AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧದಲ್ಲಿ ಇಸ್ಲಾಮಿಕ್ ಸ್ಟೇಟ್ ಗುಂಪಿನ ನಾಯಕ ಅಬು ಹಸನ್ ಅಲ್ ಹಶಿಮಿ ಅಲ್ ಖುರೇಶಿ ಸಾವು

ಹಶಿಮಿ ದೇವರ ಶತ್ರುಗಳೊಂದಿಗಿನ ಯುದ್ಧದಲ್ಲಿ ಹತರಾಗಿದ್ದಾರೆ. ಆತನ ಸಾವಿನ ದಿನಾಂಕ ಅಥವಾ ಸಂದರ್ಭಗಳನ್ನು ವಕ್ತಾರ ವಿವರಿಸಿಲ್ಲ. ಗುಂಪಿನ ಹೊಸ ನಾಯಕ ಅಬು ಅಲ್-ಹುಸೇನ್ ಅಲ್-ಹುಸೇನಿ ಅಲ್-ಖುರಾಶಿ ಎಂದು ಘೋಷಿಸಲಾಗಿದೆ.

ಯುದ್ಧದಲ್ಲಿ ಇಸ್ಲಾಮಿಕ್ ಸ್ಟೇಟ್ ಗುಂಪಿನ ನಾಯಕ ಅಬು ಹಸನ್ ಅಲ್ ಹಶಿಮಿ ಅಲ್ ಖುರೇಶಿ ಸಾವು
TV9 Web
| Edited By: |

Updated on:Dec 01, 2022 | 10:21 AM

Share

ಇಸ್ಲಾಮಿಕ್ ಸ್ಟೇಟ್ ಗುಂಪು (ISIS) ಬುಧವಾರ ತನ್ನ ನಾಯಕ ಅಬು ಹಸನ್ ಅಲ್-ಹಶಿಮಿ ಅಲ್-ಖುರೇಶಿ ((Abu Hasan al-Hashimi al-Qurashi)ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಅವರ ಸ್ಥಾನಕ್ಕೆ ಬೇರೊಬ್ಬ ನಾಯಕನನ್ನು  ಘೋಷಿಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಇರಾಕಿನ ಹಶಿಮಿ “ದೇವರ ಶತ್ರುಗಳೊಂದಿಗಿನ ಯುದ್ಧದಲ್ಲಿ” ಕೊಲ್ಲಲ್ಪಟ್ಟರು ಎಂದು ಭಯೋತ್ಪಾದಕ ಗುಂಪಿನ ವಕ್ತಾರ ಹೇಳಿದ್ದು ಅವನ ಸಾವಿನ ದಿನಾಂಕ ಅಥವಾ ಸಂದರ್ಭಗಳನ್ನು ವಿವರಿಸಿಲ್ಲ ಆಡಿಯೋ ಸಂದೇಶದಲ್ಲಿ ಮಾತನಾಡಿದ  ವಕ್ತಾರ ಗುಂಪಿನ ಹೊಸ ನಾಯಕ ಅಬು ಅಲ್-ಹುಸೇನ್ ಅಲ್-ಹುಸೇನಿ ಅಲ್-ಖುರೇಶಿ ಎಂದು ಹೇಳಿದ್ದಾರೆ. ಖುರೇಶಿ ಎಂಬುದು  ಪ್ರವಾದಿ ಮೊಹಮ್ಮದ್‌ನ ಬುಡಕಟ್ಟು ಜನಾಂಗವನ್ನು ಉಲ್ಲೇಖಿಸುತ್ತದೆ.

2014 ರಲ್ಲಿ ಇರಾಕ್ ಮತ್ತು ಸಿರಿಯಾದಲ್ಲಿ  ಹಿಂಸಾಚಾರ ಏರಿಕೆಯ ನಂತರ ಅದು ವಿಶಾಲವಾದ ಭೂಪ್ರದೇಶವನ್ನು ವಶಪಡಿಸಿಕೊಂಡಿತು.  ಇದನ್ನು 2017ರಲ್ಲಿ ಇರಾಕ್‌ನಲ್ಲಿ ಮತ್ತು ಎರಡು ವರ್ಷಗಳ ನಂತರ ಸಿರಿಯಾದಲ್ಲಿ ಸೋಲಿಸಲಾಯಿತು. ಆದರೆ ಸುನ್ನಿ ಮುಸ್ಲಿಂ ಉಗ್ರಗಾಮಿ ಗುಂಪಿನ ಸ್ಲೀಪರ್ ಸೆಲ್‌ಗಳು ಇನ್ನೂ ಎರಡೂ ದೇಶಗಳಲ್ಲಿ ದಾಳಿಗಳನ್ನು ನಡೆಸುತ್ತವೆ. ಪ್ರಪಂಚದ ಬೇರೆಡೆ ದಾಳಿಗಳನ್ನು ನಡೆಸಿರುವುದಾಗಿ ಹೇಳಿಕೊಳ್ಳುತ್ತಿವೆ

ಐಸಿಸ್‌ನ ಹಿಂದಿನ ನಾಯಕ ಅಬು ಇಬ್ರಾಹಿಂ ಅಲ್-ಖುರೇಶಿ ಈ ವರ್ಷದ ಆರಂಭದಲ್ಲಿ ಉತ್ತರ ಸಿರಿಯಾದ ಇಡ್ಲಿಬ್ ಪ್ರಾಂತ್ಯದಲ್ಲಿ ಯುಎಸ್ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಇದಕ್ಕಿಂತ ಹಿಂದಿನ ನಾಯಕ ಅಬು ಬಕರ್ ಅಲ್-ಬಾಗ್ದಾದಿಯನ್ನು ಅಕ್ಟೋಬರ್ 2019 ರಲ್ಲಿ ಇಡ್ಲಿಬ್‌ನಲ್ಲಿ ಕೊಲ್ಲಲಾಯಿತು.

Published On - 9:42 pm, Wed, 30 November 22

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ