AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pneumonia: ಚೀನಾದಲ್ಲಿ ಕೊರೊನಾ ಬಳಿಕ ನಿಗೂಢ ನ್ಯುಮೋನಿಯಾದಿಂದ ತತ್ತರಿಸಿದ ಜನ, ಶಾಲೆಗಳು ಬಂದ್

ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿರುವ ಚೀನಾಗೆ ಈಗ ಮತ್ತೊಂದು ಬರ ಸಿಡಿಲು ಎರಗಿದಂತಾಗಿದೆ. ಹೊಸ ರೋಗವು ದೊಡ್ಡ ಪ್ರಮಾಣದಲ್ಲಿ ಕಾಡುತ್ತಿದೆ. ಇಲ್ಲಿನ ಶಾಲೆಗಳಲ್ಲಿ ನಿಗೂಢ ನ್ಯುಮೋನಿಯಾ ವೇಗವಾಗಿ ಹರಡುತ್ತಿದೆ. ಈ ಆತಂಕಕಾರಿ ಪರಿಸ್ಥಿತಿ ಕೋವಿಡ್ ಬಿಕ್ಕಟ್ಟಿನ ಆರಂಭದ ದಿನಗಳನ್ನು ನೆನಪಿಸುತ್ತದೆ.

Pneumonia: ಚೀನಾದಲ್ಲಿ ಕೊರೊನಾ ಬಳಿಕ ನಿಗೂಢ ನ್ಯುಮೋನಿಯಾದಿಂದ ತತ್ತರಿಸಿದ ಜನ, ಶಾಲೆಗಳು ಬಂದ್
ಆಸ್ಪತ್ರೆ
ನಯನಾ ರಾಜೀವ್
|

Updated on: Nov 23, 2023 | 8:07 AM

Share

ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿರುವ ಚೀನಾಗೆ ಈಗ ಮತ್ತೊಂದು ಬರ ಸಿಡಿಲು ಎರಗಿದಂತಾಗಿದೆ. ಹೊಸ ರೋಗವು ದೊಡ್ಡ ಪ್ರಮಾಣದಲ್ಲಿ ಕಾಡುತ್ತಿದೆ. ಇಲ್ಲಿನ ಶಾಲೆಗಳಲ್ಲಿ ನಿಗೂಢ ನ್ಯುಮೋನಿಯಾ(Pneumonia) ವೇಗವಾಗಿ ಹರಡುತ್ತಿದೆ. ಈ ಆತಂಕಕಾರಿ ಪರಿಸ್ಥಿತಿ ಕೋವಿಡ್ ಬಿಕ್ಕಟ್ಟಿನ ಆರಂಭದ ದಿನಗಳನ್ನು ನೆನಪಿಸುತ್ತದೆ.

ಈಶಾನ್ಯಕ್ಕೆ 500 ಮೈಲುಗಳಷ್ಟು ದೂರದಲ್ಲಿರುವ ಬೀಜಿಂಗ್ ಮತ್ತು ಲಿಯಾನಿಂಗ್‌ನಲ್ಲಿರುವ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ದಾಖಲಿಸಲಾಗುತ್ತಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಈ ನಿಗೂಢ ನ್ಯುಮೋನಿಯಾ ಏಕಾಏಕಿ ಹೆಚ್ಚಿದ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ.

ಈ ನಿಗೂಢ ನ್ಯುಮೋನಿಯಾದಿಂದ ಬಳಲುತ್ತಿರುವ ಮಕ್ಕಳಲ್ಲಿ ಶ್ವಾಸಕೋಶದಲ್ಲಿ ಊತ ಮತ್ತು ಅಧಿಕ ಜ್ವರ ಸೇರಿದಂತೆ ಅಸಾಮಾನ್ಯ ಲಕ್ಷಣಗಳು ಕಂಡುಬರುತ್ತಿವೆ. ಕೆಮ್ಮು ಮತ್ತು ಜ್ವರ, ಆರ್‌ಎಸ್‌ವಿ ಮತ್ತು ಉಸಿರಾಟದ ಕಾಯಿಲೆಗಳಿಗೆ ಸಂಬಂಧಿಸಿದ ಇತರ ಲಕ್ಷಣಗಳು ಆ ಮಕ್ಕಳಲ್ಲಿ ಕಂಡುಬರುತ್ತಿಲ್ಲ.

ಮತ್ತಷ್ಟು ಓದಿ: Child Health: ಮಕ್ಕಳಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ

ಯಾವಾಗ ಆರಂಭವಾಯಿತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಮೈಕೋಪ್ಲಾಸ್ಮಾ ನ್ಯುಮೋನಿಯಾ ಅಥವಾ ವಾಕಿಂಗ್ ನ್ಯುಮೋನಿಯಾ ಇರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದು, ಜನರು ಜಾಗರೂಕರಾಗಿರಲು ಸೂಚಿಸಿದೆ. ಇದರೊಂದಿಗೆ, ವಿಶ್ವ ಆರೋಗ್ಯ ಸಂಸ್ಥೆಯು ಮಕ್ಕಳಲ್ಲಿ ಹರಡುವ ಈ ರೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಚೀನಾದ ಆರೋಗ್ಯ ಅಧಿಕಾರಿಗಳನ್ನು ಕೇಳಿದೆ.

ಬೀಜಿಂಗ್‌ನ ಲಿಯಾನಿಂಗ್‌ನಲ್ಲಿರುವ ಮಕ್ಕಳ ಆಸ್ಪತ್ರೆಗಳು ಮಕ್ಕಳಿಂದ ತುಂಬಿವೆ. ಹಲವು ನಗರಗಳಲ್ಲಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮ ಮಕ್ಕಳಿಗೆ ಚಿಕಿತ್ಸೆ ಕೊಡಿಸುವ ಬಗ್ಗೆ ಚಿಂತಿತರಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (WHO) ಈ ಉಸಿರಾಟದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಜನರು ವಿವಿಧ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!