ಭಾರತ-ಪಾಕಿಸ್ತಾನದ ಯುದ್ಧ ಇಸ್ಲಾಂ ಯುದ್ಧವಲ್ಲ, ಮೌಲಾನಾ ಅಬ್ದುಲ್ ಅಜೀಜ್ ಹೇಳಿದ್ದೇನು?

ಭಾರತ-ಪಾಕಿಸ್ತಾನ ಯುದ್ಧ ಇಸ್ಲಾಂ ಯುದ್ಧ(War)ವಲ್ಲ ಎಂದು ಮೌಲಾನಾ ಅಬ್ದುಲ್ ಅಜೀಜ್ ಘಾಜಿ ಹೇಳಿದ್ದಾರೆ. ಅಮೆರಿಕದಲ್ಲಿರುವ ಪಾಕಿಸ್ತಾನದ ಮಾಜಿ ರಾಯಭಾರಿ ಹುಸೇನ್ ಹಕ್ಕಾನಿ ಅವರು ಅಪ್‌ಲೋಡ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಒಂದೆಡೆಯಾದರೆ ಮತ್ತೊಂದೆಡೆ ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಅಸಮಾಧಾನವನ್ನು ಬಹಿರಂಗಪಡಿಸಿದೆ.

ಭಾರತ-ಪಾಕಿಸ್ತಾನದ ಯುದ್ಧ ಇಸ್ಲಾಂ ಯುದ್ಧವಲ್ಲ, ಮೌಲಾನಾ ಅಬ್ದುಲ್ ಅಜೀಜ್ ಹೇಳಿದ್ದೇನು?
ಭಾರತ-ಪಾಕಿಸ್ತಾನ ಯುದ್ಧ ಇಸ್ಲಾಂ ಯುದ್ಧವಲ್ಲ ಎಂದು ಮೌಲಾನಾ ಅಬ್ದುಲ್ ಅಜೀಜ್ ಘಾಜಿ ಹೇಳಿದ್ದಾರೆ. ಅಮೆರಿಕದಲ್ಲಿರುವ ಪಾಕಿಸ್ತಾನದ ಮಾಜಿ ರಾಯಭಾರಿ ಹುಸೇನ್ ಹಕ್ಕಾನಿ ಅವರು ಅಪ್‌ಲೋಡ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಪಾಕಿಸ್ತಾನದಲ್ಲಿರುವಷ್ಟು ದಬ್ಬಾಳಿಕೆ ಭಾರತದಲ್ಲಿಲ್ಲ ಎಂದು ಅಜೀಜ್ ಹೇಳಿದ್ದಾರೆ. ಧಾರ್ಮಿಕ ಗುಂಪುಗಳನ್ನು ಕೈಗೊಂಬೆಗಳಾಗಿ ಬಳಸುತ್ತಿರುವ ಪಾಕಿಸ್ತಾನವನ್ನು ಅವರು ಟೀಕಿಸಿದರು. ರಾಜಕಾರಣಿ ಅಲಿ ಮುಹಮ್ಮದ್ ಖಾನ್ ಮರ್ವಾತ್ ಅವರ ಮತ್ತೊಂದು ವೈರಲ್ ವಿಡಿಯೋ ಭಾನುವಾರ ಬೆಳಕಿಗೆ ಬಂದಿದೆ.
Image Credit source: Siasat.com

Updated on: May 06, 2025 | 12:02 PM

ಇಸ್ಲಾಮಾಬಾದ್, ಮೇ 06: ಭಾರತ-ಪಾಕಿಸ್ತಾನ ಯುದ್ಧ ಇಸ್ಲಾಂ ಯುದ್ಧ(War)ವಲ್ಲ ಎಂದು ಮೌಲಾನಾ ಅಬ್ದುಲ್ ಅಜೀಜ್ ಘಾಜಿ ಹೇಳಿದ್ದಾರೆ. ಅಮೆರಿಕದಲ್ಲಿರುವ ಪಾಕಿಸ್ತಾನದ ಮಾಜಿ ರಾಯಭಾರಿ ಹುಸೇನ್ ಹಕ್ಕಾನಿ ಅವರು ಅಪ್‌ಲೋಡ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಒಂದೆಡೆಯಾದರೆ ಮತ್ತೊಂದೆಡೆ ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಅಸಮಾಧಾನವನ್ನು ಬಹಿರಂಗಪಡಿಸಿದೆ. 2 ನಿಮಿಷ 14 ಸೆಕೆಂಡುಗಳ ಈ ವಿಡಿಯೋ ಈಗ ವೈರಲ್ ಆಗಿದೆ.
ಪಾಕಿಸ್ತಾನ ಮತ್ತು ಭಾರತದ ನಡುವಿನ ಯುದ್ಧವು ಇಸ್ಲಾಂ ಯುದ್ಧವಲ್ಲ, ಭಾರತದೊಂದಿಗಿನ ಯುದ್ಧದಲ್ಲಿ ಪಾಕಿಸ್ತಾನವನ್ನು ಯಾರು ಗೆಲ್ಲಿಸುತ್ತೀರಾ ಕೈ ಎತ್ತಿ ಎಂದಾಗ ಎಲ್ಲರೂ ಮೌನವಾಗಿದ್ದರು.

ಇದನ್ನೂ ಓದಿ
ನಾವು 3 ದಶಕಗಳಿಂದ ಈ ನೀಚ ಕೆಲಸ ಮಾಡ್ತಿದ್ದೀವಿ: ಪಾಕ್ ರಕ್ಷಣಾ ಸಚಿವ ಖ್ವಾಜಾ
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಪಾಕಿಸ್ತಾನದಲ್ಲಿರುವಷ್ಟು ದಬ್ಬಾಳಿಕೆ ಭಾರತದಲ್ಲಿಲ್ಲ ಎಂದು ಅಜೀಜ್ ಹೇಳಿದ್ದಾರೆ. ಧಾರ್ಮಿಕ ಗುಂಪುಗಳನ್ನು ಕೈಗೊಂಬೆಗಳಾಗಿ ಬಳಸುತ್ತಿರುವ ಪಾಕಿಸ್ತಾನವನ್ನು ಅವರು ಟೀಕಿಸಿದರು. ರಾಜಕಾರಣಿ ಅಲಿ ಮುಹಮ್ಮದ್ ಖಾನ್ ಮರ್ವಾತ್ ಅವರ ಮತ್ತೊಂದು ವೈರಲ್ ವಿಡಿಯೋ ಭಾನುವಾರ ಬೆಳಕಿಗೆ ಬಂದಿದೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ನೀವು ಹೋರಾಡುತ್ತೀರಾ ಎಂದು ಸ್ಥಳೀಯ ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಒಂದೊಮ್ಮೆ ಯುದ್ಧ ಉಲ್ಬಣಗೊಂಡರೆ ನಾನು ಇಂಗ್ಲೆಂಡ್​ಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ಪಾಕಿಸ್ತಾನಿ ನಾಯಕತ್ವದ ಬದ್ಧತೆ ಮತ್ತು ಮಿಲಿಟರಿಯ ಮೇಲಿನ ನಂಬಿಕೆಯ ಕೊರತೆಯ ಬಗ್ಗೆ ಪ್ರತಿಕ್ರಿಯೆಗಳು ಹುಟ್ಟಿಕೊಂಡಿವೆ. ದೇಶೀಯ ಆಡಳಿತದ ಬಗ್ಗೆ ಹೆಚ್ಚುತ್ತಿರುವ ಸಾರ್ವಜನಿಕ ಅಪನಂಬಿಕೆಯನ್ನು ಬಹಿರಂಗಪಡಿಸಿವೆ.

ಮತ್ತಷ್ಟು ಓದಿ: ಭಾರತದ ಸಿದ್ಧತೆ ನೋಡಿಯೇ ಬೆವರಿದ ಪಾಕಿಸ್ತಾನ, ಯುದ್ಧ ಭೀತಿ ಇದೆ ಎಂದ ಪಾಕ್ ರಕ್ಷಣಾ ಸಚಿವ

ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಾಗ, ಸಾಮಾಜಿಕ ಮಾಧ್ಯಮಗಳ ಮೂಲಕ ಜನರ ಧ್ವನಿಯು ಹೊಣೆಗಾರಿಕೆ, ಸಮಗ್ರತೆ ಮತ್ತು ರಾಷ್ಟ್ರೀಯ ನಿರೂಪಣೆಯಲ್ಲಿ ಬದಲಾವಣೆಗೆ ಕರೆ ನೀಡುತ್ತಿದೆ.

ಈ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರತಿಕ್ರಿಯೆಗಳ ಉಲ್ಬಣವನ್ನು ಉಂಟುಮಾಡಿವೆ. ಅಧಿಕಾರದಲ್ಲಿರುವವರು ದೇಶಕ್ಕಾಗಿ ನಿಲ್ಲದಿದ್ದರೆ ಸಾಮಾನ್ಯ ನಾಗರಿಕರು ಯುದ್ಧದ ಹೊರೆ ಹೊರುತ್ತಾರೆಯೇ ಎಂದು ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ