AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ebrahim Raisi Death: ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

Iran President Ebrahim Raisi Dies: ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ.

Ebrahim Raisi Death: ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು
ಇಬ್ರಾಹಿಂ ರೈಸಿ
ನಯನಾ ರಾಜೀವ್
|

Updated on:May 20, 2024 | 9:58 AM

Share

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ ಇರಾನ್‌ (Iran) ಮಾಧ್ಯಮಗಳು ವರದಿ ಮಾಡಿವೆ.

ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್‌ಮ್ಯಾನ್‌ಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ರೈಸಿ ನೆರೆಯ ರಾಷ್ಟ್ರವಾದ ಅಝರ್ಬೈಜಾನ್​ನಲ್ಲಿ ಆ ದೇಶದ ಅಧ್ಯಕ್ಷ ಇಲ್ಹಾಮ್ ಅಲಿಯಎವ್ ಜತೆ ಅಣೆಕಟ್ಟು ಉದ್ಘಾಟಿಸಿದ್ದರು. ಉಭಯ ರಾಷ್ಟ್ರಗಳು ಅರಾಸ್​ ನದಿಗೆ ನಿರ್ಮಿಸಿದ ಮೂರನೇ ಅಣೆಕಟ್ಟು ಇದಾಗಿದೆ.

ಮತ್ತಷ್ಟು ಓದಿ: Ebrahim Raisi: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ? ಪ್ರಧಾನಿ ಮೋದಿ ಕಳವಳ

ರೈಸಿ ಅವರಿದ್ದ ಹೆಲಿಕಾಪ್ಟರ್​ನೊಂದಿಗೆ ಪ್ರಯಾಣಿಸುತ್ತಿದ್ದ ಇತರೆ ಎರಡು ಬೆಂಗಾವಲು ಹೆಲಿಕಾಪ್ಟರ್​ಗಳು ಸುರಕ್ಷಿತವಾಗಿ ಹಿಂದಿರುಗಿವೆ.

ಬೆಂಗಾವಲು ಹೆಲಿಕಾಪ್ಟರ್​ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಸಚಿವ ಮೆಹ್ರದಾದ್ ಇದ್ದು ಅವರು ಸುರಕ್ಷಿತವಾಗಿ ಮರಳಿದ್ದಾರೆ.

ರೆಡ್ ಕ್ರೆಸೆಂಟ್ ಅನ್ನು ಉಲ್ಲೇಖಿಸಿ ಹಲವಾರು ಇರಾನಿನ ಮಾಧ್ಯಮ ಚಾನೆಲ್‌ಗಳು, ರಕ್ಷಣಾ ತಂಡಗಳು ರೈಸಿಯ ಹೆಲಿಕಾಪ್ಟರ್‌ನ ಅವಶೇಷಗಳನ್ನು ಪತ್ತೆಮಾಡಿದ್ದವು. ರೆಡ್ ಕ್ರೆಸೆಂಟ್ ಅಧ್ಯಕ್ಷ ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಎಂಬ ಮಾಹಿತಿಯನ್ನು ನೀಡಿರಲಿಲ್ಲ. ಅಪಘಾತದ ಸ್ಥಳದಲ್ಲಿ ಯಾರೂ ಜೀವಂತವಾಗಿರುವ ಯಾವುದೇ ಕುರುಹು ಕಂಡುಬಂದಿರಲಿಲ್ಲ. ಇದೀಗ ಇಬ್ರಾಹಿಂ ರೈಸಿ ಮೃತಪಟ್ಟಿರುವ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:49 am, Mon, 20 May 24

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು