AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದಲ್ಲಿ 20 ಹಮಾಸ್​ ಉಗ್ರರನ್ನು ವಶಕ್ಕೆ ಪಡೆದಿರುವ ಇಸ್ರೇಲ್ ಸೇನೆ

ಗಾಜಾಪಟ್ಟಿಯಲ್ಲಿ ಇಸ್ರೇಲ್​ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದಿರುವುದಾಗಿ ಸೇನೆ ತಿಳಿಸಿದೆ. 20 ಹಮಾಸ್ ಸದಸ್ಯರನ್ನು ಗಾಜಾ ಪಟ್ಟಿಯ ಹೃದಯ ಭಾಗದಲ್ಲಿ ಬಂಧಿಸಲಾಗಿದೆ. ಇನ್ನು ಗಾಜಾದ ಅತಿದೊಡ್ಡ ಆಸ್ಪತ್ರೆಯಲ್ಲಿ ಆರೋಗ್ಯಾಧಿಕಾರಿಗಳು ಮತ್ತು ಜನರು ಸಿಲುಕಿದ್ದಾರೆ ಅವರ ರಕ್ಷಣೆಗೆ ಇಸ್ರೇಲ್ ಸಹಾಯ ಮಾಡುತ್ತಿದೆ ಎನ್ನುವ ವದಂತಿಯನ್ನು ತಿರಸ್ಕರಿಸಲಾಗಿದೆ.

ಗಾಜಾದಲ್ಲಿ 20 ಹಮಾಸ್​ ಉಗ್ರರನ್ನು ವಶಕ್ಕೆ ಪಡೆದಿರುವ ಇಸ್ರೇಲ್ ಸೇನೆ
ಹಮಾಸ್
ನಯನಾ ರಾಜೀವ್
|

Updated on: Nov 13, 2023 | 8:19 AM

Share

ಗಾಜಾಪಟ್ಟಿಯಲ್ಲಿ ಇಸ್ರೇಲ್​ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, 20 ಹಮಾಸ್ ಉಗ್ರರನ್ನು ವಶಕ್ಕೆ ಪಡೆದಿರುವುದಾಗಿ ಸೇನೆ ತಿಳಿಸಿದೆ. 20 ಹಮಾಸ್ ಸದಸ್ಯರನ್ನು ಗಾಜಾ ಪಟ್ಟಿಯ ಹೃದಯ ಭಾಗದಲ್ಲಿ ಬಂಧಿಸಲಾಗಿದೆ. ಇನ್ನು ಗಾಜಾದ ಅತಿದೊಡ್ಡ ಆಸ್ಪತ್ರೆಯಲ್ಲಿ ಆರೋಗ್ಯಾಧಿಕಾರಿಗಳು ಮತ್ತು ಜನರು ಸಿಲುಕಿದ್ದಾರೆ ಅವರ ರಕ್ಷಣೆಗೆ ಇಸ್ರೇಲ್ ಸಹಾಯ ಮಾಡುತ್ತಿದೆ ಎನ್ನುವ ವದಂತಿಯನ್ನು ತಿರಸ್ಕರಿಸಲಾಗಿದೆ.

ಇನ್​ಕ್ಯುಬೇಟರ್, ವಿದ್ಯುತ್ ಸೌಲಭ್ಯಗಳಿಲ್ಲದೆ ಹೋರಾಟ ಮುಂದುವರೆದಿದೆ ಎಂದು ಹೇಳಿದ್ದಾರೆ. ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5000 ರಾಕೆಟ್​ಗಳಿಂದ ದಾಳಿ ನಡೆಸಿದ್ದರು ಪರಿಣಾಮ 1,400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಇಸ್ರೇಲ್​ ಪ್ರತಿಯಾಗಿ ಗಾಜಾ ಮೇಲೆ ದಾಳಿ ನಡೆಸಿತು.

ಇದೀಗ ಹಲವು ರಾಷ್ಟ್ರಗಳು ಕದನ ವಿರಾಮವನ್ನು ಘೋಷಿಸುವಂತೆ ಇಸ್ರೇಲ್​ಗೆ ಮನವಿ ಮಾಡುತ್ತಿದ್ದಾರೆ. ಆದರೆ ಇಸ್ರೇಲ್​ ಮಾತ್ರ ಗಾಜಾದಲ್ಲಿ ಹಮಾಸ್​ನನ್ನು ಹತ್ತಿಕ್ಕುವವರೆಗೂ ಹಿಂದೆ ಸರಿಯುವ ಮಾತೇ ಇಲ್ಲ, ಯುದ್ಧವನ್ನು ಮುಂದುವರೆಸುತ್ತೇವೆ, ಹಮಾಸ್ ಉಗ್ರರು 240 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವವರೆಗೂ ಯುದ್ಧ ಮುಂದುವರೆಯಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಓದಿ: ಗಾಜಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ: 7 ಮಂದಿ ಒತ್ತೆಯಾಳುಗಳು ಸಾವು

ಯುದ್ಧವನ್ನು ಆರಂಭಿಸಿದವರು ನಾವಲ್ಲ ಆದರೆ ಅದನ್ನು ನಾವೇ ಅಂತ್ಯಗೊಳಿಸುತ್ತೇವೆ ಎಂದಿದ್ದಾರೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ಯುದ್ಧ ಮುಂದುವರೆದಿದ್ದು, ಗಾಜಾದ ಅತಿದೊಡ್ಡ ಆಸ್ಪತ್ರೆಯಾದ ಅಲ್-ಶಿಫಾವನ್ನು ಇಸ್ರೇಲ್ ಸೇನೆ ಸುತ್ತುವರೆದಿದ್ದು, ಆಸ್ಪತ್ರೆ ಸಮೀಪದಲ್ಲಿ ವೈಮಾನಿಕ ದಾಳಿ ಸೇರಿದಂತೆ ಬಾಂಬ್ ಸ್ಫೋಟಗಳು ನಡೆಯು ತ್ತಿರುವುದರಿಂದ ಆಸ್ಪತ್ರೆಯ ಕಾರ್ಡಿಯಾಕ್ ವಾರ್ಡ್ ನಾಶವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮೊಹಮ್ಮದ್ ಅಬು ಸಲ್ಮಿಯಾ ತಿಳಿಸಿದ್ದಾರೆ.

ಆಸ್ಪತ್ರೆಯೊಳಗೆ ಶಸ್ತ್ರ ಚಿಕಿತ್ಸೆಯಾದ 600 ರೋಗಿಗಳು, 37 ರಿಂದ 40 ಶಿಶುಗಳು ಮತ್ತು 17 ಜನರು ತೀವ್ರ ನಿಗಾ ಘಟಕದಲ್ಲಿದ್ದು, ಅವರಿಗೆ ನೀರು, ವಿದ್ಯುತ್, ಆಹಾರ ಅಥವಾ ಇಂಟರ್​ನೆಟ್ ಯಾವುದೂ ಲಭ್ಯವಿಲ್ಲ ಎಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ