AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಢಾಕಾದಲ್ಲಿ ಇಸ್ಕಾನ್ ದೇವಾಲಯ ಧ್ವಂಸಗೊಳಿಸಿದ ದುಷ್ಕರ್ಮಿಗಳ ಗುಂಪು; ಮೂವರು ಭಕ್ತರಿಗೆ ಗಾಯ

ಹಾಜಿ ಸೈಫುಲ್ಲಾ ನೇತೃತ್ವದ ಗುಂಪು ಢಾಕಾದ ವಾರಿಯಲ್ಲಿರುವ ಇಸ್ಕಾನ್ ದೇವಸ್ಥಾನದೊಳಗೆ ‘ನಾರಾ-ಎ-ತಕ್ಬೀರ್’ ಎಂದು ಪಠಿಸುತ್ತಾ  ನುಗ್ಗಿ ದೇವಸ್ಥಾನದೊಳಗೆ ಇದ್ದ ಜನರ ಮೇಲೆ ಹಲ್ಲೆ ನಡೆಸಿತು.

ಢಾಕಾದಲ್ಲಿ ಇಸ್ಕಾನ್ ದೇವಾಲಯ ಧ್ವಂಸಗೊಳಿಸಿದ ದುಷ್ಕರ್ಮಿಗಳ ಗುಂಪು; ಮೂವರು ಭಕ್ತರಿಗೆ ಗಾಯ
ಇಸ್ಕಾನ್ ದೇವಾಲಯ ಧ್ವಂಸ ಮಾಡುತ್ತಿರುವ ದೃಶ್ಯ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Mar 18, 2022 | 4:19 PM

Share

ಢಾಕಾ: ಬಾಂಗ್ಲಾದೇಶದ (Bangladesh) ರಾಜಧಾನಿ ಢಾಕಾದಲ್ಲಿ ಹಿಂದೂ ದೇವಾಲಯಕ್ಕೆ ನುಗ್ಗಿದ ಗುಂಪೊಂದು ವಿಗ್ರಹಗಳನ್ನು ಅಪವಿತ್ರಗೊಳಿಸಿ ದೇವಾಲಯದ ಆವರಣಕ್ಕೆ ಹಾನಿ ಮಾಡಿದೆ. ಹಾಜಿ ಸೈಫುಲ್ಲಾ ನೇತೃತ್ವದ ಗುಂಪು ಢಾಕಾದ ವಾರಿಯಲ್ಲಿರುವ ಇಸ್ಕಾನ್ (ISKCON) ದೇವಸ್ಥಾನದೊಳಗೆ ‘ನಾರಾ-ಎ-ತಕ್ಬೀರ್’ ಎಂದು ಪಠಿಸುತ್ತಾ  ನುಗ್ಗಿ ದೇವಸ್ಥಾನದೊಳಗೆ ಇದ್ದ ಜನರ ಮೇಲೆ ಹಲ್ಲೆ ನಡೆಸಿತು. ಈ ಗುಂಪು 200 ಕ್ಕೂ ಹೆಚ್ಚು ದುಷ್ಕರ್ಮಿಗಳನ್ನು ಒಳಗೊಂಡಿತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಹೋಳಿ ಹಬ್ಬದ ಪೂರ್ವಭಾವಿಯಾಗಿ ಗೌರ ಪೂರ್ಣಿಮಾ ಆಚರಣೆಗೆ ಭಕ್ತರು ಸಿದ್ಧತೆ ನಡೆಸುತ್ತಿದ್ದಾಗ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ಬಂದು ಅಲ್ಲಿದ್ದವರೊಂದಿ ಗೆಮಾತಿನ ಚಕಮಕಿ ನಡೆಸಿತು ಎಂದು ಈ ಬಗ್ಗೆ ತಿಳಿದಿರುವ ಸಿಎನ್ಎನ್ ನ್ಯೂಸ್ 18ಗೆ ತಿಳಿಸಿದ್ದಾರೆ. ಈ ವೇಳೆ ನಡೆದ ಗಲಾಟೆಯಲ್ಲಿ ಮೂವರು ಭಕ್ತರು ಗಾಯಗೊಂಡಿದ್ದಾರೆ.  ಪೊಲೀಸರು ಪರಿಸ್ಥಿತಿಯನ್ನು ಕೈ ಮೀರದಂತೆ ನಿಯಂತ್ರಿಸಿದ್ದಾರೆ ಎಂದು ಇಸ್ಕಾನ್ ಅಧಿಕಾರಿಗಳು ಸಿಎನ್ಎನ್ ನ್ಯೂಸ್ 18ಗೆ ತಿಳಿಸಿದ್ದಾರೆ.  ಆದರೆ ಕಳೆದ ಕೆಲವು ವರ್ಷಗಳಿಂದ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ದಾಳಿಗಳು ಹೆಚ್ಚುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಹಿಂದೂಗಳ ಮೇಲಿನ ದಾಳಿಗಳು ಹಿಂದೂ ಮತ್ತು ಇತರ ಅಲ್ಪಸಂಖ್ಯಾತರಲ್ಲಿ ಕಳವಳವನ್ನುಂಟುಮಾಡಿವೆ . 2021ರಲ್ಲಿ ಕೊಮಿಲ್ಲಾದಲ್ಲಿನ ನಾನುವಾರ್ ದಿಘಿ  ಲೇಕ್​​ನಲ್ಲಿರುವ  ದುರ್ಗಾಪೂಜಾ ಸ್ಥಳಗಳು ಮತ್ತು  ಪಂಡಾಲ್ ಮೇಲೆ ಮುಸ್ಲಿಂ ಮೂಲಭೂತವಾದಿಗಳ ನೇತೃತ್ವದ ಮತ್ತೊಂದು ಗುಂಪೊಂದು ದಾಳಿ ಮಾಡಿತ್ತು. ಬಾಂಗ್ಲಾದೇಶ ಸರ್ಕಾರವು ನಂತರದ ದಿನಗಳಲ್ಲಿ ನೂರಾರು ಮಂದಿಯವನ್ನು ಬಂಧಿಸಿದೆ. ಆದರೆ ಅಲ್ಪಸಂಖ್ಯಾತರ ಮೇಲೆ ಮೂಲಭೂತವಾದಿಗಳ ನೇತೃತ್ವದ ಘರ್ಷಣೆಗಳು ರಾಷ್ಟ್ರದಾದ್ಯಂತ ಉದ್ವಿಗ್ನತೆಗೆ ಕಾರಣವಾಯಿತು.

ಶೇಖ್ ಹಸೀನಾ ನೇತೃತ್ವದ ಸರ್ಕಾರವು ಮೂಲಭೂತವಾದಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡರೂ ಕಳೆದ ಕೆಲವು ವರ್ಷಗಳಿಂದ ಹಿಂದೂಗಳು, ನಾಸ್ತಿಕರು, ಜಾತ್ಯತೀತ ಮುಸ್ಲಿಮರು ಮತ್ತು LGBTQIA+ ಜನರ ಮೇಲಿನ ದಾಳಿಗಳು ಹೆಚ್ಚಿವೆ. ಅಭಿಜಿತ್ ರಾಯ್, ಥಾಬಾ ಬಾಬಾ ಅಕಾ ಅಹಮದ್ ರಾಜೀಬ್ ಹೈದರ್ ಮತ್ತು ಇತರ ಅನೇಕ ಲೇಖಕರ ಮೇಲೆ ದಾಳಿಗಳು ನಡೆದಿವೆ.

2016 ರಲ್ಲಿ ನಡೆದ ಹೋಲಿ ಆರ್ಟಿಸನ್ ಬೇಕರಿ ದಾಳಿಯ ನಂತರ  ಕ್ವಾಮಿ ಮದರಸಾಗಳು ಮತ್ತು ಜಮಾತ್ ಶಿಬಿರ್‌ನ ಭಯೋತ್ಪಾದಕ ಅಂಶಗಳು ಪ್ರಾಥಮಿಕವಾಗಿ ಭಯೋತ್ಪಾದನೆಯನ್ನು ಹುಟ್ಟುಹಾಕಲು ಕಾರಣವೆಂದು ಬಾಂಗ್ಲಾದೇಶ ಸರ್ಕಾರ ಗಮನಿಸುವಂತೆ  ಮಾಡಿತು.

ಇದನ್ನೂ ಓದಿ:Oksana Shvets: ಕೀವ್​ನ ವಸತಿ ಕಟ್ಟಡದ ಮೇಲೆ ರಷ್ಯಾ ದಾಳಿ; ಉಕ್ರೇನ್​ನ ಖ್ಯಾತ ನಟಿ ದುರ್ಮರಣ

Published On - 3:15 pm, Fri, 18 March 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ