AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಭಾರತೀಯ ಪ್ರಜೆಯ ದುರಂತ ಸಾವು

ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇಂದು ನಡೆದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಕುವೈತ್‌ನ ಪ್ರಮುಖ ವಿಮಾನ ನಿಲ್ದಾಣದ ಮೇಲೆ ಇರಾನ್‌ನ ಡ್ರೋನ್‌ಗಳು ದಾಳಿ ನಡೆಸಿದ ನಂತರ ಈ ಸಾವು ಸಂಭವಿಸಿದೆ. ಈ ದಾಳಿಯಿಂದಾಗಿ ಪ್ರಯಾಣಿಕರ ಟರ್ಮಿನಲ್ ಕಟ್ಟಡಕ್ಕೆ ಹಾನಿಯಾಗಿದ್ದು, ಅಧಿಕಾರಿಗಳು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸುವಂತಾಗಿತ್ತು.

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಭಾರತೀಯ ಪ್ರಜೆಯ ದುರಂತ ಸಾವು
Iran Attack On KuwaitImage Credit source: x
ಸುಷ್ಮಾ ಚಕ್ರೆ
|

Updated on:Jun 03, 2026 | 5:57 PM

Share

ಕುವೈತ್, ಜೂನ್ 3: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ಮತ್ತಷ್ಟು ತಾರಕಕ್ಕೇರಿದೆ. ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ (Iran Attack) ನಡೆಸಿರುವ ಭೀಕರ ಡ್ರೋನ್ ದಾಳಿಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ. ಈ ಘಟನೆಯು ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕುವೈತ್ ವಿಮಾನ ನಿಲ್ದಾಣದ ಆವರಣದ ಮೇಲೆ ಏಕಕಾಲದಲ್ಲಿ ಹಲವು ಡ್ರೋನ್‌ಗಳು ಅಪ್ಪಳಿಸಿದ್ದು, ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಇರಾನ್ ಸೇನೆಯು ಕುವೈತ್ ವಿಮಾನ ನಿಲ್ದಾಣದ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದೆ. ಡ್ರೋನ್‌ಗಳು ಅಪ್ಪಳಿಸುತ್ತಿದ್ದಂತೆ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು. ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ: ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ

ಈ ದಾಳಿಯ ಸಮಯದಲ್ಲಿ ವಿಮಾನ ನಿಲ್ದಾಣದ ತಾಂತ್ರಿಕ ಅಥವಾ ನಿರ್ವಹಣಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ಪ್ರಜೆಯೊಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ವಿವರ ಇನ್ನೂ ಬಹಿರಂಗವಾಗಿಲ್ಲ.

ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಅಮೆರಿಕ ಬೆಂಬಲಿತ ಗಲ್ಫ್ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಹಾಗೂ ಸೇನಾ ಸಂಘರ್ಷ ತೀವ್ರಗೊಂಡಿದೆ. ಅಮೆರಿಕದ ಮಿಲಿಟರಿ ಬೇಸ್‌ಗಳು ಅಥವಾ ಪಾಶ್ಚಿಮಾತ್ಯ ದೇಶಗಳಿಗೆ ಸಹಕರಿಸುತ್ತಿರುವ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಇರಾನ್ ಈ ದಾಳಿ ನಡೆಸಿದೆ ಎಂದು ರಕ್ಷಣಾ ವಲಯದ ತಜ್ಞರು ವಿಶ್ಲೇಷಿಸಿದ್ದಾರೆ. ಆದರೆ, ಕುವೈತ್‌ನಂತಹ ಶಾಂತಿಯುತ ರಾಷ್ಟ್ರದ ನಾಗರಿಕ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿರುವುದು ಜಾಗತಿಕ ಮಟ್ಟದಲ್ಲಿ ತೀವ್ರ ಖಂಡನೆಗೆ ಒಳಗಾಗಿದೆ.

ಇದನ್ನೂ ಓದಿ: ಇರಾನ್ ಮೇಲೆ ಮತ್ತೆ ಅಮೆರಿಕದ ‘ಆತ್ಮರಕ್ಷಣಾ ದಾಳಿ’: ಸೈನಿಕರು ಸುರಕ್ಷಿತ

ಈ ಘಟನೆಯ ಬೆನ್ನಲ್ಲೇ ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಲರ್ಟ್ ಆಗಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮೃತಪಟ್ಟ ಭಾರತೀಯ ಪ್ರಜೆಯ ಮೃತದೇಹವನ್ನು ಶೀಘ್ರವಾಗಿ ಭಾರತಕ್ಕೆ ತರಲು ರಾಯಭಾರ ಕಚೇರಿ ಅಧಿಕಾರಿಗಳು ಕುವೈತ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಕುವೈತ್‌ನಲ್ಲಿರುವ ಉಳಿದ ಭಾರತೀಯ ನಾಗರಿಕರು ಸುರಕ್ಷಿತ ಸ್ಥಳಗಳಲ್ಲೇ ಇರುವಂತೆ ಮತ್ತು ಸ್ಥಳೀಯ ಸರ್ಕಾರದ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:54 pm, Wed, 3 June 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ