AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾಕ್​​ನಲ್ಲಿ ಐಸಿಸ್​ ಉಗ್ರರಿಂದ ಭೀಕರ ದಾಳಿ; 13 ಪೊಲೀಸರು ಸಾವು, ಮೂವರಿಗೆ ಗಾಯ

Attack on Iraq: ಇರಾಕ್​ ಸೇನೆ ಮತ್ತು ಪೊಲೀಸರ ಮೇಲೆ ಸದಾ ಜಿಹಾದಿಗಳ ಗುಂಪು ದಾಳಿ ನಡೆಸುತ್ತಿರುತ್ತದೆ. ಆದರೆ ಇದು ಈ ವರ್ಷದ ಅತ್ಯಂತ ಭೀಕರ ದಾಳಿ ಎಂದು ಹೇಳಲಾಗಿದೆ.

ಇರಾಕ್​​ನಲ್ಲಿ ಐಸಿಸ್​ ಉಗ್ರರಿಂದ ಭೀಕರ ದಾಳಿ; 13 ಪೊಲೀಸರು ಸಾವು, ಮೂವರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Sep 05, 2021 | 2:31 PM

Share

ಇರಾಕ್​​ನ ಉತ್ತರದ ಪ್ರದೇಶ ಕಿರ್ಕುಕ್​ ಸಮೀಪದ ಚೆಕ್​ಪಾಯಿಂಟ್​ ಮೇಲೆ ಐಸಿಸ್​ ಉಗ್ರರು (ISIS Group) ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸುಮಾರು 13 ಪೊಲೀಸರು ಹತರಾಗಿದ್ದಾರೆ ಎಂದು ಇರಾಕ್​ನ ವೈದ್ಯಕೀಯ ಮತ್ತು ಭದ್ರತಾ ಮೂಲಗಳು ತಿಳಿಸಿವೆ. ಕಿರ್ಕುಕ್​​ ನಗರದ ದಕ್ಷಿಣ ಭಾಗದಲ್ಲಿ ದಾಳಿ ನಡೆಸಿದ್ದಾರೆ. ಇರಾಕ್​ ಸೇನೆ ಮತ್ತು ಪೊಲೀಸರ ಮೇಲೆ ಸದಾ ಜಿಹಾದಿಗಳ ಗುಂಪು ದಾಳಿ ನಡೆಸುತ್ತಿರುತ್ತದೆ. ಆದರೆ ಈ ದಾಳಿ, ಪ್ರಸಕ್ತ ವರ್ಷದ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ದಾಳಿ ಎಂದು ಇರಾಕಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.  

ಕಿರ್ಕುಕ್​ ನಗರದ ದಕ್ಷಿಣದಲ್ಲಿ ಸುಮಾರು 65 ಕಿಮೀ ದೂರದಲ್ಲಿರುವ ಆಲ್​ ರಶದ್​ ಎಂಬ ಪ್ರದೇಶದಲ್ಲಿರುವ ಚೆಕ್​ಪಾಯಿಂಟ್ ಮೇಲೆ ಮಧ್ಯರಾತ್ರಿ ಐಸಿಸ್​ ಉಗ್ರರು ದಾಳಿ ನಡೆಸಿದ್ದಾರೆ.   ಈ ಬಾರಿ ಐಸಿಸ್​ ಸಂಘಟನೆ ಫೆಡರಲ್​ ಪೊಲೀಸ್​ ಚೆಕ್​ಪಾಯಿಂಟ್​ನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದು ಐಸಿಸ್​ ದಾಳಿ ಎಂಬುದು ಸ್ಪಷ್ಟವಾಗಿದೆ..ಆದರೆ ಆ ಸಂಘಟನೆ ಇನ್ನೂ ಹೊಣೆ ಹೊತ್ತುಕೊಂಡಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಇರಾಕ್​ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇರಾಕ್​​ನಲ್ಲಿ ಐಸಿಸ್​ ದಾಳಿ ಹೊಸದಲ್ಲ. ಇನ್ನು ಸುನ್ನಿ ಉಗ್ರರನ್ನು ನಾವು 2017ರ ಅಂತ್ಯದಲ್ಲಿ  ಸೋಲಿಸಿದ್ದೇವೆ ಎಂದು ಇರಾಕಿ ಸರ್ಕಾರ ಹೇಳಿಕೊಂಡಿದ್ದರೂ, ಆ ಸಂಘಟನೆ ಸ್ಲೀಪರ್ ಸೆಲ್​ಗಳನ್ನು ಉಳಿಸಿಕೊಂಡಿದೆ ಮತ್ತು ಆಗಾಗ ಇರಾಕ್​ನ ಸೇನಾಪಡೆ, ಪೊಲೀಸರ ಮೇಲೆ ದಾಳಿ ಮುಂದುವರಿಸುತ್ತಲೇ ಇದೆ.  ಜುಲೈ 19ರಂದು ಐಸಿಸ್​ ಸಂಘಟನೆ ಬಾಗ್ದಾದ್‌ನ ಶಿಯಾ ಉಪನಗರವಾದ ಸದರ್ ನಗರದ ಅಲ್-ವೊಹೈಲಾಟ್ ಮಾರುಕಟ್ಟೆ ಮೇಲೆ ಬಾಂಬ್ ದಾಳಿ ನಡೆಸಿ, ಅದರಲ್ಲಿ 30 ಜನರು ಹತರಾಗಿದ್ದರು.

ಇದನ್ನೂ ಓದಿ: ಪ್ರತಿದಿನ 5ಜಿಬಿ ಡೇಟಾ: ಜಿಯೋ, ಏರ್ಟೆಲ್​ಗೆ ಪೈಪೋಟಿ ನೀಡುತ್ತಿರುವ ಬಿಎಸ್​ಎನ್​ಎಲ್

ಯಾದಗಿರಿ: ಆರ್ಥಿಕ ಸಂಕಷ್ಟದಲ್ಲಿರುವ ಶಿಕ್ಷಕರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿ

Published On - 2:14 pm, Sun, 5 September 21

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!