AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದಲ್ಲಿ ಹಮಾಸ್​ನ ಅಡಗುತಾಣಗಳ ಮೇಲೆ ದಾಳಿ ನಡೆಸಿ ಒತ್ತೆಯಾಳುಗಳನ್ನು ರಕ್ಷಿಸಿದ ಇಸ್ರೇಲ್ ಸೈನಿಕರು

ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. 250ಕ್ಕೂ ಹೆಚ್ಚಿ ಇಸ್ರೇಲಿ ಜನರನ್ನು ಹಮಾಸ್​ ಉಗ್ರರು ಒತ್ತೆಯಾಳಾಗಿರಿಸಿಕೊಂಡಿದ್ದರು. ಒಂದೊಮ್ಮೆ ಗಾಜಾದ ಮೇಲೆ ದಾಳಿ ನಡೆಸಿದರೆ ನಾವು ಒಬ್ಬೊಬ್ಬರನ್ನೇ ಕೊಲ್ಲುತ್ತೇವೆ ಎಂದು ಉಗ್ರರು ಬೆದರಿಕೆ ಹಾಕುತ್ತಿದ್ದರು. ಇಸ್ರೇಲ್ ನಿರಂತರವಾಗಿ ಗಾಜಾದಲ್ಲಿ ಹಮಾಸ್ ಸ್ಥಾನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಹಮಾಸ್ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್​ ಸೈನಿಕರು ದಾಳಿ ನಡೆಸಿ 250 ಮಂದಿಯನ್ನು ರಕ್ಷಿಸಿದ್ದಾರೆ.

ಗಾಜಾದಲ್ಲಿ ಹಮಾಸ್​ನ ಅಡಗುತಾಣಗಳ ಮೇಲೆ ದಾಳಿ ನಡೆಸಿ ಒತ್ತೆಯಾಳುಗಳನ್ನು ರಕ್ಷಿಸಿದ ಇಸ್ರೇಲ್ ಸೈನಿಕರು
ಇಸ್ರೇಲ್ ಸೇನೆImage Credit source: NDTV
ನಯನಾ ರಾಜೀವ್
|

Updated on: Oct 13, 2023 | 12:57 PM

Share

ಇಸ್ರೇಲ್(Israel) ಹಾಗೂ ಹಮಾಸ್(Hamas) ಉಗ್ರರ ನಡುವಿನ ಸಂಘರ್ಷ ತಾರಕಕ್ಕೇರುತ್ತಿದೆ. 250ಕ್ಕೂ ಹೆಚ್ಚಿ ಇಸ್ರೇಲಿ ಜನರನ್ನು ಹಮಾಸ್​ ಉಗ್ರರು ಒತ್ತೆಯಾಳಾಗಿರಿಸಿಕೊಂಡಿದ್ದರು. ಒಂದೊಮ್ಮೆ ಗಾಜಾದ ಮೇಲೆ ದಾಳಿ ನಡೆಸಿದರೆ ನಾವು ಒಬ್ಬೊಬ್ಬರನ್ನೇ ಕೊಲ್ಲುತ್ತೇವೆ ಎಂದು ಉಗ್ರರು ಬೆದರಿಕೆ ಹಾಕುತ್ತಿದ್ದರು. ಇಸ್ರೇಲ್ ನಿರಂತರವಾಗಿ ಗಾಜಾದಲ್ಲಿ ಹಮಾಸ್ ಸ್ಥಾನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಹಮಾಸ್ ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್​ ಸೈನಿಕರು ದಾಳಿ ನಡೆಸಿ 250 ಮಂದಿಯನ್ನು ರಕ್ಷಿಸಿದ್ದಾರೆ.

60 ಹಮಾಸ್​ ಉಗ್ರರನ್ನು ಹತ್ಯೆ ಮಾಡಲಾಗಿದೆ, 26 ಉಗ್ರರನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ. ಹಮಾಸ್ ದಕ್ಷಿಣ ನೌಕಾ ವಿಭಾಗದ ಉಪ ಕಮಾಂಡರ್ ಮುಹಮ್ಮದ್ ಅಬು ಅಲಿಯನ್ನೂ ಜೀವಂತವಾಗಿ ಸೆರೆಹಿಡಿದಿರುವುದು ಇಸ್ರೇಲಿ ಸೇನೆ ಸಾಧಿಸಿದ ದೊಡ್ಡ ವಿಜಯವಾಗಿದೆ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ಸ್ರೇಲಿ ಸೈನಿಕರು ಕಟ್ಟಡಕ್ಕೆ ಪ್ರವೇಶಿಸುತ್ತಿರುವುದನ್ನು ಕಾಣಬಹುದು. ಗುಂಡುಗಳ ಸದ್ದು ಕೂಡ ಕೇಳಿಸುತ್ತದೆ. ಒಬ್ಬ ಸೈನಿಕನು ಹಿಂದಿನಿಂದ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು ಮತ್ತು ಇನ್ನೊಬ್ಬರು ಪೋಸ್ಟ್‌ಗೆ ಗ್ರೆನೇಡ್ ಎಸೆಯುವುದನ್ನು ಕಾಣಬಹುದು. ಸೈನಿಕರು ಬಂಕರ್‌ನೊಳಗೆ ಹೋಗಿ ಒತ್ತೆಯಾಳುಗಳನ್ನು ರಕ್ಷಿಸಲು ಮತ್ತು ಅವರಿಗೆ ಯಾವುದೇ ಪ್ರಥಮ ಚಿಕಿತ್ಸೆ ಅಗತ್ಯವಿದ್ದರೆ ನೀಡುವುದಾಗಿ ಭರವಸೆ ನೀಡಿದರು.

ಮತ್ತಷ್ಟು ಓದಿ: ಗರ್ಭಿಣಿಯ ಹೊಟ್ಟೆ ಸೀಳಿತ್ತು, ಭ್ರೂಣಕ್ಕೆ ಚೂರಿಯಿಂದ ಇರಿಯಲಾಗಿತ್ತು, ಇದು ಇಸ್ರೇಲ್​ನ ಈಗಿನ ಭಯಾನಕ ಸ್ಥಿತಿ

ನಂತರ ದೃಶ್ಯಗಳಲ್ಲಿ, ಸೈನಿಕರು ಸ್ಟ್ರೆಚರ್ ಅನ್ನು ಹೊತ್ತೊಯ್ಯುತ್ತಿರುವುದನ್ನು ಕಾಣಬಹುದು. ಇಂದು ಇಸ್ರೇಲ್-ಹಮಾಸ್ ಯುದ್ಧದ ಏಳನೇ ದಿನ. ಯುದ್ಧ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಸಂಘರ್ಷ ಪ್ರಾರಂಭವಾದಾಗಿನಿಂದ ಇಸ್ರೇಲ್‌ನಲ್ಲಿ ಕನಿಷ್ಠ 1,300 ಜನರು ಮತ್ತು ಗಾಜಾ ಪಟ್ಟಿಯಲ್ಲಿ 1,500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮಾತನಾಡಿ, ನಾವು ಯುದ್ಧ ಪ್ರಾರಂಭಿಸಿಲ್ಲ ಆದರೆ ನಮ್ಮಿಂದಲೇ ಯುದ್ಧ ಕೊನೆಗಾಣುತ್ತದೆ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್