Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದಲ್ಲಿ 20 ಹಮಾಸ್​ ಉಗ್ರರನ್ನು ವಶಕ್ಕೆ ಪಡೆದಿರುವ ಇಸ್ರೇಲ್ ಸೇನೆ

ಗಾಜಾಪಟ್ಟಿಯಲ್ಲಿ ಇಸ್ರೇಲ್​ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದಿರುವುದಾಗಿ ಸೇನೆ ತಿಳಿಸಿದೆ. 20 ಹಮಾಸ್ ಸದಸ್ಯರನ್ನು ಗಾಜಾ ಪಟ್ಟಿಯ ಹೃದಯ ಭಾಗದಲ್ಲಿ ಬಂಧಿಸಲಾಗಿದೆ. ಇನ್ನು ಗಾಜಾದ ಅತಿದೊಡ್ಡ ಆಸ್ಪತ್ರೆಯಲ್ಲಿ ಆರೋಗ್ಯಾಧಿಕಾರಿಗಳು ಮತ್ತು ಜನರು ಸಿಲುಕಿದ್ದಾರೆ ಅವರ ರಕ್ಷಣೆಗೆ ಇಸ್ರೇಲ್ ಸಹಾಯ ಮಾಡುತ್ತಿದೆ ಎನ್ನುವ ವದಂತಿಯನ್ನು ತಿರಸ್ಕರಿಸಲಾಗಿದೆ.

ಗಾಜಾದಲ್ಲಿ 20 ಹಮಾಸ್​ ಉಗ್ರರನ್ನು ವಶಕ್ಕೆ ಪಡೆದಿರುವ ಇಸ್ರೇಲ್ ಸೇನೆ
ಹಮಾಸ್
Follow us
ನಯನಾ ರಾಜೀವ್
|

Updated on: Nov 13, 2023 | 8:19 AM

ಗಾಜಾಪಟ್ಟಿಯಲ್ಲಿ ಇಸ್ರೇಲ್​ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದಿರುವುದಾಗಿ ಸೇನೆ ತಿಳಿಸಿದೆ. 20 ಹಮಾಸ್ ಸದಸ್ಯರನ್ನು ಗಾಜಾ ಪಟ್ಟಿಯ ಹೃದಯ ಭಾಗದಲ್ಲಿ ಬಂಧಿಸಲಾಗಿದೆ. ಇನ್ನು ಗಾಜಾದ ಅತಿದೊಡ್ಡ ಆಸ್ಪತ್ರೆಯಲ್ಲಿ ಆರೋಗ್ಯಾಧಿಕಾರಿಗಳು ಮತ್ತು ಜನರು ಸಿಲುಕಿದ್ದಾರೆ ಅವರ ರಕ್ಷಣೆಗೆ ಇಸ್ರೇಲ್ ಸಹಾಯ ಮಾಡುತ್ತಿದೆ ಎನ್ನುವ ವದಂತಿಯನ್ನು ತಿರಸ್ಕರಿಸಲಾಗಿದೆ.

ಇನ್​ಕ್ಯುಬೇಟರ್, ವಿದ್ಯುತ್ ಸೌಲಭ್ಯಗಳಿಲ್ಲದೆ ಹೋರಾಟ ಮುಂದುವರೆದಿದೆ ಎಂದು ಹೇಳಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5000 ರಾಕೆಟ್​ಗಳಿಂದ ದಾಳಿ ನಡೆಸಿದ್ದರು ಪರಿಣಾಮ 1,400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಇಸ್ರೇಲ್​ ಪ್ರತಿಯಾಗಿ ಗಾಜಾ ಮೇಲೆ ದಾಳಿ ನಡೆಸಿತು.

ಇದೀಗ ಹಲವು ರಾಷ್ಟ್ರಗಳು ಕದನ ವಿರಾಮವನ್ನು ಘೋಷಿಸುವಂತೆ ಇಸ್ರೇಲ್​ಗೆ ಮನವಿ ಮಾಡುತ್ತಿದ್ದಾರೆ. ಆದರೆ ಇಸ್ರೇಲ್​ ಮಾತ್ರ ಗಾಜಾದಲ್ಲಿ ಹಮಾಸ್​ನನ್ನು ಹತ್ತಿಕ್ಕುವವರೆಗೂ ಹಿಂದೆ ಸರಿಯುವ ಮಾತೇ ಇಲ್ಲ, ಯುದ್ಧವನ್ನು ಮುಂದುವರೆಸುತ್ತೇವೆ, ಹಮಾಸ್ ಉಗ್ರರು 240 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೂ ಯುದ್ಧ ಮುಂದುವರೆಯಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಓದಿ: ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 7 ಮಂದಿ ಒತ್ತೆಯಾಳುಗಳು ಸಾವು

ಯುದ್ಧವನ್ನು ಆರಂಭಿಸಿದವರು ನಾವಲ್ಲ ಆದರೆ ಅದನ್ನು ನಾವೇ ಅಂತ್ಯಗೊಳಿಸುತ್ತೇವೆ ಎಂದಿದ್ದಾರೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ಯುದ್ಧ ಮುಂದುವರೆದಿದ್ದು, ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ವೈಮಾನಿಕ ದಾಳಿ ಸೇರಿದಂತೆ ಬಾಂಬ್ ಸ್ಫೋಟಗಳು ನಡೆಯು ತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ತಿಳಿಸಿದ್ದಾರೆ.

ಆಸ್ಪತ್ರೆಯೊಳಗೆ ಶಸ್ತ್ರ ಚಿಕಿತ್ಸೆಯಾದ 600 ರೋಗಿಗಳು, 37 ರಿಂದ 40 ಶಿಶುಗಳು ಮತ್ತು 17 ಜನರು ತೀವ್ರ ನಿಗಾ ಘಟಕದಲ್ಲಿದ್ದು, ಅವರಿಗೆ ನೀರು, ವಿದ್ಯುತ್, ಆಹಾರ ಅಥವಾ ಇಂಟರ್​ನೆಟ್ ಯಾವುದೂ ಲಭ್ಯವಿಲ್ಲ ಎಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್