AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ ಶುಕ್ರವಾರ: ಗಾಜಾ ಪಟ್ಟಿಯಲ್ಲಿ 11 ದಿನಗಳ ಸಂಘರ್ಷಕ್ಕೆ ಕೊನೆ ಸಾರಿದ ಬೆಂಜಮಿನ್ ನೇತನ್ಯಾಹು

ಇಸ್ರೇಲ್ ಭದ್ರತಾ ಸಚಿವಾಲಯವು ಬೇಷರತ್ತಾದ ಕದನ ವಿರಾಮ ಒಪ್ಪಿದೆ. ಈಜಿಪ್ಟ್ ಶಿಫಾರಸನ್ನು ಇಸ್ರೇಲ್‌ ಸ್ವೀಕರಿಸಿದೆ ಎಂದು ನೇತನ್ಯಾಹು ಹೇಳಿದ್ದರೆ ಹಮಾಸ್ ಸಂಘಟನೆಯು ಕದನ ವಿರಾಮವನ್ನು ದೃಢಪಡಿಸಿದೆ.

ಶುಭ ಶುಕ್ರವಾರ: ಗಾಜಾ ಪಟ್ಟಿಯಲ್ಲಿ 11 ದಿನಗಳ ಸಂಘರ್ಷಕ್ಕೆ ಕೊನೆ ಸಾರಿದ ಬೆಂಜಮಿನ್ ನೇತನ್ಯಾಹು
ಶುಭ ಶುಕ್ರವಾರ: ಗಾಜಾ ಪಟ್ಟಿಯಲ್ಲಿ 11 ದಿನಗಳ ಸಂಘರ್ಷಕ್ಕೆ ಕೊನೆ ಸಾರಿದ ಬೆಂಜಮಿನ್ ನೇತನ್ಯಾಹು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 21, 2021 | 9:53 AM

Share

ಗಾಜಾ ಪಟ್ಟಿಯಲ್ಲಿ ಇಂದು ಶುಭ ಶುಕ್ರವಾರ. ಸದ್ಯಕ್ಕೆ ಯುದ್ಧ ವಿರಾಮ ಘೋಷಿಸಲಾಗಿದೆ. ಗಾಜಾ ಪಟ್ಟಿಯಲ್ಲಿ 11 ದಿನ ನಡೆದ ಸಶಸ್ತ್ರ ಸಂಘರ್ಷಕ್ಕೆ ಕೊನೆ ಸಾರುತ್ತಿರುವುದಾಗಿ ಇಸ್ರೇಲ್ ದೇಶದ ಪ್ರಧಾನಮಂತ್ರಿ ಬೆಂಜಮಿನ್ ನೇತನ್ಯಾಹು ಪ್ರಕಟಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ 2:00 ಗಂಟೆಗೆ ಕದನ ಜಾರಿಗೆ ಬರಲಿದೆ

ಕದನ ವಿರಾಮ ಘೋಷಣೆ ಮೂಲಕ ಗಾಜಾ ಪಟ್ಟಿಯಲ್ಲಿ ನಡೆದ ಸಶಸ್ತ್ರ ಸಂಘರ್ಷ ಕೊನೆಗೊಂಡಿದೆ. ಕದನ ವಿರಾಮ ಘೋಷಿಸಲು ಇಸ್ರೇಲ್ ಮತ್ತು ಹಮಾಸ್ ದ್ವಿಪಕ್ಷೀಯವಾಗಿ ಒಪ್ಪಿಗೆ ಸೂಚಿಸಿವೆ ಎಂದು ಕದನ ವಿರಾಮದ ಬಗ್ಗೆ ಬೆಂಜಮಿನ್ ನೇತನ್ಯಾಹು ಸ್ಪಷ್ಟಪಡಿಸಿದ್ದಾರೆ.

ಇಸ್ರೇಲ್ ಭದ್ರತಾ ಸಚಿವಾಲಯವು ಬೇಷರತ್ತಾದ ಕದನ ವಿರಾಮ ಒಪ್ಪಿದೆ. ಈಜಿಪ್ಟ್ ಶಿಫಾರಸನ್ನು ಇಸ್ರೇಲ್‌ ಸ್ವೀಕರಿಸಿದೆ ಎಂದು ನೇತನ್ಯಾಹು ಹೇಳಿದ್ದರೆ ಹಮಾಸ್ ಸಂಘಟನೆಯು ಕದನ ವಿರಾಮವನ್ನು ದೃಢಪಡಿಸಿದೆ.

ಕಳೆದ ಒಂದು ತಿಂಗಳಿನಿಂದ ಇಸ್ರೇಲ್ ಸರ್ಕಾರ ಮತ್ತು ಹಮಾಸ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.  ಕೆಲವು ದಿನಗಳಿಂದ ಎರಡೂ ಕಡೆಯವರು ಶೆಲ್ ದಾಳಿಯಲ್ಲಿ ತೊಡಗಿದ್ದರು. ವರದಿಗಳ ಪ್ರಕಾರ, ಗಾಜಾದಲ್ಲಿ 10 ಮಕ್ಕಳು ಸೇರಿದಂತೆ 32 ಪ್ಯಾಲೆಸ್ತೀನಿಯನ್ನರು  ಸಾವಿಗೀಡಾಗಿದ್ದಾರೆ. 200 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇಸ್ರೇಲ್‌ನಲ್ಲಿ ಕೇರಳದ ಮಹಿಳೆ ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದರು.

ಗಾಜಾ ಪಟ್ಟಿ ಹಿಂಸಾಚಾರವು ಮುಸ್ಲಿಂ ಉಪವಾಸದ ರಂಜಾನ್ ಮಾಸದ ವೇಳೆ ನಡೆದಿದ್ದು, ಇದು ಧಾರ್ಮಿಕ ಭಾವನೆಗಳನ್ನು ಮತ್ತಷ್ಟು ಕೆರಳಿಸಿತ್ತು. ಜೆರುಸಲೆಂ ಓಲ್ಡ್ ಸಿಟಿ ಮತ್ತು ಫ್ಲ್ಯಾಷ್ ಪಾಯಿಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಸ್ರೇಲಿ ಪೊಲೀಸ್ ಕ್ರಮಗಳು ಅಶಾಂತಿಗೆ ಕಾರಣವಾಗಿದ್ದವು.

(Israel and Hamas in Truce mood, Egyptian mediated truce between Israel and Hamas began on Friday)

Gaza Violence: ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇಸ್ರೇಲ್​ಗೆ ಇದೆ: ಅಮೆರಿಕ ಅಧ್ಯಕ್ಷ ಜೊ ಬೈಡನ್

Published On - 9:30 am, Fri, 21 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ