AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Iraq Marriage Law: ಇರಾಕ್​ನಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸು 9 ವರ್ಷಕ್ಕೆ ಇಳಿಸಲು ಸಿದ್ಧತೆ

ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 9 ವರ್ಷಕ್ಕೆ ಇಳಿಸುವ ಮಸೂದೆಯನ್ನು ಇರಾಕ್ ಸಂಸತ್ತಿನಲ್ಲಿ ಮಂಡಿಸಲಾಗಿದೆ. ಇದು ಇಡೀ ದೇಶದಲ್ಲಿ ದೊಡ್ಡ ವಿವಾದ ಸೃಷ್ಟಿಸಿದ್ದು, ದೇಶದ ಜನತೆ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಸಂಘಟನೆಗಳು ತೀವ್ರ ಆತಂಕ ವ್ಯಕ್ತಪಡಿಸಿವೆ. ಸ್ತುತ ಇರಾಕ್‌ನಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸು 18 ವರ್ಷ. ಇರಾಕ್ ಸಂಸತ್ತಿನಲ್ಲಿ ಈ ಮಸೂದೆ ಅಂಗೀಕಾರವಾದರೆ, 9 ವರ್ಷ ವಯಸ್ಸಿನ ಹುಡುಗಿಯರು 15 ವರ್ಷ ವಯಸ್ಸಿನ ಹುಡುಗರನ್ನು ಮದುವೆಯಾಗಬಹುದು. ಹೀಗಾದರೆ ದೇಶದಲ್ಲಿ ಬಾಲ್ಯ ವಿವಾಹ ಹೆಚ್ಚಾಗುವ ಎಲ್ಲ ಸಾಧ್ಯತೆಗಳೂ ಇವೆ.

Iraq Marriage Law: ಇರಾಕ್​ನಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸು 9 ವರ್ಷಕ್ಕೆ ಇಳಿಸಲು ಸಿದ್ಧತೆ
ಶಾಲೆ ಮಕ್ಕಳುImage Credit source: Global Citizens
ನಯನಾ ರಾಜೀವ್
|

Updated on: Aug 09, 2024 | 12:20 PM

Share

ಇರಾಕ್‌ನಲ್ಲಿ ಹೊಸ ಕಾನೂನನ್ನು ಪರಿಚಯಿಸಲು ನಿರ್ಧರಿಸಲಾಗಿದೆ, ಇದು ಹೆಣ್ಣುಮಕ್ಕಳ ಮದುವೆಯ ಕನಿಷ್ಠ ವಯಸ್ಸನ್ನು 9 ವರ್ಷಕ್ಕೆ ನಿಗದಿಪಡಿಸುತ್ತದೆ. ಮಸೂದೆಯನ್ನು ಇರಾಕಿ ಸಂಸತ್ತಿನಲ್ಲಿ ಮಂಡಿಸಲಾಗಿದೆ. ಇರಾಕ್‌ನ ಸಂಪ್ರದಾಯವಾದಿ ಶಿಯಾ ಪಕ್ಷಗಳು ಸಂಸತ್ತಿನಲ್ಲಿ ವೈಯಕ್ತಿಕ ಕಾನೂನಿಗೆ ತಿದ್ದುಪಡಿ ಮಾಡುವಂತೆ ಒತ್ತಾಯಿಸುತ್ತಿವೆ. ಅದು 9 ವರ್ಷ ವಯಸ್ಸಿನ ಹೆಣ್ಣು ಮಕ್ಕಳು ಮದುವೆಯಾಗಲು ಅವಕಾಶ ನೀಡುತ್ತದೆ. ಮಹಿಳಾ ಹಕ್ಕುಗಳ ಸಂಘಟನೆಗಳು ಈ ಮಸೂದೆಯ ಬಗ್ಗೆ ಕಳವಳ ವ್ಯಕ್ತಪಡಿಸಿವೆ.

ಪ್ರಸ್ತುತ ಇರಾಕ್‌ನಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸು 18 ವರ್ಷ. ಕಾಸಿಮ್ ಸರ್ಕಾರದ ಅಡಿಯಲ್ಲಿ 1959 ರಲ್ಲಿ ಜಾರಿಗೊಳಿಸಲಾದ ಕಾನೂನಿಗೆ ಬದಲಾವಣೆಗಳನ್ನು ಇರಾಕ್ ಸಂಸತ್ತಿನ ಅತಿದೊಡ್ಡ ಬಣವಾದ ಸಂಪ್ರದಾಯವಾದಿ ಶಿಯಾ ಇಸ್ಲಾಮಿಸ್ಟ್ ಪಕ್ಷಗಳ ಒಕ್ಕೂಟವು ಒತ್ತಾಯಿಸುತ್ತಿದೆ. ಸಂಸತ್ತಿನಲ್ಲಿ ಮಂಡಿಸಲಾದ ಕರಡು ಪ್ರತಿಯು ವೈಯಕ್ತಿಕ ಸ್ಥಾನಮಾನದ ಎಲ್ಲಾ ವಿಷಯಗಳಲ್ಲಿ ದಂಪತಿ ಸುನ್ನಿ ಅಥವಾ ಶಿಯಾ ಪಂಗಡದ ನಡುವೆ ಆಯ್ಕೆ ಮಾಡಬೇಕಾಗುತ್ತದೆ.

ನ್ಯಾಯಾಲಯದ ಬದಲು ಶಿಯಾ ಮತ್ತು ಸುನ್ನಿ ದತ್ತಿ ಕಚೇರಿಗಳಿಗೆ ಮದುವೆಯ ಬಗ್ಗೆ ನಿರ್ಧರಿಸಲು ಅವಕಾಶ ನೀಡುತ್ತದೆ. ಮಸೂದೆಯ ಕರಡು ಜಾಫರಿ ಕಾನೂನು ವ್ಯವಸ್ಥೆಯನ್ನು ಆಧರಿಸಿದೆ, ಜಾಫರಿ ಕಾನೂನಿಗೆ ಆರನೇ ಶಿಯಾ ಇಮಾಮ್ ಜಾಫರ್ ಅಲ್-ಸಾದಿಕ್ ಹೆಸರಿಡಲಾಗಿದೆ.

ಮತ್ತಷ್ಟು ಓದಿ: Repressive Country For Women: ಮಹಿಳಾ ಹಕ್ಕುಗಳ ದಮನ, ಯಾವ ದೇಶದಲ್ಲಿ ಹೆಚ್ಚು? ವಿಶ್ವಸಂಸ್ಥೆ ನೀಡಿರುವ ಮಾಹಿತಿ ಇಲ್ಲಿದೆ

ಇದು ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಒಳಗೊಂಡಿದೆ. ಇದು ಒಂಬತ್ತು ವರ್ಷ ವಯಸ್ಸಿನ ಹುಡುಗಿಯರು ಮತ್ತು ಹದಿನೈದು ವರ್ಷದ ಹುಡುಗರ ವಿವಾಹವನ್ನು ಅನುಮತಿಸುತ್ತದೆ. ಈ ಕರಡು ಮಸೂದೆಯನ್ನು ಸಂಸದ ರೇದ್ ಅಲ್-ಮಲಿಕಿ ಅವರು ಇರಾಕ್ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಕರಡಿನಲ್ಲಿ ಪ್ರಸ್ತಾಪಿಸಲಾದ ಬದಲಾವಣೆಗಳು ಮಾನವ ಹಕ್ಕುಗಳ ಕಾರ್ಯಕರ್ತರ ಅಸಮಾಧಾನವನ್ನು ಹೆಚ್ಚಿಸಿವೆ.

ಇರಾಕಿನ ಮಹಿಳಾ ಹಕ್ಕುಗಳ ವೇದಿಕೆಯ ಸಿಇಒ ತಮಾರಾ ಅಮೀರ್, ಈ ಪ್ರಸ್ತಾವಿತ ಬದಲಾವಣೆಗಳು ಇರಾಕ್‌ನಲ್ಲಿನ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳು ಮತ್ತು ಯೋಗಕ್ಷೇಮದ ಮೇಲೆ ಆಳವಾದ ಋಣಾತ್ಮಕ ಪರಿಣಾಮ ಬೀರುತ್ತವೆ ಎಂದು ಮಿಡಲ್ ಈಸ್ಟ್ ಐಗೆ ತಿಳಿಸಿದ್ದಾರೆ. ರಾಜಕಾರಣಿ ತನ್ನ ಒಂಬತ್ತು ವರ್ಷದ ಮಗಳ ಮದುವೆಗೆ ಅವಕಾಶ ನೀಡುತ್ತಾರಾ ಎಂದು ಪ್ರಶ್ನಿಸಿದರು. ಇರಾಕಿ ಸಮುದಾಯವು ಈ ಪ್ರಸ್ತಾಪಗಳನ್ನು ನಿಸ್ಸಂದೇಹವಾಗಿ ತಿರಸ್ಕರಿಸುತ್ತದೆ ಎಂದು ಅವರು ಹೇಳಿದರು.

ಈ ಮಸೂದೆಯನ್ನು ವಿರೋಧಿಸುವ ಜನರು ಸಂಸತ್ತಿನಲ್ಲಿ ಅಂಗೀಕಾರಗೊಂಡರೆ ಅದು ಮಹಿಳೆಯರ ಹಕ್ಕುಗಳು ಮತ್ತು ಲಿಂಗ ಸಮಾನತೆಯನ್ನು ನಾಶಪಡಿಸುತ್ತದೆ ಎಂದು ಹೇಳುತ್ತಾರೆ. ಪ್ರಗತಿಯನ್ನೂ ನಿಲ್ಲಿಸುತ್ತದೆ. ಮಾನವ ಹಕ್ಕುಗಳ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಮತ್ತು ಮಹಿಳಾ ಗುಂಪುಗಳು ಈ ಮಸೂದೆಯನ್ನು ವಿರೋಧಿಸಿದವು, ಇದು ಯುವತಿಯರ ಶಿಕ್ಷಣ, ಆರೋಗ್ಯ ಮತ್ತು ಕಲ್ಯಾಣದ ಮೇಲೆ ನಿರ್ಬಂಧಗಳನ್ನು ಹಾಕುತ್ತದೆ ಎಂದು ಹೇಳಿದರು.

ಈ ಬಾಲ್ಯ ವಿವಾಹಗಳು ಮಕ್ಕಳನ್ನು ಶಾಲೆಯಿಂದ ಹೊರಗುಳಿಯುವುದು, ಅಕಾಲಿಕ ಗರ್ಭಧಾರಣೆ ಮತ್ತು ಕೌಟುಂಬಿಕ ಹಿಂಸಾಚಾರಕ್ಕೆ ಕಾರಣವಾಗುತ್ತವೆ ಎಂದು ಗುಂಪುಗಳು ವಾದಿಸಿವೆ. UNICEF ವರದಿಯ ಪ್ರಕಾರ, ಇರಾಕ್‌ನಲ್ಲಿ ಶೇ.28 ಹುಡುಗಿಯರು 18 ವರ್ಷಕ್ಕಿಂತ ಮೊದಲು ಮದುವೆಯಾಗುತ್ತಾರೆ. ದೇಶ ಮತ್ತಷ್ಟು ಹಿನ್ನಡೆಯಾಗಲಿದೆ ಎಂದು ಹ್ಯೂಮನ್ ರೈಟ್ಸ್ ವಾಚ್ ಸಂಶೋಧಕಿ ಸಾರಾ ಸಂಬಾರ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?