AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​​​ ವೈಮಾನಿಕ ದಾಳಿ: ಹಮಾಸ್​​ ಉಗ್ರರ ಒತ್ತೆಯಾಳಾಗಿದ್ದ 13 ಇಸ್ರೇಲಿಗರು ಸಾವು

ಇಸ್ರೇಲ್​​ ಗಾಜಾ ಪಟ್ಟಿಯಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್​ ಸೈನಿಕರು ದಾಳಿ ನಡೆಸಿ 250 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಹಮಾಸ್​​ ಉಗ್ರರು ನೀಡಿರುವ ಮಾಹಿತಿ ಪ್ರಕಾರ ಇಸ್ರೇಲ್​​ 24 ಗಂಟೆಯಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಇಸ್ರೇಲಿಗರು ಮತ್ತು ವಿದೇಶಿ ಒತ್ತೆಯಾಳುಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಇಸ್ರೇಲ್​​​ ವೈಮಾನಿಕ ದಾಳಿ: ಹಮಾಸ್​​ ಉಗ್ರರ ಒತ್ತೆಯಾಳಾಗಿದ್ದ 13 ಇಸ್ರೇಲಿಗರು ಸಾವು
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 13, 2023 | 4:32 PM

ಇಸ್ರೇಲ್​​ ಮತ್ತು ಹಮಾಸ್​​ ಭಯೋತ್ಪಾದಕರ ನಡುವೆ ನಡೆಯುತ್ತಿರುವ ಯುದ್ಧ 6ನೇ ದಿನಕ್ಕೆ ಕಾಲಿಟ್ಟಿದೆ. ಒಂದು ಕಡೆ ಇಸ್ರೇಲ್​​​ ಗಾಜಾ ಪಟ್ಟಿಯ ಮೇಲೆ ದಾಳಿ ಮಾಡಿ ಹಮಾಸ್​​ ಉಗ್ರರ ನೆಲೆಯನ್ನು ನಾಶ ಮಾಡುತ್ತಿದೆ. ಇನ್ನೊಂದು ಕಡೆ ಹಮಾಸ್​ ಉಗ್ರರರು, ಇಸ್ರೇಲ್​​​​ ನಾಗರಿಕರನ್ನು ಹಾಗೂ ವಿದೇಶಿಗರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು. ಈ ಕಾರಣಕ್ಕೆ ಹಮಾಸ್​​ ಭಯೋತ್ಪಾದಕರು ಇಸ್ರೇಲ್​​ಗೆ ಬೆದರಿಕೆಯನ್ನು ಹಾಕಿತ್ತು. ಯುದ್ಧವನ್ನು ನಿಲ್ಲಿಸಿ ಇಲ್ಲವೆಂದರೆ ನಮ್ಮ ವಶದಲ್ಲಿರುವ ಇಸ್ರೇಲ್​​​​ ನಾಗರಿಕರನ್ನು ಹಾಗೂ ವಿದೇಶಿಗರನ್ನು ಕೊಲ್ಲುವುದಾಗಿ ಹೇಳಿತ್ತು. ಆದರೆ ಈ ಯಾವ ಬೆದರಿಕೆಗೂ ಜಗ್ಗದ ಇಸ್ರೇಲ್​​ ಇದೀಗ ಗಾಜಾ ಪಟ್ಟಿಯಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್​ ಸೈನಿಕರು ದಾಳಿ ನಡೆಸಿ 250 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಹಮಾಸ್​​ ಉಗ್ರರು ನೀಡಿರುವ ಮಾಹಿತಿ ಪ್ರಕಾರ ಇಸ್ರೇಲ್​​ 24 ಗಂಟೆಯಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಇಸ್ರೇಲಿಗರು ಮತ್ತು ವಿದೇಶಿ ಒತ್ತೆಯಾಳುಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಹಮಾಸ್ ಮಾಡಿದ ತಪ್ಪಿಗೆ ಇಂದು ಇಡೀ ಗಾಜಾ ಪಟ್ಟಿ ಹಾಗೂ ಇಸ್ರೇಲ್​​ ನಾಗರಿಕರು ಶಿಕ್ಷೆ ಅನುಭವಿಸುತ್ತಿದ್ದಾರೆ. ಕರಾಳ ಯುದ್ಧಕ್ಕೆ ಹಮಾಸ್​​ ಉಗ್ರರು ಸಾಕ್ಷಿಯಾಗಿದ್ದಾರೆ. ಯಾವುದೇ ತಪ್ಪು ಮಾಡದ ಮಕ್ಕಳು, ಮಹಿಳೆಯರು, ವೃದ್ಧರು ನೋವು – ಸಾವು ಅನುಭವಿಸಿದ್ದಾರೆ. ಈ ಹಿಂದೆಯೆ ಇಸ್ರೇಲ್​​ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿದರು ಯಾವುದೇ ಕಾರಣಕ್ಕೂ ಹಮಾಸ್​​​ ಉಗ್ರರನ್ನು ಬೀಡುವ ಮಾತಿಲ್ಲ ಎಂದು. ಅದೇ ರೀತಿ ಇದೀಗ ಹಮಾಸ್​​ ಉಗ್ರರನ್ನು ಹುಡುಕಿ ಹೊಡೆಯುತ್ತಿದ್ದಾರೆ. ತನ್ನ ದೇಶದ ಪ್ರಜೆಗಳನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ ಹಮಾಸ್​​ ಉಗ್ರ ನಲೆ ಮೇಲೆ ದಾಳಿ ಮಾಡಿ, ಅಲ್ಲಿರುವ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದಾರೆ. ಆದರೆ ಹಮಾಸ್,​​​ ಇಸ್ರೇಲ್​​ ನಡೆಸಿದ 24 ಗಂಟೆಯ ವೈಮಾನಿಕ ದಾಳಿಯಲ್ಲಿ 13 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಗಾಜಾದಲ್ಲಿ ಹಮಾಸ್​ನ ಅಡಗುತಾಣಗಳ ಮೇಲೆ ದಾಳಿ ನಡೆಸಿ ಒತ್ತೆಯಾಳುಗಳನ್ನು ರಕ್ಷಿಸಿದ ಇಸ್ರೇಲ್ ಸೈನಿಕರು

ಎಝೆಡಿನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ನೀಡಿದ ಹೇಳಿಕೆ ಪ್ರಕಾರ ಇಸ್ರೇಲಿ ಫೈಟರ್ ಜೆಟ್‌ಗಳು ಗುರಿಯಾಗಿಸಿದ ಐದು ಸ್ಥಳಗಳಲ್ಲಿ ಹದಿಮೂರು ಕೈದಿಗಳು ಹಾಗೂ ವಿದೇಶಿಯರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಗಾಜಾ ಪಟ್ಟಿಯ ಮೇಲೆ ಇಸ್ರೇಲ್​​ ನಡೆಸಿದ ವಾಯು ಮತ್ತು ಫಿರಂಗಿ ದಾಳಿಯಲ್ಲಿ 2.4 ಮಿಲಿಯನ್ ಜನಸಂಖ್ಯೆಯ ಜನನಿಬಿಡ ಪ್ರದೇಶವನ್ನು ಧ್ವಂಸ ಮಾಡಿದ್ದಾರೆ. ಇದರಲ್ಲಿ 1,500 ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

ಗಾಜಾದ ಹಮಾಸ್​​​​ ಮಾಧ್ಯಮಗಳು ತಿಳಿಸಿದ ಪ್ರಕಾರ ಈ ದಾಳಿಯಲ್ಲಿ ಸಾವನ್ನಪ್ಪಿರುವವರಲ್ಲಿ 500 ಮಕ್ಕಳೇ ಎಂದು ಹೇಳಿದೆ. ಈ ಹಿಂದೆ ಎಝೆಡಿನ್ ಅಲ್-ಕಸ್ಸಾಮ್ ಬ್ರಿಗೇಡ್‌ಗಳು ನಮ್ಮ ಜನರ ಮೇಲೆ ದಾಳಿ ಮಾಡಿದ್ರೆ ನಮ್ಮ ವಶದಲ್ಲಿರುವ ನಿಮ್ಮ ಜನರನ್ನು ಹತ್ಯೆ ಮಾಡುತ್ತೇವೆ ಎಂದು ಹೇಳಿದರು. ಈಗಾಗಲೇ ಹಲವು ಸಾವು-ನೋವುಗಳು ಎರಡು ಕಡೆಯಾಗಿದೆ. ಇಸ್ರೇಲ್​​ ಯುದ್ಧ ಭೀಕರತೆಯಲ್ಲಿದೆ. ನಮ್ಮ ದೇಶ ಸಂಕಷ್ಟದಲ್ಲಿದೆ ಎಂದಾಗ ಇಡೀ ಇಸ್ರೇಲ್​​, ಸೈನ್ಯದ ಜತೆಗೆ ನಿಂತಿದೆ. ಇದರ ಜತೆಗೆ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳು ಇಸ್ರೇಲ್​​ಗೆ ಬೆಂಬಲ ನೀಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:28 pm, Fri, 13 October 23

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ