AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರಿಗೂ ಸೇಫ್ ಅಲ್ಲ ಪಾಕಿಸ್ತಾನ; ಮಸೀದಿಯಲ್ಲೂ ಬಾಂಬ್ ದಾಳಿ ನಡೆದಿದ್ದೇಕೆ?

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯೊಳಗೆ ಆತ್ಮಾಹುತಿ ಬಾಂಬ್ ಸ್ಫೋಟಗೊಂಡು ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಇಂದು ಪ್ರಾರ್ಥನೆ ವೇಳೆ ಶಿಯಾ ಮುಸ್ಲಿಮರ ಪ್ರಾರ್ಥನಾ ಸ್ಥಳವಾದ ಖದೀಜತುಲ್ ಕುಬ್ರಾ ಮಸೀದಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 80 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಈ ಸ್ಫೋಟಕ್ಕೆ ಅಫ್ಘಾನಿಸ್ತಾನವನ್ನು ದೂಷಿಸಿದ್ದಾರೆ. ಹಿಂದೂಗಳ ಕತೆ ಹಾಗಿರಲಿ ಪಾಕಿಸ್ತಾನದಲ್ಲಿ ಶಿಯಾ ಮುಸ್ಲಿಮರಿಗೂ ಭದ್ರತೆ ಇಲ್ಲದಂತಾಗಿದೆ. ಈ ದಾಳಿಗೆ ಕಾರಣವೇನು?

ಮುಸ್ಲಿಮರಿಗೂ ಸೇಫ್ ಅಲ್ಲ ಪಾಕಿಸ್ತಾನ; ಮಸೀದಿಯಲ್ಲೂ ಬಾಂಬ್ ದಾಳಿ ನಡೆದಿದ್ದೇಕೆ?
Pakistan Mosque Blast
ಸುಷ್ಮಾ ಚಕ್ರೆ
|

Updated on:Feb 06, 2026 | 8:20 PM

Share

ನವದೆಹಲಿ, ಫೆಬ್ರವರಿ 6: ಪಾಕಿಸ್ತಾನದ ಇಸ್ಲಮಾಬಾದ್​​​ನಲ್ಲಿ ಇಂದು ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 69 ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟೈಮ್ಸ್ ಆಫ್ ಇಸ್ಲಾಮಾಬಾದ್ ವರದಿಯ ಪ್ರಕಾರ, ಆತ್ಮಾಹುತಿ ಬಾಂಬರ್ ಬರುವುದನ್ನು ನೋಡಿದ ಕಾವಲುಗಾರರು ಆತನನ್ನು ಮಸೀದಿಯ ಪ್ರವೇಶದ್ವಾರದಲ್ಲಿ ತಡೆದಿದ್ದರು. ಸ್ಫೋಟದ ಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಆ ಸ್ಥಳದ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಈ ಸ್ಫೋಟದ ಸ್ವರೂಪವನ್ನು ತನಿಖೆ ಮಾಡುತ್ತಿದೆ. ಪಾಕಿಸ್ತಾನದಲ್ಲಿ (Pakistan)  ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ಪದೇಪದೆ ದಾಳಿ ನಡೆಯುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು, ಆದರೆ, ಇದೀಗ ಅಲ್ಲಿ ಮುಸ್ಲಿಮರ ಒಂದು ಪಂಗಡವಾದ ಶಿಯಾ ಸಮುದಾಯದವರಿಗೂ ರಕ್ಷಣೆ ಇಲ್ಲದಂತಾಗಿದೆ.

ಪಾಕಿಸ್ತಾನದಲ್ಲಿ ಧಾರ್ಮಿಕ ಹಿಂಸಾಚಾರವು ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಮಾತ್ರ ಸೀಮಿತವಾಗಿಲ್ಲ. ದೇಶದೊಳಗಿನ ಶಿಯಾ ಮುಸ್ಲಿಮರು ಸಹ ಆಗಾಗ ಭಯೋತ್ಪಾದಕ ದಾಳಿಗೆ ಗುರಿಯಾಗುತ್ತಿದ್ದಾರೆ. ಪಾಕಿಸ್ತಾನದಲ್ಲಿ ಶಿಯಾ ಮುಸ್ಲಿಮರ ಮಸೀದಿಗಳಲ್ಲಿ ಬಹಿರಂಗವಾಗಿ ಸ್ಫೋಟಗಳು ನಡೆಯುತ್ತಿರುವುದಕ್ಕೆ ಕಾರಣವೇನು? ಎಂಬ ಮಾಹಿತಿ ಇಲ್ಲಿದೆ.

ಇಂದು ಇಸ್ಲಾಮಾಬಾದ್‌ನಲ್ಲಿ ಪ್ರಾರ್ಥನೆಯ ಸಮಯದಲ್ಲಿ ಶಿಯಾ ಮಸೀದಿಯ (ಇಂಬಾರಾ) ಮೇಲೆ ಆತ್ಮಾಹುತಿ ಬಾಂಬರ್ ದಾಳಿ ನಡೆಸಿದ್ದಾನೆ. ಈ ಘಟನೆಯ ನಂತರ ಸರ್ಕಾರ ನಗರದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿತು ಮತ್ತು ಭದ್ರತೆಯನ್ನು ಬಿಗಿಗೊಳಿಸಿತು. ಈ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ಇನ್ನೂ ಹೊತ್ತುಕೊಂಡಿಲ್ಲ. ಆದರೆ, ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಮತ್ತು ಇಸ್ಲಾಮಿಕ್ ಸ್ಟೇಟ್ (ಐಎಸ್)ನಂತಹ ಭಯೋತ್ಪಾದಕ ಗುಂಪುಗಳ ಮೇಲೆ ಅನುಮಾನ ಉಂಟಾಗಿದೆ. ಈ ಎರಡೂ ಸಂಘಟನೆಗಳು ಈ ಹಿಂದೆ ಸುನ್ನಿ ಬಹುಸಂಖ್ಯಾತರಾಗಿರುವ ಪಾಕಿಸ್ತಾನದಲ್ಲಿ ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡಿತ್ತು.

ಇದನ್ನೂ ಓದಿ: Pakistan Mosque Blast: ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ, 10ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ

ಪಾಕಿಸ್ತಾನದಲ್ಲಿ ಶಿಯಾ ಮುಸ್ಲಿಮರ ಮೇಲಿನ ದಾಳಿಗಳು ಹೊಸದೇನಲ್ಲ. ಈ ದೇಶದ ಒಟ್ಟು ಮುಸ್ಲಿಂ ಜನಸಂಖ್ಯೆಯಲ್ಲಿ ಶಿಯಾಗಳು ಶೇ. 10-15ರಷ್ಟಿದ್ದಾರೆ. ಇರಾನ್ ನಂತರ ಪಾಕಿಸ್ತಾನವು ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಶಿಯಾ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದೆ. ಇದರ ಹೊರತಾಗಿಯೂ, ಶಿಯಾ ಸಮುದಾಯವು ಬಹಳ ಹಿಂದಿನಿಂದಲೂ ಪಾಕಿಸ್ತಾನದಲ್ಲಿ ಪಂಥೀಯ ಹಿಂಸಾಚಾರಕ್ಕೆ ಬಲಿಯಾಗಿದೆ. ಪಾಕಿಸ್ತಾನದಲ್ಲಿರುವ ಕೆಲವು ಮೂಲಭೂತ ಸುನ್ನಿ ಭಯೋತ್ಪಾದಕ ಸಂಘಟನೆಗಳು ಶಿಯಾಗಳನ್ನು ನಾಸ್ತಿಕರು ಮತ್ತು ಇಸ್ಲಾಂನಿಂದ ಹೊರಗಿರುವವರು ಎಂದು ಪರಿಗಣಿಸುತ್ತವೆ. ಇದೇ ಶಿಯಾ ಮಸೀದಿಗಳು, ಇಮಾಂಬರ್ಗಾಗಳು, ಮೆರವಣಿಗೆಗಳು ಮತ್ತು ಧಾರ್ಮಿಕ ಸಭೆಗಳ ಮೇಲೆ ಆಗಾಗ ದಾಳಿ ನಡೆಯಲು ಕಾರಣವಾಗಿದೆ.

ಮೊಹರಂ ಸಮಯದಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಶಿಯಾ ಸಮುದಾಯದ ಶೋಕಾಚರಣೆಯ ಸಮಯದಲ್ಲಿ ದ್ವೇಷ ಹರಡುವವರು ಇನ್ನಷ್ಟು ಸಕ್ರಿಯರಾಗುತ್ತಾರೆ. ಕರಾಚಿಯಂತಹ ನಗರಗಳಲ್ಲಿ ಮೊಹರಂ ವೇಳೆ ಗೋಡೆಗಳ ಮೇಲೆ “ಶಿಯಾಗಳು ನಾಸ್ತಿಕರು” ಎಂಬ ಘೋಷಣೆಗಳನ್ನು ಬರೆಯಲಾಗುತ್ತದೆ. ಈ ದ್ವೇಷಪೂರಿತ ಭಾವನೆ 1980ರ ದಶಕದಿಂದಲೂ ಪಾಕಿಸ್ತಾನದಲ್ಲಿ ಸಾಮಾನ್ಯವಾಗಿಬಿಟ್ಟಿದೆ.

ಇದನ್ನೂ ಓದಿ: ಪಾಕಿಸ್ತಾನದಿಂದ ವಲಸೆ ಬಂದ ದಲಿತ ಹಿಂದೂಗಳಿಗೆ ವಸತಿ ಕಲ್ಪಿಸಿ; ಸುಪ್ರೀಂ ಕೋರ್ಟ್ ಆದೇಶ

ಶಿಯಾ ಸಮುದಾಯದೊಳಗೆ ಹೆಚ್ಚು ದುರ್ಬಲರೆಂದರೆ ಹಜಾರ ಶಿಯಾಗಳು. ಅವರು ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾದಲ್ಲಿ ವಾಸಿಸುತ್ತಾರೆ. ಅವರನ್ನು ಅವರ ಮುಖಭಾವ ಮತ್ತು ಭಾಷೆಯಿಂದ ಸುಲಭವಾಗಿ ಗುರುತಿಸಬಹುದು. ಇದು ಭಯೋತ್ಪಾದಕರಿಗೆ ಬಹಳ ಅನುಕೂಲವಾಗುತ್ತದೆ. ಕಳೆದ ಕೆಲವು ವರ್ಷಗಳಲ್ಲಿ ಕ್ವೆಟ್ಟಾದಲ್ಲಿ ಹಜಾರ ಶಿಯಾಗಳ ಮೇಲೆ ಹಲವಾರು ಪ್ರಮುಖ ದಾಳಿಗಳು ನಡೆದಿವೆ.

ಇನ್ನೂ ವಿಶೇಷವಾದ ಸಂಗತಿಯೆಂದರೆ, ಪಾಕಿಸ್ತಾನದ ಸ್ಥಾಪಕ ಮುಹಮ್ಮದ್ ಅಲಿ ಜಿನ್ನಾ ಕೂಡ ಶಿಯಾ ಮುಸ್ಲಿಂ ಆಗಿದ್ದರು. ಪಾಕಿಸ್ತಾನದ ಸ್ಥಾಪಕನ ಜಾತಿಯವರನ್ನೇ ಈಗ ನಾಸ್ತಿಕರು, ದೇಶಭ್ರಷ್ಟರೆಂಬಂತೆ ನೋಡುತ್ತಿರುವುದು ಅತ್ಯಂತ ದೊಡ್ಡ ವಿಪರ್ಯಾಸ. ಪಾಕಿಸ್ತಾನದಲ್ಲಿ ಇಂದು ಮುಸ್ಲಿಮೇತರರು ಮಾತ್ರವಲ್ಲದೆ ಶಿಯಾಗಳಂತಹ ಮುಸ್ಲಿಂ ಪಂಗಡಗಳು ಸಹ ಅಸುರಕ್ಷಿತ ಭಾವನೆಯನ್ನು ಅನುಭವಿಸುತ್ತಿವೆ.

2025ರ ಜಾಗತಿಕ ಭಯೋತ್ಪಾದನಾ ಸೂಚ್ಯಂಕದ ಪ್ರಕಾರ, ಪಾಕಿಸ್ತಾನವು ಈಗ ವಿಶ್ವದ ಎರಡನೇ ಅತಿ ಹೆಚ್ಚು ಭಯೋತ್ಪಾದನಾ ಪೀಡಿತ ರಾಷ್ಟ್ರವಾಗಿದೆ. ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ದಾಳಿಗಳು ಶೇ. 90ರಷ್ಟು ಹೆಚ್ಚಾಗಿದೆ. ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ದಾಳಿಗಳು ಶೇ. 60ರಷ್ಟು ಹೆಚ್ಚಾಗಿದೆ. ಕೆಲವು ದಿನಗಳ ಹಿಂದೆ ಬಲೂಚ್ ಲಿಬರೇಶನ್ ಆರ್ಮಿ (BLA) ಬಲೂಚಿಸ್ತಾನದಲ್ಲಿ ದೊಡ್ಡ ಪ್ರಮಾಣದ, ಸಂಘಟಿತ ದಾಳಿಗಳನ್ನು ನಡೆಸಿತ್ತು. ಅದರ ಬೆನ್ನಲ್ಲೇ ಇಂದು ಈ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 8:16 pm, Fri, 6 February 26

ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ