AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 4 ಪತ್ರಕರ್ತರು ಸೇರಿ 15 ಜನ ಸಾವು

ಗಾಜಾದ ಆಸ್ಪತ್ರೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಪತ್ರಕರ್ತರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ಟೀನಿಯನ್ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯ ಬಗ್ಗೆ ಇಸ್ರೇಲ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. 22 ತಿಂಗಳ ಹಿಂದೆ ಯುದ್ಧ ಪ್ರಾರಂಭವಾದಾಗಿನಿಂದ ಗಾಜಾದಲ್ಲಿ 192 ಪತ್ರಕರ್ತರು ಸಾವನ್ನಪ್ಪಿದ್ದಾರೆ, ಇದು ಇತ್ತೀಚಿನ ವರ್ಷಗಳಲ್ಲಿ ಮಾಧ್ಯಮ ಕಾರ್ಯಕರ್ತರ ಮೇಲೆ ನಡೆದ ಅತ್ಯಂತ ಮಾರಕ ಸಂಘರ್ಷವಾಗಿದೆ.

ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 4 ಪತ್ರಕರ್ತರು ಸೇರಿ 15 ಜನ ಸಾವು
Gaza Airstrike
ಸುಷ್ಮಾ ಚಕ್ರೆ
|

Updated on:Aug 25, 2025 | 5:04 PM

Share

ಗಾಜಾ, ಆಗಸ್ಟ್ 25: ಗಾಜಾದ (Gaza Attack) ಆಸ್ಪತ್ರೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ (Israel airstrike) 15 ಜನರು ಸಾವನ್ನಪ್ಪಿದ್ದಾರೆ. ಇಂದು ದಕ್ಷಿಣ ಗಾಜಾದ ನಾಸರ್ ಆಸ್ಪತ್ರೆಯ ನಾಲ್ಕನೇ ಮಹಡಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆದಿದ್ದು, 4 ಪತ್ರಕರ್ತರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. 22 ತಿಂಗಳ ಹಿಂದೆ ಯುದ್ಧ ಪ್ರಾರಂಭವಾದಾಗಿನಿಂದ ಗಾಜಾದಲ್ಲಿ ಒಟ್ಟು 192 ಪತ್ರಕರ್ತರು ಸಾವನ್ನಪ್ಪಿದ್ದಾರೆ. ಇಂದಿನ ದಾಳಿಯು ದಕ್ಷಿಣ ಗಾಜಾದ ಅತಿದೊಡ್ಡ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿದೆ.

ಇತ್ತೀಚಿನ ದಾಳಿಯ ಕುರಿತು ಇಸ್ರೇಲ್ ಸೇನೆ ಇನ್ನೂ ಪ್ರತಿಕ್ರಿಯಿಸಿಲ್ಲ. ಹಮಾಸ್ ಉಗ್ರಗಾಮಿಗಳ ಇರುವಿಕೆಯನ್ನು ಉಲ್ಲೇಖಿಸಿ, ಆಸ್ಪತ್ರೆಗಳ ಬಳಿ ಅಥವಾ ಒಳಗೆ ಟಾರ್ಗೆಟ್​​ಗಳನ್ನು ಹೊಡೆದಿರುವುದನ್ನು ಅದು ಈ ಹಿಂದೆ ಒಪ್ಪಿಕೊಂಡಿದ್ದರೂ, ಈ ನಿರ್ದಿಷ್ಟ ಘಟನೆಯನ್ನು ಅದು ಅಧಿಕೃತವಾಗಿ ಉಲ್ಲೇಖಿಸಿಲ್ಲ.

ಇದನ್ನೂ ಓದಿ: ಅಮೆರಿಕದ ಸುಂಕ ಏರಿಕೆ ಬೆನ್ನಲ್ಲೇ ಭಾರತದ ಬೆಂಬಲಕ್ಕೆ ನಿಂತ ಇಸ್ರೇಲ್

ಇಂದು ದಾಳಿಯಲ್ಲಿ ಸಾವನ್ನಪ್ಪಿದ ಪತ್ರಕರ್ತರಲ್ಲಿ 33 ವರ್ಷದ ಮರಿಯಮ್ ದಗ್ಗಾ ಕೂಡ ಸೇರಿದ್ದಾರೆ. ಅವರು ಯುದ್ಧದ ಆರಂಭದಿಂದಲೂ ಅಸೋಸಿಯೇಟೆಡ್ ಪ್ರೆಸ್ ಮತ್ತು ಇತರ ಸುದ್ದಿ ಸಂಸ್ಥೆಗಳಿಗೆ ವರದಿ ಮಾಡುತ್ತಿದ್ದರು.  ಅವರು ಯುದ್ಧದ ಆರಂಭದಿಂದಲೂ ಅಸೋಸಿಯೇಟೆಡ್ ಪ್ರೆಸ್ ಮತ್ತು ಇತರ ಸುದ್ದಿ ಸಂಸ್ಥೆಗಳಿಗೆ ವರದಿ ಮಾಡುತ್ತಿದ್ದರು. ಅವರು ಗಾಜಾದಲ್ಲಿ ಹದಗೆಡುತ್ತಿರುವ ಮಾನವೀಯ ಬಿಕ್ಕಟ್ಟನ್ನು ವರದಿ ಮಾಡಿದ್ದರು. ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಅಲ್ ಜಜೀರಾ ತನ್ನ ಪತ್ರಕರ್ತ ಮೊಹಮ್ಮದ್ ಸಲಾಮ್ ಕೂಡ ಒಬ್ಬರು ಎಂದು ದೃಢಪಡಿಸಿದೆ. ರಾಯಿಟರ್ಸ್ ತನ್ನ ವರದಿಗಾರ ಕೂಡ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಸಿರಿಯಾ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ನೇರ ಪ್ರಸಾರದ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ

ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯನ್ನು 22 ತಿಂಗಳ ಕಾಲ ನಡೆದ ಸಂಘರ್ಷದ ಉದ್ದಕ್ಕೂ ಪದೇ ಪದೇ ಟಾರ್ಗೆಟ್ ಮಾಡಲಾಗಿದೆ. ಜೂನ್‌ನಲ್ಲಿ ಅದೇ ಆಸ್ಪತ್ರೆಯ ಮೇಲೆ ನಡೆದ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದರು ಮತ್ತು 10 ಜನರು ಗಾಯಗೊಂಡಿದ್ದರು. ಆ ಸಮಯದಲ್ಲಿ, ಇಸ್ರೇಲ್ ರಕ್ಷಣಾ ಪಡೆಗಳು (IDF) ಆಸ್ಪತ್ರೆಯ ಒಳಗಿನಿಂದ ಕಾರ್ಯನಿರ್ವಹಿಸುತ್ತಿರುವ ಹಮಾಸ್ ಕಮಾಂಡರ್ ಮತ್ತು ನಿಯಂತ್ರಣ ಕೇಂದ್ರವನ್ನು ಗುರಿಯಾಗಿಸಿಕೊಂಡಿರುವುದಾಗಿ ಹೇಳಿಕೊಂಡವು.

ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, ಸಂಘರ್ಷ ಪ್ರಾರಂಭವಾದಾಗಿನಿಂದ 62,686ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಈ ದಾಳಿಯಲ್ಲಿ ಕೊಲ್ಲಲ್ಪಟ್ಟವರಲ್ಲಿ ಅರ್ಧದಷ್ಟು ಮಹಿಳೆಯರು ಮತ್ತು ಮಕ್ಕಳು ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:04 pm, Mon, 25 August 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ