AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ರಾಷ್ಟ್ರಗಳನ್ನು ಒಡೆಯಲು ಅಮೆರಿಕ-ಇಸ್ರೇಲ್ ಸಂಚು: ಇಸ್ಲಾಮಿಕ್ ಒಕ್ಕೂಟಕ್ಕೆ ಇರಾನ್‌ನಿಂದ ತುರ್ತು ಕರೆ

ಅಮೆರಿಕ ಮತ್ತು ಇಸ್ರೇಲ್ ಮುಸ್ಲಿಂ ರಾಷ್ಟ್ರಗಳನ್ನು ಒಡೆಯಲು ಸಂಚು ರೂಪಿಸುತ್ತಿವೆ ಎಂದು ಇರಾನ್ ಎಚ್ಚರಿಸಿದೆ. ಇಸ್ಲಾಮಿಕ್ ಒಕ್ಕೂಟ, ಆರ್ಥಿಕ ಸ್ವಾವಲಂಬನೆ, ಡಾಲರ್ ಮುಕ್ತ ವಹಿವಾಟು ಹಾಗೂ ಹಾರ್ಮುಜ್ ಜಲಸಂಧಿ ಸುರಕ್ಷತೆಗೆ ಇರಾನ್ ಕರೆ ನೀಡಿದೆ. ಪ್ಯಾಲೆಸ್ಟೈನ್ ಬಿಕ್ಕಟ್ಟು, ಪರ್ಷಿಯನ್ ಕೊಲ್ಲಿ ರಕ್ಷಣೆ ಪ್ರಮುಖ ವಿಷಯಗಳಾಗಿವೆ. ಪ್ರಾದೇಶಿಕ ಭದ್ರತೆಗೆ ಮುಸ್ಲಿಂ ದೇಶಗಳ ಒಗ್ಗಟ್ಟು ಅತಿ ಮುಖ್ಯ ಎಂದು ಇರಾನ್ ಪ್ರತಿಪಾದಿಸಿದೆ.

ಮುಸ್ಲಿಂ ರಾಷ್ಟ್ರಗಳನ್ನು ಒಡೆಯಲು ಅಮೆರಿಕ-ಇಸ್ರೇಲ್ ಸಂಚು: ಇಸ್ಲಾಮಿಕ್ ಒಕ್ಕೂಟಕ್ಕೆ ಇರಾನ್‌ನಿಂದ ತುರ್ತು ಕರೆ
ಮೊಜ್ತಬಾ
ನಯನಾ ರಾಜೀವ್
|

Updated on: Aug 30, 2026 | 2:06 PM

Share

ಟೆಹ್ರಾನ್, ಆಗಸ್ಟ್ 30: ಪಶ್ಚಿಮ ಏಷ್ಯಾ ಮತ್ತು ಇಸ್ಲಾಮಿಕ್ ರಾಷ್ಟ್ರಗಳ ಮೇಲೆ ಪ್ರಾಬಲ್ಯ ಸಾಧಿಸಲು ಅಮೆರಿಕ ಹಾಗೂ ಇಸ್ರೇಲ್ ಮುಸ್ಲಿಂ ಸಮುದಾಯದ ಒಗ್ಗಟ್ಟನ್ನು ಒಡೆಯಲು ವ್ಯವಸ್ಥಿತ ಸಂಚು ರೂಪಿಸುತ್ತಿವೆ ಎಂದು ಇರಾನ್‌(Iran) ಕಟುವಾಗಿ ಎಚ್ಚರಿಸಿದೆ. ಇಸ್ಲಾಮಿಕ್ ದೇಶಗಳ ನಡುವಿನ ಭೌಗೋಳಿಕ, ಸಾಮಾಜಿಕ ಹಾಗೂ ಆರ್ಥಿಕ ಭಿನ್ನಾಭಿಪ್ರಾಯಗಳನ್ನು ಶತ್ರು ರಾಷ್ಟ್ರಗಳು ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದೆ.

ಮುಸ್ಲಿಂ ಒಗ್ಗಟ್ಟು ಮತ್ತು ಪ್ಯಾಲೆಸ್ಟೈನ್ ಬಿಕ್ಕಟ್ಟು

ಇಸ್ಲಾಮಿಕ್ ರಾಷ್ಟ್ರಗಳ ನಡುವೆ ಒಗ್ಗಟ್ಟಿನ ಕೊರತೆ ಇರುವುದರಿಂದಲೇ ಇಸ್ರೇಲ್ ಸೇನೆಯು ಗಾಜಾ ಮತ್ತು ಪ್ಯಾಲೆಸ್ಟೈನ್ ಜನರ ಮೇಲೆ ಯಾವುದೇ ಅಡೆತಡೆಯಿಲ್ಲದೆ ದಾಳಿ ನಡೆಸಲು ಸಾಧ್ಯವಾಗುತ್ತಿದೆ ಎಂದು ಇರಾನ್ ಪ್ರತಿಪಾದಿಸಿದೆ.

ಪರ್ಷಿಯನ್ ಕೊಲ್ಲಿ ರಕ್ಷಣೆ: ಗಲ್ಫ್ ರಾಷ್ಟ್ರಗಳು ಇಸ್ಲಾಂ ಧರ್ಮದಡಿ ಒಗ್ಗೂಡಿದರೆ, ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಪಾಶ್ಚಿಮಾತ್ಯ ಶಕ್ತಿಗಳು ಈ ಭಾಗದ ಸಂಪನ್ಮೂಲಗಳನ್ನು ಲೂಟಿ ಮಾಡಲು ಅಥವಾ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.

ಡಾಲರ್ ಮುಕ್ತ ಆರ್ಥಿಕತೆ ಹಾಗೂ ಸ್ವಾವಲಂಬನೆ

ಡಾಲರ್ ಅವಲಂಬನೆ ಕಡಿತ: ಅಮೆರಿಕದ ಆರ್ಥಿಕ ನಿರ್ಬಂಧಗಳನ್ನು ಎದುರಿಸಲು ದೇಶೀಯ ಉತ್ಪಾದನೆಗೆ ಒತ್ತು ನೀಡುವ “ಪ್ರತಿರೋಧ ಆರ್ಥಿಕತೆ” (Resistance Economy) ಅಳವಡಿಸಿಕೊಳ್ಳಬೇಕು ಹಾಗೂ ಅಂತರರಾಷ್ಟ್ರೀಯ ವಹಿವಾಟುಗಳಲ್ಲಿ ಯುಎಸ್ ಡಾಲರ್ ಮೇಲಿನ ಅವಲಂಬನೆಯನ್ನು ಹಂತ-ಹಂತವಾಗಿ ಕಡಿಮೆ ಮಾಡಬೇಕು ಎಂದು ಇರಾನ್ ಕರೆ ನೀಡಿದೆ.

ಮತ್ತಷ್ಟು ಓದಿ: Iran Protests: ‘ಮುಲ್ಲಾಗಳೇ ದೇಶಬಿಟ್ಟು ತೊಲಗಿ’- ಇರಾನ್​ನಲ್ಲಿ ಜನಘೋಷ; ತೀವ್ರ ಪ್ರತಿಭಟನೆಯಲ್ಲಿ 7 ಬಲಿ

ಟ್ರಂಪ್ ಆಡಳಿತದ ಬಿಗಿಮುಷ್ಟಿ: ಅಮೆರಿಕದ ನೂತನ ನಿರ್ಬಂಧಗಳು ಮತ್ತು ಹಣಕಾಸು ಒತ್ತಡಗಳನ್ನು ಹಿಮ್ಮೆಟ್ಟಿಸಲು ಸ್ವಾವಲಂಬಿ ಹಣಕಾಸು ನೀತಿಯೇ ಏಕೈಕ ದಾರಿ ಎಂದು ಪ್ರತಿಪಾದಿಸಲಾಗಿದೆ.

ಟೆಹ್ರಾನ್‌ಗೆ ಕತಾರ್ ಪ್ರಧಾನಿ ಭೇಟಿ: ಕತಾರ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರೆಹಮಾನ್ ಅಲ್ ಥಾನಿ ಅವರು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರನ್ನು ಭೇಟಿಯಾಗಿ ಯುದ್ಧದ ಉಲ್ಬಣವನ್ನು ತಡೆಯುವ ಕುರಿತು ಸಮಾಲೋಚನೆ ನಡೆಸಿದ್ದಾರೆ.

ಹಾರ್ಮುಜ್ ಜಲಮಾರ್ಗದ ಸುರಕ್ಷತೆ: ವಿಶ್ವದ ಪ್ರಮುಖ ತೈಲ ಸಾರಿಗೆ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯಲ್ಲಿ ಹಡಗುಗಳ ಮುಕ್ತ ಸಂಚಾರ ಮತ್ತು ಸಮುದ್ರದಲ್ಲಿನ ಸುರಂಗ,ಮೈನ್‌ಗಳನ್ನು ತೆರವುಗೊಳಿಸುವ ಸಂಬಂಧ ಇರಾನ್ ಮತ್ತು ಒಮಾನ್ ಜಂಟಿ ಯೋಜನೆ ರೂಪಿಸುತ್ತಿವೆ.

ಟ್ರಂಪ್ ಹೇಳಿಕೆ: ಈ ಸಂಘರ್ಷವನ್ನು ಅಂತ್ಯಗೊಳಿಸಲು ತಮ್ಮ ಬಳಿ ಯಾವುದೇ ನಿರ್ದಿಷ್ಟ ಸಮಯದ ಗಡುವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ರಾಜತಾಂತ್ರಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇರಾನ್ ತನ್ನ ಮಿತ್ರ ರಾಷ್ಟ್ರಗಳಾದ ರಷ್ಯಾ ಮತ್ತು ಚೀನಾದೊಂದಿಗೆ ಸ್ಥಳೀಯ ಕರೆನ್ಸಿಗಳಲ್ಲಿ (ಯುಯಾನ್, ರೂಬಲ್) ವ್ಯಾಪಾರ ವಹಿವಾಟು ನಡೆಸುವ ಮೂಲಕ ಅಮೆರಿಕನ್ ನಿರ್ಬಂಧಗಳನ್ನು ದುರ್ಬಲಗೊಳಿಸಲು ವೇದಿಕೆ ಸಿದ್ಧಪಡಿಸುತ್ತಿದೆ.

ತೈಲ ಮಾರ್ಗದ ಪ್ರಾಮುಖ್ಯತೆ: ಜಾಗತಿಕ ಕಚ್ಚಾ ತೈಲ ಪೂರೈಕೆಯ ಶೇಕಡಾ 20 ರಷ್ಟು ಭಾಗ ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗುವುದರಿಂದ, ಇಲ್ಲಿನ ಉದ್ವಿಗ್ನತೆಯು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಗೆ ನೇರ ಕಾರಣವಾಗಬಲ್ಲದು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​