AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Iran: ಹಿಜಾಬ್ ಧರಿಸಿಲ್ಲ ಎಂದು ಇಬ್ಬರು ಮಹಿಳೆಯರ ಮೇಲೆ ಯೋಗರ್ಟ್​ ಎರಚಿದ ವ್ಯಕ್ತಿ

ಹಿಜಾಬ್ ಧರಿಸದ ಕಾರಣಕ್ಕೆ ಅಂಗಡಿಯೊಂದರಲ್ಲಿ ಇಬ್ಬರು ಮಹಿಳೆಯರ ಮೇಲೆ ವ್ಯಕ್ತಿಯೊಬ್ಬರು ಯೋಗರ್ಟ್​ ಎರಚಿ ಗಲಾಟೆ ಮಾಡಿದ್ದಾರೆ

Iran: ಹಿಜಾಬ್ ಧರಿಸಿಲ್ಲ ಎಂದು ಇಬ್ಬರು ಮಹಿಳೆಯರ ಮೇಲೆ ಯೋಗರ್ಟ್​ ಎರಚಿದ ವ್ಯಕ್ತಿ
Hijab
Follow us
ನಯನಾ ರಾಜೀವ್
|

Updated on: Apr 03, 2023 | 12:20 PM

ಹಿಜಾಬ್ ಧರಿಸದ ಕಾರಣಕ್ಕೆ ಅಂಗಡಿಯೊಂದರಲ್ಲಿ ಇಬ್ಬರು ಮಹಿಳೆಯರ ಮೇಲೆ ವ್ಯಕ್ತಿಯೊಬ್ಬರು ಯೋಗರ್ಟ್​ ಎರಚಿ ಗಲಾಟೆ ಮಾಡಿದ್ದಾರೆ. ಇರಾನ್‌ನಲ್ಲಿ ಕಳೆದ ವರ್ಷ ಪ್ರಾರಂಭವಾದ ಹಿಜಾಬ್ ವಿರೋಧಿ ಪ್ರತಿಭಟನೆಗಳು ನಿಲ್ಲಿಸುವ ಹೆಸರನ್ನು ತೆಗೆದುಕೊಳ್ಳುತ್ತಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದ ಪ್ರತಿಭಟನಾಕಾರರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಜನರ ಧ್ವನಿಯನ್ನು ಹತ್ತಿಕ್ಕುವ ಯಾವ ಅವಕಾಶವನ್ನೂ ಇರಾನ್ ಸರ್ಕಾರ ಬಿಟ್ಟುಕೊಡುತ್ತಿಲ್ಲ. ಇದರಿಂದಾಗಿ ಮಹ್ಸಾ ಅಮಿನಿ ಸೇರಿದಂತೆ ಅನೇಕ ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ಇರಾನ್‌ನಲ್ಲಿ ಇಬ್ಬರು ಮಹಿಳೆಯರ ಮೇಲೆ ಮೊಸರು ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಇರಾನ್‌ನಲ್ಲಿ ಹಿಜಾಬ್ ಕಾನೂನು ಇದೆ ಮತ್ತು ಅದನ್ನು ಅನುಸರಿಸುವುದು ಅವಶ್ಯಕ ಎಂದು ರೈಸಿ ಶನಿವಾರ ಎಚ್ಚರಿಸಿದ್ದಾರೆ. ವರದಿಯ ಪ್ರಕಾರ, ಇಬ್ಬರೂ ಮಹಿಳೆಯರು ತಾಯಿ ಮತ್ತು ಮಗಳು. ಮಹಿಳೆಯರಿಬ್ಬರೂ ಅಂಗಡಿಯೊಂದರಲ್ಲಿ ನಿಂತಿದ್ದು, ಇಬ್ಬರೂ ಸಾರ್ವಜನಿಕವಾಗಿ ಹಿಜಾಬ್ ಧರಿಸಿರಲಿಲ್ಲ ಎಂಬುದು ವೈರಲ್ ಆಗಿರುವ ವಿಡಿಯೋದಲ್ಲಿ ಕಂಡುಬಂದಿದೆ. ಈ ಸಮಯದಲ್ಲಿ, ಒಬ್ಬ ವ್ಯಕ್ತಿಯು ಅವರ ಬಳಿ ಬಂದು ವಾದ ಮಾಡಿದ್ದಾರೆ.

ಸ್ವಲ್ಪ ಸಮಯದಲ್ಲೇ ಅವರ ತಲೆಯ ಮೇಲೆ ಯೋಗರ್ಟ್​ ಎರಚಿದ್ದಾರೆ. ತಕ್ಷಣ ಅಂಗಡಿಯವರು ದಾಳಿಕೋರನನ್ನು ಅಂಗಡಿಯಿಂದ ಹೊರಗೆ ತಳ್ಳಿದ್ದಾರೆ. ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಆರೋಪಿಯನ್ನು ಕೂಡ ಬಂಧಿಸಲಾಗಿದೆ. ಇರಾನ್‌ನಲ್ಲಿ ತಮ್ಮ ಕೂದಲನ್ನು ತೋರಿಸಿದ್ದಕ್ಕಾಗಿ ಇಬ್ಬರೂ ಮಹಿಳೆಯರನ್ನು ಬಂಧಿಸಲಾಗಿದೆ, ಇದು ಇರಾನ್‌ನಲ್ಲಿ ಕಾನೂನುಬಾಹಿರವಾಗಿದೆ.

ಅಧ್ಯಕ್ಷ ಇಬ್ರಾಹಿಂ ರೈಸಿ ಮಾತನಾಡಿ, ಮಹಿಳೆಯರು ಹಿಜಾಬ್ ಧರಿಸಬೇಕು ಇರಾನ್‌ನಲ್ಲಿ, ಮಹಿಳೆಯರು ಸಾರ್ವಜನಿಕವಾಗಿ ಹಿಜಾಬ್ ಧರಿಸದಿರುವುದು ಕಾನೂನುಬಾಹಿರವಾಗಿದೆ, ಆದರೂ ದೊಡ್ಡ ನಗರಗಳಲ್ಲಿ ಮಹಿಳೆಯರು ನಿಯಮಗಳ ಹೊರತಾಗಿಯೂ ಹಿಜಾಬ್ ಇಲ್ಲದೆ ತಿರುಗಾಡುತ್ತಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಶನಿವಾರ ಇರಾನ್ ಮಹಿಳೆಯರು ಧಾರ್ಮಿಕ ಅವಶ್ಯಕತೆಯಾಗಿ ಹಿಜಾಬ್ ಧರಿಸಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ಹಿಜಾಬ್ ಇಲ್ಲದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮಹಿಳೆಯರನ್ನು ಬಿಡುವುದಿಲ್ಲ ಎಂದು ನ್ಯಾಯಾಂಗ ಮುಖ್ಯಸ್ಥ ಗೋಲೆಮ್‌ಹೊಸೇನ್ ಮೊಹ್ಸೇನಿ ಎಜೆ ಬೆದರಿಕೆ ಹಾಕಿದ್ದಾರೆ ಎಂದು ಇರಾನ್ ಮಾಧ್ಯಮವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ