Iran: ಹಿಜಾಬ್ ಧರಿಸಿಲ್ಲ ಎಂದು ಇಬ್ಬರು ಮಹಿಳೆಯರ ಮೇಲೆ ಯೋಗರ್ಟ್​ ಎರಚಿದ ವ್ಯಕ್ತಿ

ಹಿಜಾಬ್ ಧರಿಸದ ಕಾರಣಕ್ಕೆ ಅಂಗಡಿಯೊಂದರಲ್ಲಿ ಇಬ್ಬರು ಮಹಿಳೆಯರ ಮೇಲೆ ವ್ಯಕ್ತಿಯೊಬ್ಬರು ಯೋಗರ್ಟ್​ ಎರಚಿ ಗಲಾಟೆ ಮಾಡಿದ್ದಾರೆ

Iran: ಹಿಜಾಬ್ ಧರಿಸಿಲ್ಲ ಎಂದು ಇಬ್ಬರು ಮಹಿಳೆಯರ ಮೇಲೆ ಯೋಗರ್ಟ್​ ಎರಚಿದ ವ್ಯಕ್ತಿ
Hijab
Follow us
|

Updated on: Apr 03, 2023 | 12:20 PM

ಹಿಜಾಬ್ ಧರಿಸದ ಕಾರಣಕ್ಕೆ ಅಂಗಡಿಯೊಂದರಲ್ಲಿ ಇಬ್ಬರು ಮಹಿಳೆಯರ ಮೇಲೆ ವ್ಯಕ್ತಿಯೊಬ್ಬರು ಯೋಗರ್ಟ್​ ಎರಚಿ ಗಲಾಟೆ ಮಾಡಿದ್ದಾರೆ. ಇರಾನ್‌ನಲ್ಲಿ ಕಳೆದ ವರ್ಷ ಪ್ರಾರಂಭವಾದ ಹಿಜಾಬ್ ವಿರೋಧಿ ಪ್ರತಿಭಟನೆಗಳು ನಿಲ್ಲಿಸುವ ಹೆಸರನ್ನು ತೆಗೆದುಕೊಳ್ಳುತ್ತಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದ ಪ್ರತಿಭಟನಾಕಾರರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಜನರ ಧ್ವನಿಯನ್ನು ಹತ್ತಿಕ್ಕುವ ಯಾವ ಅವಕಾಶವನ್ನೂ ಇರಾನ್ ಸರ್ಕಾರ ಬಿಟ್ಟುಕೊಡುತ್ತಿಲ್ಲ. ಇದರಿಂದಾಗಿ ಮಹ್ಸಾ ಅಮಿನಿ ಸೇರಿದಂತೆ ಅನೇಕ ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ಇರಾನ್‌ನಲ್ಲಿ ಇಬ್ಬರು ಮಹಿಳೆಯರ ಮೇಲೆ ಮೊಸರು ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಇರಾನ್‌ನಲ್ಲಿ ಹಿಜಾಬ್ ಕಾನೂನು ಇದೆ ಮತ್ತು ಅದನ್ನು ಅನುಸರಿಸುವುದು ಅವಶ್ಯಕ ಎಂದು ರೈಸಿ ಶನಿವಾರ ಎಚ್ಚರಿಸಿದ್ದಾರೆ. ವರದಿಯ ಪ್ರಕಾರ, ಇಬ್ಬರೂ ಮಹಿಳೆಯರು ತಾಯಿ ಮತ್ತು ಮಗಳು. ಮಹಿಳೆಯರಿಬ್ಬರೂ ಅಂಗಡಿಯೊಂದರಲ್ಲಿ ನಿಂತಿದ್ದು, ಇಬ್ಬರೂ ಸಾರ್ವಜನಿಕವಾಗಿ ಹಿಜಾಬ್ ಧರಿಸಿರಲಿಲ್ಲ ಎಂಬುದು ವೈರಲ್ ಆಗಿರುವ ವಿಡಿಯೋದಲ್ಲಿ ಕಂಡುಬಂದಿದೆ. ಈ ಸಮಯದಲ್ಲಿ, ಒಬ್ಬ ವ್ಯಕ್ತಿಯು ಅವರ ಬಳಿ ಬಂದು ವಾದ ಮಾಡಿದ್ದಾರೆ.

ಸ್ವಲ್ಪ ಸಮಯದಲ್ಲೇ ಅವರ ತಲೆಯ ಮೇಲೆ ಯೋಗರ್ಟ್​ ಎರಚಿದ್ದಾರೆ. ತಕ್ಷಣ ಅಂಗಡಿಯವರು ದಾಳಿಕೋರನನ್ನು ಅಂಗಡಿಯಿಂದ ಹೊರಗೆ ತಳ್ಳಿದ್ದಾರೆ. ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಆರೋಪಿಯನ್ನು ಕೂಡ ಬಂಧಿಸಲಾಗಿದೆ. ಇರಾನ್‌ನಲ್ಲಿ ತಮ್ಮ ಕೂದಲನ್ನು ತೋರಿಸಿದ್ದಕ್ಕಾಗಿ ಇಬ್ಬರೂ ಮಹಿಳೆಯರನ್ನು ಬಂಧಿಸಲಾಗಿದೆ, ಇದು ಇರಾನ್‌ನಲ್ಲಿ ಕಾನೂನುಬಾಹಿರವಾಗಿದೆ.

ಅಧ್ಯಕ್ಷ ಇಬ್ರಾಹಿಂ ರೈಸಿ ಮಾತನಾಡಿ, ಮಹಿಳೆಯರು ಹಿಜಾಬ್ ಧರಿಸಬೇಕು ಇರಾನ್‌ನಲ್ಲಿ, ಮಹಿಳೆಯರು ಸಾರ್ವಜನಿಕವಾಗಿ ಹಿಜಾಬ್ ಧರಿಸದಿರುವುದು ಕಾನೂನುಬಾಹಿರವಾಗಿದೆ, ಆದರೂ ದೊಡ್ಡ ನಗರಗಳಲ್ಲಿ ಮಹಿಳೆಯರು ನಿಯಮಗಳ ಹೊರತಾಗಿಯೂ ಹಿಜಾಬ್ ಇಲ್ಲದೆ ತಿರುಗಾಡುತ್ತಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಶನಿವಾರ ಇರಾನ್ ಮಹಿಳೆಯರು ಧಾರ್ಮಿಕ ಅವಶ್ಯಕತೆಯಾಗಿ ಹಿಜಾಬ್ ಧರಿಸಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ಹಿಜಾಬ್ ಇಲ್ಲದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮಹಿಳೆಯರನ್ನು ಬಿಡುವುದಿಲ್ಲ ಎಂದು ನ್ಯಾಯಾಂಗ ಮುಖ್ಯಸ್ಥ ಗೋಲೆಮ್‌ಹೊಸೇನ್ ಮೊಹ್ಸೇನಿ ಎಜೆ ಬೆದರಿಕೆ ಹಾಕಿದ್ದಾರೆ ಎಂದು ಇರಾನ್ ಮಾಧ್ಯಮವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ