಬೀಳಲಿದೆ.

ಲೆಬನಾನ್ ಸೇರಿದಂತೆ ಎಲ್ಲಾ ರಂಗಗಳಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆ ಹಾಗೂ ಯುದ್ಧವನ್ನು ತಕ್ಷಣದಿಂದಲೇ ಶಾಶ್ವತವಾಗಿ ನಿಲ್ಲಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ. ಅಮೆರಿಕವು ಇರಾನ್ ಮೇಲಿನ ನೌಕಾ ದಿಗ್ಬಂಧನವನ್ನು 30 ದಿನಗಳ ಒಳಗಾಗಿ ಹಿಂಪಡೆಯಬೇಕಾಗುತ್ತದೆ. ಇದರಿಂದ ಜಾಗತಿಕ ಹಡಗು ಸಂಚಾರ ಮೊದಲಿನ ಸ್ಥಿತಿಗೆ ಮರಳಲಿದೆ.

ಮತ್ತಷ್ಟು ಓದಿ: ಇರಾನ್-ಅಮೆರಿಕ ಐತಿಹಾಸಿಕ ಒಪ್ಪಂದ: ಜಾಗತಿಕ ತೈಲ ಬೆಲೆ ಕುಸಿತ

ಅಂತಿಮ ಒಪ್ಪಂದವಾದ 30 ದಿನಗಳಲ್ಲಿ ಇರಾನ್ ಸುತ್ತಮುತ್ತಲಿನ ಪ್ರದೇಶಗಳಿಂದ ಅಮೆರಿಕ ತನ್ನ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಲು ಒಪ್ಪಿಕೊಂಡಿದೆ.ಇರಾನ್ ತನ್ನ ವ್ಯಾಪ್ತಿಯಲ್ಲಿ ಬರುವ ಹಾರ್ಮುಜ್ ಜಲಸಂಧಿಯಲ್ಲಿ ಮುಂದಿನ 60 ದಿನಗಳವರೆಗೆ ಯಾವುದೇ ಶುಲ್ಕವಿಲ್ಲದೆ ಅಂತಾರಾಷ್ಟ್ರೀಯ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಭರವಸೆ ನೀಡಿದೆ.

ಸದ್ಯಕ್ಕೆ ಇದು ಮಧ್ಯಂತರ ಒಪ್ಪಂದವಾಗಿದ್ದು, ಪೂರ್ಣ ಪ್ರಮಾಣದ ಸಮಗ್ರ ಅಂತಿಮ ಒಪ್ಪಂದವನ್ನು ಸಿದ್ಧಪಡಿಸಲು ಉಭಯ ದೇಶಗಳಿಗೆ 60 ದಿನಗಳ ಕಾಲಾವಕಾಶ ಸಿಕ್ಕಿದೆ. ಈ ಒಪ್ಪಂದವನ್ನು ಜಗತ್ತಿಗೆ ಪ್ರಕಟಿಸಿರುವ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್,ಇದು ವಿಶ್ವದಲ್ಲಿ ಶಾಶ್ವತ ಶಾಂತಿಗೆ ದಾರಿ ಮಾಡಿಕೊಡಲಿದ್ದು, ಜಾಗತಿಕ ವ್ಯಾಪಾರಕ್ಕೆ ದೊಡ್ಡ ನಿರಾಳ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ