AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾಕ್​​ನಲ್ಲಿ ಐಸಿಸ್​ ಉಗ್ರರಿಂದ ಭೀಕರ ದಾಳಿ; 13 ಪೊಲೀಸರು ಸಾವು, ಮೂವರಿಗೆ ಗಾಯ

Attack on Iraq: ಇರಾಕ್​ ಸೇನೆ ಮತ್ತು ಪೊಲೀಸರ ಮೇಲೆ ಸದಾ ಜಿಹಾದಿಗಳ ಗುಂಪು ದಾಳಿ ನಡೆಸುತ್ತಿರುತ್ತದೆ. ಆದರೆ ಇದು ಈ ವರ್ಷದ ಅತ್ಯಂತ ಭೀಕರ ದಾಳಿ ಎಂದು ಹೇಳಲಾಗಿದೆ.

ಇರಾಕ್​​ನಲ್ಲಿ ಐಸಿಸ್​ ಉಗ್ರರಿಂದ ಭೀಕರ ದಾಳಿ; 13 ಪೊಲೀಸರು ಸಾವು, ಮೂವರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 05, 2021 | 2:31 PM

Share

ಇರಾಕ್​​ನ ಉತ್ತರದ ಪ್ರದೇಶ ಕಿರ್ಕುಕ್​ ಸಮೀಪದ ಚೆಕ್​ಪಾಯಿಂಟ್​ ಮೇಲೆ ಐಸಿಸ್​ ಉಗ್ರರು (ISIS Group) ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸುಮಾರು 13 ಪೊಲೀಸರು ಹತರಾಗಿದ್ದಾರೆ ಎಂದು ಇರಾಕ್​ನ ವೈದ್ಯಕೀಯ ಮತ್ತು ಭದ್ರತಾ ಮೂಲಗಳು ತಿಳಿಸಿವೆ. ಕಿರ್ಕುಕ್​​ ನಗರದ ದಕ್ಷಿಣ ಭಾಗದಲ್ಲಿ ದಾಳಿ ನಡೆಸಿದ್ದಾರೆ. ಇರಾಕ್​ ಸೇನೆ ಮತ್ತು ಪೊಲೀಸರ ಮೇಲೆ ಸದಾ ಜಿಹಾದಿಗಳ ಗುಂಪು ದಾಳಿ ನಡೆಸುತ್ತಿರುತ್ತದೆ. ಆದರೆ ಈ ದಾಳಿ, ಪ್ರಸಕ್ತ ವರ್ಷದ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ದಾಳಿ ಎಂದು ಇರಾಕಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.  

ಕಿರ್ಕುಕ್​ ನಗರದ ದಕ್ಷಿಣದಲ್ಲಿ ಸುಮಾರು 65 ಕಿಮೀ ದೂರದಲ್ಲಿರುವ ಆಲ್​ ರಶದ್​ ಎಂಬ ಪ್ರದೇಶದಲ್ಲಿರುವ ಚೆಕ್​ಪಾಯಿಂಟ್ ಮೇಲೆ ಮಧ್ಯರಾತ್ರಿ ಐಸಿಸ್​ ಉಗ್ರರು ದಾಳಿ ನಡೆಸಿದ್ದಾರೆ.   ಈ ಬಾರಿ ಐಸಿಸ್​ ಸಂಘಟನೆ ಫೆಡರಲ್​ ಪೊಲೀಸ್​ ಚೆಕ್​ಪಾಯಿಂಟ್​ನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದು ಐಸಿಸ್​ ದಾಳಿ ಎಂಬುದು ಸ್ಪಷ್ಟವಾಗಿದೆ..ಆದರೆ ಆ ಸಂಘಟನೆ ಇನ್ನೂ ಹೊಣೆ ಹೊತ್ತುಕೊಂಡಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಇರಾಕ್​ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇರಾಕ್​​ನಲ್ಲಿ ಐಸಿಸ್​ ದಾಳಿ ಹೊಸದಲ್ಲ. ಇನ್ನು ಸುನ್ನಿ ಉಗ್ರರನ್ನು ನಾವು 2017ರ ಅಂತ್ಯದಲ್ಲಿ  ಸೋಲಿಸಿದ್ದೇವೆ ಎಂದು ಇರಾಕಿ ಸರ್ಕಾರ ಹೇಳಿಕೊಂಡಿದ್ದರೂ, ಆ ಸಂಘಟನೆ ಸ್ಲೀಪರ್ ಸೆಲ್​ಗಳನ್ನು ಉಳಿಸಿಕೊಂಡಿದೆ ಮತ್ತು ಆಗಾಗ ಇರಾಕ್​ನ ಸೇನಾಪಡೆ, ಪೊಲೀಸರ ಮೇಲೆ ದಾಳಿ ಮುಂದುವರಿಸುತ್ತಲೇ ಇದೆ.  ಜುಲೈ 19ರಂದು ಐಸಿಸ್​ ಸಂಘಟನೆ ಬಾಗ್ದಾದ್‌ನ ಶಿಯಾ ಉಪನಗರವಾದ ಸದರ್ ನಗರದ ಅಲ್-ವೊಹೈಲಾಟ್ ಮಾರುಕಟ್ಟೆ ಮೇಲೆ ಬಾಂಬ್ ದಾಳಿ ನಡೆಸಿ, ಅದರಲ್ಲಿ 30 ಜನರು ಹತರಾಗಿದ್ದರು.

ಇದನ್ನೂ ಓದಿ: ಪ್ರತಿದಿನ 5ಜಿಬಿ ಡೇಟಾ: ಜಿಯೋ, ಏರ್ಟೆಲ್​ಗೆ ಪೈಪೋಟಿ ನೀಡುತ್ತಿರುವ ಬಿಎಸ್​ಎನ್​ಎಲ್

ಯಾದಗಿರಿ: ಆರ್ಥಿಕ ಸಂಕಷ್ಟದಲ್ಲಿರುವ ಶಿಕ್ಷಕರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿ

Published On - 2:14 pm, Sun, 5 September 21

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್