AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ ಶುಕ್ರವಾರ: ಗಾಜಾ ಪಟ್ಟಿಯಲ್ಲಿ 11 ದಿನಗಳ ಸಂಘರ್ಷಕ್ಕೆ ಕೊನೆ ಸಾರಿದ ಬೆಂಜಮಿನ್ ನೇತನ್ಯಾಹು

ಇಸ್ರೇಲ್ ಭದ್ರತಾ ಸಚಿವಾಲಯವು ಬೇಷರತ್ತಾದ ಕದನ ವಿರಾಮ ಒಪ್ಪಿದೆ. ಈಜಿಪ್ಟ್ ಶಿಫಾರಸನ್ನು ಇಸ್ರೇಲ್‌ ಸ್ವೀಕರಿಸಿದೆ ಎಂದು ನೇತನ್ಯಾಹು ಹೇಳಿದ್ದರೆ ಹಮಾಸ್ ಸಂಘಟನೆಯು ಕದನ ವಿರಾಮವನ್ನು ದೃಢಪಡಿಸಿದೆ.

ಶುಭ ಶುಕ್ರವಾರ: ಗಾಜಾ ಪಟ್ಟಿಯಲ್ಲಿ 11 ದಿನಗಳ ಸಂಘರ್ಷಕ್ಕೆ ಕೊನೆ ಸಾರಿದ ಬೆಂಜಮಿನ್ ನೇತನ್ಯಾಹು
ಶುಭ ಶುಕ್ರವಾರ: ಗಾಜಾ ಪಟ್ಟಿಯಲ್ಲಿ 11 ದಿನಗಳ ಸಂಘರ್ಷಕ್ಕೆ ಕೊನೆ ಸಾರಿದ ಬೆಂಜಮಿನ್ ನೇತನ್ಯಾಹು
ಸಾಧು ಶ್ರೀನಾಥ್​
|

Updated on:May 21, 2021 | 9:53 AM

Share

ಗಾಜಾ ಪಟ್ಟಿಯಲ್ಲಿ ಇಂದು ಶುಭ ಶುಕ್ರವಾರ. ಸದ್ಯಕ್ಕೆ ಯುದ್ಧ ವಿರಾಮ ಘೋಷಿಸಲಾಗಿದೆ. ಗಾಜಾ ಪಟ್ಟಿಯಲ್ಲಿ 11 ದಿನ ನಡೆದ ಸಶಸ್ತ್ರ ಸಂಘರ್ಷಕ್ಕೆ ಕೊನೆ ಸಾರುತ್ತಿರುವುದಾಗಿ ಇಸ್ರೇಲ್ ದೇಶದ ಪ್ರಧಾನಮಂತ್ರಿ ಬೆಂಜಮಿನ್ ನೇತನ್ಯಾಹು ಪ್ರಕಟಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 2:00 ಗಂಟೆಗೆ ಕದನ ಜಾರಿಗೆ ಬರಲಿದೆ

ಕದನ ವಿರಾಮ ಘೋಷಣೆ ಮೂಲಕ ಗಾಜಾ ಪಟ್ಟಿಯಲ್ಲಿ ನಡೆದ ಸಶಸ್ತ್ರ ಸಂಘರ್ಷ ಕೊನೆಗೊಂಡಿದೆ. ಕದನ ವಿರಾಮ ಘೋಷಿಸಲು ಇಸ್ರೇಲ್ ಮತ್ತು ಹಮಾಸ್ ದ್ವಿಪಕ್ಷೀಯವಾಗಿ ಒಪ್ಪಿಗೆ ಸೂಚಿಸಿವೆ ಎಂದು ಕದನ ವಿರಾಮದ ಬಗ್ಗೆ ಬೆಂಜಮಿನ್ ನೇತನ್ಯಾಹು ಸ್ಪಷ್ಟಪಡಿಸಿದ್ದಾರೆ.

ಇಸ್ರೇಲ್ ಭದ್ರತಾ ಸಚಿವಾಲಯವು ಬೇಷರತ್ತಾದ ಕದನ ವಿರಾಮ ಒಪ್ಪಿದೆ. ಈಜಿಪ್ಟ್ ಶಿಫಾರಸನ್ನು ಇಸ್ರೇಲ್‌ ಸ್ವೀಕರಿಸಿದೆ ಎಂದು ನೇತನ್ಯಾಹು ಹೇಳಿದ್ದರೆ ಹಮಾಸ್ ಸಂಘಟನೆಯು ಕದನ ವಿರಾಮವನ್ನು ದೃಢಪಡಿಸಿದೆ.

ಕಳೆದ ಒಂದು ತಿಂಗಳಿನಿಂದ ಇಸ್ರೇಲ್ ಸರ್ಕಾರ ಮತ್ತು ಹಮಾಸ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.  ಕೆಲವು ದಿನಗಳಿಂದ ಎರಡೂ ಕಡೆಯವರು ಶೆಲ್ ದಾಳಿಯಲ್ಲಿ ತೊಡಗಿದ್ದರು. ವರದಿಗಳ ಪ್ರಕಾರ, ಗಾಜಾದಲ್ಲಿ 10 ಮಕ್ಕಳು ಸೇರಿದಂತೆ 32 ಪ್ಯಾಲೆಸ್ತೀನಿಯನ್ನರು  ಸಾವಿಗೀಡಾಗಿದ್ದಾರೆ. 200 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇಸ್ರೇಲ್‌ನಲ್ಲಿ ಕೇರಳದ ಮಹಿಳೆ ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದರು.

ಗಾಜಾ ಪಟ್ಟಿ ಹಿಂಸಾಚಾರವು ಮುಸ್ಲಿಂ ಉಪವಾಸದ ರಂಜಾನ್ ಮಾಸದ ವೇಳೆ ನಡೆದಿದ್ದು, ಇದು ಧಾರ್ಮಿಕ ಭಾವನೆಗಳನ್ನು ಮತ್ತಷ್ಟು ಕೆರಳಿಸಿತ್ತು. ಜೆರುಸಲೆಂ ಓಲ್ಡ್ ಸಿಟಿ ಮತ್ತು ಫ್ಲ್ಯಾಷ್ ಪಾಯಿಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಸ್ರೇಲಿ ಪೊಲೀಸ್ ಕ್ರಮಗಳು ಅಶಾಂತಿಗೆ ಕಾರಣವಾಗಿದ್ದವು.

(Israel and Hamas in Truce mood, Egyptian mediated truce between Israel and Hamas began on Friday)

Gaza Violence: ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇಸ್ರೇಲ್​ಗೆ ಇದೆ: ಅಮೆರಿಕ ಅಧ್ಯಕ್ಷ ಜೊ ಬೈಡನ್

Published On - 9:30 am, Fri, 21 May 21

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ