AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​​​ ವೈಮಾನಿಕ ದಾಳಿ: ಹಮಾಸ್​​ ಉಗ್ರರ ಒತ್ತೆಯಾಳಾಗಿದ್ದ 13 ಇಸ್ರೇಲಿಗರು ಸಾವು

ಇಸ್ರೇಲ್​​ ಗಾಜಾ ಪಟ್ಟಿಯಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್​ ಸೈನಿಕರು ದಾಳಿ ನಡೆಸಿ 250 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಹಮಾಸ್​​ ಉಗ್ರರು ನೀಡಿರುವ ಮಾಹಿತಿ ಪ್ರಕಾರ ಇಸ್ರೇಲ್​​ 24 ಗಂಟೆಯಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಇಸ್ರೇಲಿಗರು ಮತ್ತು ವಿದೇಶಿ ಒತ್ತೆಯಾಳುಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಇಸ್ರೇಲ್​​​ ವೈಮಾನಿಕ ದಾಳಿ: ಹಮಾಸ್​​ ಉಗ್ರರ ಒತ್ತೆಯಾಳಾಗಿದ್ದ 13 ಇಸ್ರೇಲಿಗರು ಸಾವು
ಅಕ್ಷಯ್​ ಪಲ್ಲಮಜಲು​​
|

Updated on:Oct 13, 2023 | 4:32 PM

Share

ಇಸ್ರೇಲ್​​ ಮತ್ತು ಹಮಾಸ್​​ ಭಯೋತ್ಪಾದಕರ ನಡುವೆ ನಡೆಯುತ್ತಿರುವ ಯುದ್ಧ 6ನೇ ದಿನಕ್ಕೆ ಕಾಲಿಟ್ಟಿದೆ. ಒಂದು ಕಡೆ ಇಸ್ರೇಲ್​​​ ಗಾಜಾ ಪಟ್ಟಿಯ ಮೇಲೆ ದಾಳಿ ಮಾಡಿ ಹಮಾಸ್​​ ಉಗ್ರರ ನೆಲೆಯನ್ನು ನಾಶ ಮಾಡುತ್ತಿದೆ. ಇನ್ನೊಂದು ಕಡೆ ಹಮಾಸ್​ ಉಗ್ರರರು, ಇಸ್ರೇಲ್​​​​ ನಾಗರಿಕರನ್ನು ಹಾಗೂ ವಿದೇಶಿಗರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು. ಈ ಕಾರಣಕ್ಕೆ ಹಮಾಸ್​​ ಭಯೋತ್ಪಾದಕರು ಇಸ್ರೇಲ್​​ಗೆ ಬೆದರಿಕೆಯನ್ನು ಹಾಕಿತ್ತು. ಯುದ್ಧವನ್ನು ನಿಲ್ಲಿಸಿ ಇಲ್ಲವೆಂದರೆ ನಮ್ಮ ವಶದಲ್ಲಿರುವ ಇಸ್ರೇಲ್​​​​ ನಾಗರಿಕರನ್ನು ಹಾಗೂ ವಿದೇಶಿಗರನ್ನು ಕೊಲ್ಲುವುದಾಗಿ ಹೇಳಿತ್ತು. ಆದರೆ ಈ ಯಾವ ಬೆದರಿಕೆಗೂ ಜಗ್ಗದ ಇಸ್ರೇಲ್​​ ಇದೀಗ ಗಾಜಾ ಪಟ್ಟಿಯಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್​ ಸೈನಿಕರು ದಾಳಿ ನಡೆಸಿ 250 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಹಮಾಸ್​​ ಉಗ್ರರು ನೀಡಿರುವ ಮಾಹಿತಿ ಪ್ರಕಾರ ಇಸ್ರೇಲ್​​ 24 ಗಂಟೆಯಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಇಸ್ರೇಲಿಗರು ಮತ್ತು ವಿದೇಶಿ ಒತ್ತೆಯಾಳುಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಹಮಾಸ್ ಮಾಡಿದ ತಪ್ಪಿಗೆ ಇಂದು ಇಡೀ ಗಾಜಾ ಪಟ್ಟಿ ಹಾಗೂ ಇಸ್ರೇಲ್​​ ನಾಗರಿಕರು ಶಿಕ್ಷೆ ಅನುಭವಿಸುತ್ತಿದ್ದಾರೆ. ಕರಾಳ ಯುದ್ಧಕ್ಕೆ ಹಮಾಸ್​​ ಉಗ್ರರು ಸಾಕ್ಷಿಯಾಗಿದ್ದಾರೆ. ಯಾವುದೇ ತಪ್ಪು ಮಾಡದ ಮಕ್ಕಳು, ಮಹಿಳೆಯರು, ವೃದ್ಧರು ನೋವು – ಸಾವು ಅನುಭವಿಸಿದ್ದಾರೆ. ಈ ಹಿಂದೆಯೆ ಇಸ್ರೇಲ್​​ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿದರು ಯಾವುದೇ ಕಾರಣಕ್ಕೂ ಹಮಾಸ್​​​ ಉಗ್ರರನ್ನು ಬೀಡುವ ಮಾತಿಲ್ಲ ಎಂದು. ಅದೇ ರೀತಿ ಇದೀಗ ಹಮಾಸ್​​ ಉಗ್ರರನ್ನು ಹುಡುಕಿ ಹೊಡೆಯುತ್ತಿದ್ದಾರೆ. ತನ್ನ ದೇಶದ ಪ್ರಜೆಗಳನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ ಹಮಾಸ್​​ ಉಗ್ರ ನಲೆ ಮೇಲೆ ದಾಳಿ ಮಾಡಿ, ಅಲ್ಲಿರುವ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದಾರೆ. ಆದರೆ ಹಮಾಸ್,​​​ ಇಸ್ರೇಲ್​​ ನಡೆಸಿದ 24 ಗಂಟೆಯ ವೈಮಾನಿಕ ದಾಳಿಯಲ್ಲಿ 13 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಗಾಜಾದಲ್ಲಿ ಹಮಾಸ್​ನ ಅಡಗುತಾಣಗಳ ಮೇಲೆ ದಾಳಿ ನಡೆಸಿ ಒತ್ತೆಯಾಳುಗಳನ್ನು ರಕ್ಷಿಸಿದ ಇಸ್ರೇಲ್ ಸೈನಿಕರು

ಎಝೆಡಿನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ನೀಡಿದ ಹೇಳಿಕೆ ಪ್ರಕಾರ ಇಸ್ರೇಲಿ ಫೈಟರ್ ಜೆಟ್‌ಗಳು ಗುರಿಯಾಗಿಸಿದ ಐದು ಸ್ಥಳಗಳಲ್ಲಿ ಹದಿಮೂರು ಕೈದಿಗಳು ಹಾಗೂ ವಿದೇಶಿಯರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್​​ ನಡೆಸಿದ ವಾಯು ಮತ್ತು ಫಿರಂಗಿ ದಾಳಿಯಲ್ಲಿ 2.4 ಮಿಲಿಯನ್ ಜನಸಂಖ್ಯೆಯ ಜನನಿಬಿಡ ಪ್ರದೇಶವನ್ನು ಧ್ವಂಸ ಮಾಡಿದ್ದಾರೆ. ಇದರಲ್ಲಿ 1,500 ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಗಾಜಾದ ಹಮಾಸ್​​​​ ಮಾಧ್ಯಮಗಳು ತಿಳಿಸಿದ ಪ್ರಕಾರ ಈ ದಾಳಿಯಲ್ಲಿ ಸಾವನ್ನಪ್ಪಿರುವವರಲ್ಲಿ 500 ಮಕ್ಕಳೇ ಎಂದು ಹೇಳಿದೆ. ಈ ಹಿಂದೆ ಎಝೆಡಿನ್ ಅಲ್-ಕಸ್ಸಾಮ್ ಬ್ರಿಗೇಡ್‌ಗಳು ನಮ್ಮ ಜನರ ಮೇಲೆ ದಾಳಿ ಮಾಡಿದ್ರೆ ನಮ್ಮ ವಶದಲ್ಲಿರುವ ನಿಮ್ಮ ಜನರನ್ನು ಹತ್ಯೆ ಮಾಡುತ್ತೇವೆ ಎಂದು ಹೇಳಿದರು. ಈಗಾಗಲೇ ಹಲವು ಸಾವು-ನೋವುಗಳು ಎರಡು ಕಡೆಯಾಗಿದೆ. ಇಸ್ರೇಲ್​​ ಯುದ್ಧ ಭೀಕರತೆಯಲ್ಲಿದೆ. ನಮ್ಮ ದೇಶ ಸಂಕಷ್ಟದಲ್ಲಿದೆ ಎಂದಾಗ ಇಡೀ ಇಸ್ರೇಲ್​​, ಸೈನ್ಯದ ಜತೆಗೆ ನಿಂತಿದೆ. ಇದರ ಜತೆಗೆ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳು ಇಸ್ರೇಲ್​​ಗೆ ಬೆಂಬಲ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:28 pm, Fri, 13 October 23

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ