AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾಕ್​​ನಲ್ಲಿ ಐಸಿಸ್​ ಉಗ್ರರಿಂದ ಭೀಕರ ದಾಳಿ; 13 ಪೊಲೀಸರು ಸಾವು, ಮೂವರಿಗೆ ಗಾಯ

Attack on Iraq: ಇರಾಕ್​ ಸೇನೆ ಮತ್ತು ಪೊಲೀಸರ ಮೇಲೆ ಸದಾ ಜಿಹಾದಿಗಳ ಗುಂಪು ದಾಳಿ ನಡೆಸುತ್ತಿರುತ್ತದೆ. ಆದರೆ ಇದು ಈ ವರ್ಷದ ಅತ್ಯಂತ ಭೀಕರ ದಾಳಿ ಎಂದು ಹೇಳಲಾಗಿದೆ.

ಇರಾಕ್​​ನಲ್ಲಿ ಐಸಿಸ್​ ಉಗ್ರರಿಂದ ಭೀಕರ ದಾಳಿ; 13 ಪೊಲೀಸರು ಸಾವು, ಮೂವರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 05, 2021 | 2:31 PM

Share

ಇರಾಕ್​​ನ ಉತ್ತರದ ಪ್ರದೇಶ ಕಿರ್ಕುಕ್​ ಸಮೀಪದ ಚೆಕ್​ಪಾಯಿಂಟ್​ ಮೇಲೆ ಐಸಿಸ್​ ಉಗ್ರರು (ISIS Group) ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸುಮಾರು 13 ಪೊಲೀಸರು ಹತರಾಗಿದ್ದಾರೆ ಎಂದು ಇರಾಕ್​ನ ವೈದ್ಯಕೀಯ ಮತ್ತು ಭದ್ರತಾ ಮೂಲಗಳು ತಿಳಿಸಿವೆ. ಕಿರ್ಕುಕ್​​ ನಗರದ ದಕ್ಷಿಣ ಭಾಗದಲ್ಲಿ ದಾಳಿ ನಡೆಸಿದ್ದಾರೆ. ಇರಾಕ್​ ಸೇನೆ ಮತ್ತು ಪೊಲೀಸರ ಮೇಲೆ ಸದಾ ಜಿಹಾದಿಗಳ ಗುಂಪು ದಾಳಿ ನಡೆಸುತ್ತಿರುತ್ತದೆ. ಆದರೆ ಈ ದಾಳಿ, ಪ್ರಸಕ್ತ ವರ್ಷದ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ದಾಳಿ ಎಂದು ಇರಾಕಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.  

ಕಿರ್ಕುಕ್​ ನಗರದ ದಕ್ಷಿಣದಲ್ಲಿ ಸುಮಾರು 65 ಕಿಮೀ ದೂರದಲ್ಲಿರುವ ಆಲ್​ ರಶದ್​ ಎಂಬ ಪ್ರದೇಶದಲ್ಲಿರುವ ಚೆಕ್​ಪಾಯಿಂಟ್ ಮೇಲೆ ಮಧ್ಯರಾತ್ರಿ ಐಸಿಸ್​ ಉಗ್ರರು ದಾಳಿ ನಡೆಸಿದ್ದಾರೆ.   ಈ ಬಾರಿ ಐಸಿಸ್​ ಸಂಘಟನೆ ಫೆಡರಲ್​ ಪೊಲೀಸ್​ ಚೆಕ್​ಪಾಯಿಂಟ್​ನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದು ಐಸಿಸ್​ ದಾಳಿ ಎಂಬುದು ಸ್ಪಷ್ಟವಾಗಿದೆ..ಆದರೆ ಆ ಸಂಘಟನೆ ಇನ್ನೂ ಹೊಣೆ ಹೊತ್ತುಕೊಂಡಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಇರಾಕ್​ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇರಾಕ್​​ನಲ್ಲಿ ಐಸಿಸ್​ ದಾಳಿ ಹೊಸದಲ್ಲ. ಇನ್ನು ಸುನ್ನಿ ಉಗ್ರರನ್ನು ನಾವು 2017ರ ಅಂತ್ಯದಲ್ಲಿ  ಸೋಲಿಸಿದ್ದೇವೆ ಎಂದು ಇರಾಕಿ ಸರ್ಕಾರ ಹೇಳಿಕೊಂಡಿದ್ದರೂ, ಆ ಸಂಘಟನೆ ಸ್ಲೀಪರ್ ಸೆಲ್​ಗಳನ್ನು ಉಳಿಸಿಕೊಂಡಿದೆ ಮತ್ತು ಆಗಾಗ ಇರಾಕ್​ನ ಸೇನಾಪಡೆ, ಪೊಲೀಸರ ಮೇಲೆ ದಾಳಿ ಮುಂದುವರಿಸುತ್ತಲೇ ಇದೆ.  ಜುಲೈ 19ರಂದು ಐಸಿಸ್​ ಸಂಘಟನೆ ಬಾಗ್ದಾದ್‌ನ ಶಿಯಾ ಉಪನಗರವಾದ ಸದರ್ ನಗರದ ಅಲ್-ವೊಹೈಲಾಟ್ ಮಾರುಕಟ್ಟೆ ಮೇಲೆ ಬಾಂಬ್ ದಾಳಿ ನಡೆಸಿ, ಅದರಲ್ಲಿ 30 ಜನರು ಹತರಾಗಿದ್ದರು.

ಇದನ್ನೂ ಓದಿ: ಪ್ರತಿದಿನ 5ಜಿಬಿ ಡೇಟಾ: ಜಿಯೋ, ಏರ್ಟೆಲ್​ಗೆ ಪೈಪೋಟಿ ನೀಡುತ್ತಿರುವ ಬಿಎಸ್​ಎನ್​ಎಲ್

ಯಾದಗಿರಿ: ಆರ್ಥಿಕ ಸಂಕಷ್ಟದಲ್ಲಿರುವ ಶಿಕ್ಷಕರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿ

Published On - 2:14 pm, Sun, 5 September 21

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್