AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಆತಂಕ: ಇರಾನ್​ನ ಹಿಟ್​ಲಿಸ್ಟ್​ನಲ್ಲಿ ಇದ್ದಾರಂತೆ ಟ್ರಂಪ್, ಮೆಲೋನಿ, ನೆತನ್ಯಾಹು ಅಲಿ ಪುತ್ರನ ಶಪಥ

ಇರಾನ್‌ನ ನೂತನ ನಾಯಕ ಮೊಜ್ತಬಾ ಖಮೇನಿ, ತಮ್ಮ ತಂದೆಯ ಸಾವಿಗೆ ಪ್ರತೀಕಾರವಾಗಿ ಟ್ರಂಪ್, ಮೆಲೋನಿ, ಮ್ಯಾಕ್ರನ್ ಸೇರಿದಂತೆ ಹಲವು ಜಾಗತಿಕ ನಾಯಕರನ್ನು ಗುರಿಯಾಗಿಸಿ ಹಿಟ್‌ಲಿಸ್ಟ್ ಬಿಡುಗಡೆ ಮಾಡಿದ್ದಾರೆ. ಈ ಬೆಳವಣಿಗೆ ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧಕ್ಕೆ ಕಾರಣವಾಗುವ ಸಾಧ್ಯತೆಯಿದ್ದು, ಜಾಗತಿಕ ಭದ್ರತೆಗೆ ತೀವ್ರ ಆತಂಕ ಸೃಷ್ಟಿಸಿದೆ. ಪಾಶ್ಚಿಮಾತ್ಯ ದೇಶಗಳ ಭದ್ರತಾ ಸಂಸ್ಥೆಗಳಿಗೆ ಇದು ದೊಡ್ಡ ಸವಾಲಾಗಿದೆ.

ಜಾಗತಿಕ ಆತಂಕ: ಇರಾನ್​ನ ಹಿಟ್​ಲಿಸ್ಟ್​ನಲ್ಲಿ ಇದ್ದಾರಂತೆ ಟ್ರಂಪ್, ಮೆಲೋನಿ, ನೆತನ್ಯಾಹು ಅಲಿ ಪುತ್ರನ ಶಪಥ
ಟ್ರಂಪ್, ಮೆಲೊನಿ, ನೆತನ್ಯಾಹು
ನಯನಾ ರಾಜೀವ್
|

Updated on: Jul 13, 2026 | 1:22 PM

Share

ಟೆಹ್ರಾನ್, ಜುಲೈ 13:ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ನಡುವೆಯೇ ಜಾಗತಿಕ ರಾಜಕಾರಣದಲ್ಲಿ ನೆತ್ತರು ಹೆಪ್ಪುಗಟ್ಟಿಸುವಂತಹ ರಣತಂತ್ರವೊಂದು ಬಯಲಾಗಿದೆ. ಇರಾನ್‌(Iran)ನ ಅತ್ಯುನ್ನತ ಧಾರ್ಮಿಕ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರವಾಗಿ ಅಮೆರಿಕ, ಇಸ್ರೇಲ್ ಮತ್ತು ಯುರೋಪಿಯನ್ ರಾಷ್ಟ್ರಗಳ ಅಗ್ರ ನಾಯಕರನ್ನು ಒಳಗೊಂಡ ಹಿಟ್​ಲಿಸ್ಟ್​ ಅನ್ನು ಇರಾನ್‌ನ ಪ್ರಭಾವಿ ಸರ್ಕಾರಿ ಮಾಧ್ಯಮವೊಂದು ಪ್ರಕಟಿಸಿದೆ.

2026ರ ಫೆಬ್ರವರಿ 28 ರಂದು ನಡೆದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯ ಬೆನ್ನಲ್ಲೇ ಇರಾನ್‌ನ ನೂತನ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಅವರ ಪುತ್ರ ಮೊಜ್ತಬಾ ಖಮೇನಿ, “ನಮ್ಮ ತಂದೆಯ ಸಾವಿಗೆ ಸೇಡು ತೀರಿಸಿಕೊಳ್ಳುವುದು ನಮ್ಮ ರಾಷ್ಟ್ರದ ಇಚ್ಛೆಯಾಗಿದೆ. ಈ ಹಿಟ್ ಲಿಸ್ಟ್‌ನಲ್ಲಿರುವ ಅಪರಾಧಿಗಳು ತಮ್ಮ ಹಾಸಿಗೆಯ ಮೇಲೆ ಶಾಂತಿಯುತವಾಗಿ ಸಾಯುವ ಆಸೆಯನ್ನು ಸಮಾಧಿಗೆ ಕೊಂಡೊಯ್ಯಬೇಕಾಗುತ್ತದೆ” ಎಂದು ಭೀಕರ ಶಪಥ ಮಾಡಿದ್ದಾರೆ.

ಪತ್ರಿಕೆಯಲ್ಲಿ ಬಿಡುಗಡೆಯಾಯ್ತು 13 ಜಾಗತಿಕ ನಾಯಕರ ಫೋಟೋ

ಇರಾನ್ ರಾಜಧಾನಿ ಟೆಹ್ರಾನ್‌ನ ಅಧಿಕೃತ ಆಡಳಿತ ಮಂಡಳಿಯಿಂದ ಪ್ರಕಟವಾಗುವ ‘ಹಮ್ಶಹ್ರಿ’ಎಂಬ ಸಂಪ್ರದಾಯವಾದಿ ಪತ್ರಿಕೆಯು ಮೊಜ್ತಬಾ ಅವರ ಈ ಎಚ್ಚರಿಕೆಯ ಬೆನ್ನಲ್ಲೇ ಆನ್‌ಲೈನ್‌ನಲ್ಲಿ ಇನ್ಫೋಗ್ರಾಫಿಕ್ ಒಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಇರಾನ್ ಗುರಿಯಾಗಿಸಲಿರುವ ವಿಶ್ವದ 13 ಪ್ರಮುಖ ನಾಯಕರ ಫೋಟೋಗಳನ್ನು ಹಾಕಲಾಗಿದೆ.

ಇರಾನ್‌ನ ಹಿಟ್ ಲಿಸ್ಟ್‌ನಲ್ಲಿರುವ ಪ್ರಮುಖರು

ಡೊನಾಲ್ಡ್ ಟ್ರಂಪ್ (ಅಮೆರಿಕ ಅಧ್ಯಕ್ಷ)

ಬೆಂಜಮಿನ್ ನೆತನ್ಯಾಹು (ಇಸ್ರೇಲ್ ಪ್ರಧಾನಿ)

ಕೀರ್ ಸ್ಟಾರ್ಮರ್ (ಬ್ರಿಟನ್ ಪ್ರಧಾನಿ)

ಎಮ್ಯಾನುಯೆಲ್ ಮ್ಯಾಕ್ರನ್ (ಫ್ರಾನ್ಸ್ ಅಧ್ಯಕ್ಷ)

ಜಾರ್ಜಿಯಾ ಮೆಲೋನಿ (ಇಟಲಿ ಪ್ರಧಾನಿ)

ಫ್ರೆಡ್ರಿಕ್ ಮೆರ್ಜ್ (ಜರ್ಮನಿ ಚಾನ್ಸೆಲರ್)

ಮಾರ್ಕೊ ರೂಬಿಯೊ (ಅಮೆರಿಕದ ವಿದೇಶಾಂಗ ಕಾರ್ಯದರ್ಶಿ)

ಪೀಟ್ ಹೆಗ್ಸೆತ್ (ಅಮೆರಿಕದ ರಕ್ಷಣಾ ಕಾರ್ಯದರ್ಶಿ)

ಮತ್ತಷ್ಟು ಓದಿ: ನಾನೇ ನಂಬರ್ 1 ಟಾರ್ಗೆಟ್, ಇರಾನ್‌ ನನ್ನ ಹತ್ಯೆಗೆ ಸಂಚು ರೂಪಿಸುತ್ತಿದೆ ಎಂದ ಡೊನಾಲ್ಡ್ ಟ್ರಂಪ್

ಯುರೋಪಿಯನ್ ರಾಷ್ಟ್ರಗಳ ವಿರುದ್ಧ ಇರಾನ್ ಕೆಂಡಾಮಂಡಲ

ಈ ಯುದ್ಧದಲ್ಲಿ ಕೇವಲ ಅಮೆರಿಕ ಮತ್ತು ಇಸ್ರೇಲ್ ಮಾತ್ರವಲ್ಲದೆ ಇಡೀ ಯುರೋಪ್ ತನ್ನ ವಿನಾಶಕ್ಕೆ ಕಾರಣ ಎಂದು ಇರಾನ್ ನಂಬಿದೆ. ಅಮೆರಿಕದ ಯುದ್ಧವಿಮಾನಗಳು ಇರಾನ್ ಮೇಲೆ ಬಾಂಬ್ ದಾಳಿ ಮಾಡಲು ತಮ್ಮ ವಾಯುಪ್ರದೇಶವನ್ನು ಬಳಸಲು ಮುಕ್ತ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಫ್ರಾನ್ಸ್, ಇಟಲಿ ಮತ್ತು ಜರ್ಮನಿಯ ನಾಯಕರನ್ನು ಇರಾನ್ ತೀವ್ರವಾಗಿ ದ್ವೇಷಿಸುತ್ತಿದೆ.

ಖುದ್ದಾಗಿ ಮೊಜ್ತಾಬಾ ಖಮೇನಿ ಕೂಡ ಫೆಬ್ರವರಿಯಲ್ಲಿ ನಡೆದ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಈಗ ರಹಸ್ಯ ಸ್ಥಳದಿಂದಲೇ ಜಾಗತಿಕ ನಾಯಕರ ಹತ್ಯೆಗೆ ಸ್ಕೆಚ್ ಹಾಕುತ್ತಿರುವುದು ಪಾಶ್ಚಿಮಾತ್ಯ ದೇಶಗಳ ಭದ್ರತಾ ಸಂಸ್ಥೆಗಳಿಗೆ ಭಾರಿ ತಲೆನೋವಾಗಿ ಪರಿಣಮಿಸಿದೆ.

ಜಾಗತಿಕ ಭದ್ರತೆಯ ಮೇಲಾಗುವ ಭೀಕರ ಪ್ರಭಾವ

ಇರಾನ್‌ನ ಈ ಅಧಿಕೃತ ಬೆದರಿಕೆಯು ಅಂತಾರಾಷ್ಟ್ರೀಯ ರಾಜತಾಂತ್ರಿಕ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ.

ರಹಸ್ಯ ಕಮಾಂಡೋ ದಾಳಿಗಳ ಭೀತಿ: ಇರಾನ್ ಈ ಹಿಂದೆ ಜಾಗತಿಕವಾಗಿ ತನ್ನ ಶತ್ರುಗಳನ್ನು ಮಟ್ಟಹಾಕಲು ತನ್ನ ಪ್ರಸಿದ್ಧ ‘ಕುದ್ಸ್ ಫೋರ್ಸ್’ಮತ್ತು ಇಂಟರ್ನ್ಯಾಷನಲ್ ಸ್ಲೀಪರ್ ಸೆಲ್‌ಗಳನ್ನು ಬಳಸಿಕೊಂಡ ಇತಿಹಾಸ ಹೊಂದಿದೆ. ಈಗ ನೇರವಾಗಿ ದೇಶಗಳ ರಾಷ್ಟ್ರಪ್ರಧಾನಿಗಳನ್ನೇ ಟಾರ್ಗೆಟ್ ಮಾಡಿರುವುದರಿಂದ ಅಮೆರಿಕದ ಸೀಕ್ರೆಟ್ ಸರ್ವೀಸ್ ಸೇರಿದಂತೆ ಜಾಗತಿಕ ಕಮಾಂಡೋ ಪಡೆಗಳು ತಮ್ಮ ನಾಯಕರ ಭದ್ರತೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸಿವೆ.

ಯುದ್ಧ ಮತ್ತಷ್ಟು ಭೀಕರವಾಗುವ ಶಂಕೆ: ಇರಾನ್‌ನ ಇಂತಹ ಪ್ರಚೋದನಾಕಾರಿ ಹೇಳಿಕೆಗಳು ಶಾಂತಿ ಮಾತುಕತೆಯ ಹಾದಿಯನ್ನು ಸಂಪೂರ್ಣವಾಗಿ ಮುಚ್ಚಿಹಾಕುತ್ತವೆ. ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಈ ಹಿಟ್ ಲಿಸ್ಟ್‌ಗೆ ಪ್ರತಿಯಾಗಿ ಟೆಹ್ರಾನ್‌ನಲ್ಲಿರುವ ಇರಾನ್‌ನ ಮಿಲಿಟರಿ ಬಂಕರ್‌ಗಳ ಮೇಲೆ ಮತ್ತಷ್ಟು ಭೀಕರ ದಾಳಿ ನಡೆಸಲು ಬ್ಲೂಪ್ರಿಂಟ್ ಸಿದ್ಧಪಡಿಸುತ್ತಿವೆ ಎನ್ನಲಾಗಿದೆ. ಜಾಗತಿಕ ಮಹಾಯುದ್ಧದ ಕಡೆಗೆ ಜಾರುತ್ತಿರುವ ಮಧ್ಯಪ್ರಾಚ್ಯದ ಪರಿಸ್ಥಿತಿ ಸದ್ಯ ಅತ್ಯಂತ ಕಠಿಣವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್