AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾಕ್​ ಪ್ರಧಾನಿ ಮುಸ್ತಫಾ ಅಲ್​ ಕಧಿಮಿ ನಿವಾಸದ ಮೇಲೆ ಡ್ರೋಣ್​ ದಾಳಿ; ಹತ್ಯೆ ಯತ್ನ ಎಂದ ಮಿಲಿಟರಿ

ಸದ್ಯಕ್ಕಂತೂ ಯಾವುದೇ ಸಂಘಟನೆ ಉಗ್ರಸಂಘಟನೆ, ಬಂಡುಕೋರರು ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಇನ್ನು ಪ್ರಧಾನಿ ನಿಲಯ ಇರುವ ಗ್ರೀನ್​ ಝೋನ್​​ನಲ್ಲಿ ವಾಸವಾಗಿರುವ ಪಾಶ್ಚಿಮಾತ್ಯ ದೇಶಗಳ ರಾಯಭಾರಿಗಳು ಸ್ಫೋಟದ ಸದ್ದು ಕೇಳಿದ್ದಾಗಿ ಹೇಳಿಕೊಂಡಿದ್ದಾರೆ. 

ಇರಾಕ್​ ಪ್ರಧಾನಿ ಮುಸ್ತಫಾ ಅಲ್​ ಕಧಿಮಿ ನಿವಾಸದ ಮೇಲೆ ಡ್ರೋಣ್​ ದಾಳಿ; ಹತ್ಯೆ ಯತ್ನ ಎಂದ ಮಿಲಿಟರಿ
ಇರಾಕ್​ ಪ್ರಧಾನಿ
TV9 Web
| Edited By: |

Updated on: Nov 07, 2021 | 10:43 AM

Share

ಇರಾಕ್ ಪ್ರಧಾನಿ ಮುಸ್ತಫಾ ಅಲ್​ ಕಧಿಮಿ ಅವರ ಬಾಗ್ದಾದ್​ ನಿವಾಸದ ಮೇಲೆ ಡ್ರೋಣ್​  ದಾಳಿ ನಡೆಸಲಾಗಿದೆ. ಇಲ್ಲಿ ಡ್ರೋಣ್​ ಮೂಲಕ ಸ್ಫೋಟಕಗಳನ್ನು ಕೆಡವಲಾಗಿದ್ದು,  ಇದು ಪ್ರಧಾನಿ ಹತ್ಯೆ ಪ್ರಯತ್ನ ಎಂದು ಇರಾಕ್​ ಸೈನ್ಯ ಹೇಳಿದೆ. ಅದೃಷ್ಟವಶಾತ್​ ಕಧಿಮಿಗೆ ಯಾವುದೇ ಹಾನಿಯೂ ಆಗಿಲ್ಲ.  ಬಾಗ್ದಾದ್​​ನಲ್ಲಿ ಪ್ರಧಾನಿ ನಿಲಯ ಭದ್ರವಾದ ಗ್ರೀನ್​ ಝೋನ್​​ನಲ್ಲಿದೆ. ಆದರೆ ಇದೀಗ ಡ್ರೋಣ್​ ದಾಳಿಯಾಗಿದೆ ಎಂದಷ್ಟೇ ಸೇನೆ ತಿಳಿಸಿದ್ದು, ಬೇರೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಇನ್ನು ಪ್ರಧಾನಿ ಕಧಿಮಿಗೆ ಯಾವುದೇ ಅಪಾಯವಾಗಿಲ್ಲ. ಅವರು ಸುರಕ್ಷಿತರಾಗಿದ್ದಾರೆ..ಜನರೂ ಶಾಂತವಾಗಿರಬೇಕು ಎಂದು ಪ್ರಧಾನಮಂತ್ರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಆದರೂ ಈ ದಾಳಿಯಿಂದ ಕೆಲವು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. 

ಸದ್ಯಕ್ಕಂತೂ ಯಾವುದೇ ಸಂಘಟನೆ ಉಗ್ರಸಂಘಟನೆ, ಬಂಡುಕೋರರು ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಇನ್ನು ಪ್ರಧಾನಿ ನಿಲಯ ಇರುವ ಗ್ರೀನ್​ ಝೋನ್​​ನಲ್ಲಿ ವಾಸವಾಗಿರುವ ಪಾಶ್ಚಿಮಾತ್ಯ ದೇಶಗಳ ರಾಯಭಾರಿಗಳು ಸ್ಫೋಟದ ಸದ್ದು ಕೇಳಿದ್ದಾಗಿ ಹೇಳಿಕೊಂಡಿದ್ದಾರೆ.  ಕಳೆದ ತಿಂಗಳು ಇಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಫಲಿತಾಂಶವನ್ನು ಇರಾನ್​ ಬೆಂಬಲಿತ ಶಸ್ತ್ರಸಜ್ಜಿತ ಗುಂಪುಗಳು ಬಲವಾಗಿ ವಿರೋಧಿಸಿವೆ. ಈ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿವೆ.  ಚುನಾವಣೆಯ ನಂತರ ಅಧಿಕಾರ ಕಳೆದುಕೊಂಡವರೇ ಈ ಗುಂಪಿನವರಾಗಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಹೊಂದಿವೆ. ಆದರೆ ಸದ್ಯಕ್ಕೇನೂ ಇವರು ದಾಳಿ ಹೊಣೆ ಹೊತ್ತಿಲ್ಲ.

ಇದನ್ನೂ ಓದಿ: ಅಪ್ಪು ಮೇಲೆ ಜನರಿಟ್ಟ ಅಭಿಮಾನಕ್ಕೆ ಸಾಟಿ ಇಲ್ಲ; ಪುನೀತ್​ ಸಮಾಧಿ ಬಳಿ ಜನಸಾಗರ ಇನ್ನೂ ಕಮ್ಮಿ ಆಗಿಲ್ಲ

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’