AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ದಾಳಿಯಿಂದ ತಪ್ಪಿಸಿಕೊಳ್ಳಲು ಇಸ್ರೇಲ್​​​ ‘ಅಪ್ಪ’ನ ಬಳಿಗೆ ಓಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ: ಇರಾನ್ ವಿದೇಶಾಂಗ ಸಚಿವ

ಅಮೆರಿಕ, ಇರಾನ್​, ಇಸ್ರೇಲ್ ಮೂರು ರಾಷ್ಟ್ರಗಳ ನಡುವೆ ಯುದ್ಧ ವಾತಾವರಣ ಸೃಷ್ಟಿಯಾಗಿದ್ದು, ಮೂರು ರಾಷ್ಟ್ರಗಳು ದಾಳಿಯನ್ನು ನಡೆಸಿದೆ. ಇದರ ಜತೆಗೆ ಅಲ್ಲಿನ ನಾಯಕಗಳು ಹೇಳಿಕೆ ಮೂಲಕ ಕೂಡ ಹೇಳಿಕೆಯ ದಾಳಿಯನ್ನು ಕೂಡ ನಡೆಸಿದ್ದಾರೆ. ಇದೀಗ ಅಮೆರಿಕ ಅಧ್ಯಕ್ಷ ಟ್ರಂಪ್​​ ನೀಡಿದ ಹೇಳಿಕೆಗೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಡೊನಾಲ್ಡ್ ಟ್ರಂಪ್ ವಿರುದ್ಧ ಕೆಂಡಕಾರುತ್ತಿದ್ದಾರೆ.

ನಮ್ಮ ದಾಳಿಯಿಂದ ತಪ್ಪಿಸಿಕೊಳ್ಳಲು ಇಸ್ರೇಲ್​​​ 'ಅಪ್ಪ'ನ ಬಳಿಗೆ ಓಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ: ಇರಾನ್ ವಿದೇಶಾಂಗ ಸಚಿವ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jun 28, 2025 | 10:26 AM

Share

ಅಮೆರಿಕ, ಇರಾನ್​, ಇಸ್ರೇಲ್​​, ಈ ಮೂರು ರಾಷ್ಟ್ಟಗಳ ನಡುವೆ ಯುದ್ಧ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಇರಾನ್​ ಮೇಲೆ ಅಮೆರಿಕ ಹಾಗೂ ಇಸ್ರೇಲ್​ ಮುಗಿಬಿದ್ದಿದೆ. ಇದರ ನಡುವೆ ಇರಾನ್​​​​​​ ತನ್ನ ಹಠ ಬಿಡದೆ, ಈ ಎರಡು ಬಲಿಷ್ಠ ರಾಷ್ಟ್ರಗಳ ವಿರುದ್ಧ ಹೋರಾಡಲು ಮುಂದಾಗಿದೆ. ಇರಾನ್ ದೇಶ ಅಮೆರಿಕ ಮತ್ತು ಇಸ್ರೇಲ್​​​ಗೆ ಶರಣಾಗಬೇಕು ಎಂದು ಹೇಳಿತ್ತು. ಇದಕ್ಕೆ ಒಪ್ಪದ ಇರಾನ್​​ ಯಾವುದೇ ಕಾರಣಕ್ಕೂ ನೀವು ಹೇಳಿದಂತೆ ಕೇಳುವುದಿಲ್ಲ ಎಂದು ಹೇಳಿದೆ. ಅಮೆರಿಕ ಕೂಡ ಇರಾನ್​​​​​ ವಾಯು ನೆಲೆಗಳ ಮೇಲೆ ದಾಳಿಯನ್ನು ನಡೆಸಿದೆ. ಇದರಿಂದ ಇರಾನ್​​ ಅಮೆರಿಕದ ಮೇಲೆ ಕೂಡ ಕೆಂಡಕಾರುತ್ತಿದ್ದಾರೆ. ಅಮೆರಿಕದ ಅಧ್ಯಕ್ಷ ಟ್ರಂಪ್ ಇರಾನ್‌ನ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರನ್ನು ಭೀಕರ ದಾಳಿಯಿಂದ ರಕ್ಷಣೆ ಮಾಡಿದ್ದೇವೆ. ಇದಕ್ಕೆ ಧನ್ಯವಾದ ಹೇಳುವ ಅವಶ್ಯಕತೆ ಇಲ್ಲ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ಇಂದು (ಜೂ.28) ಪ್ರತಿಕ್ರಿಯೆ ನೀಡಿದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಡೊನಾಲ್ಡ್ ಟ್ರಂಪ್ ಅವರ ನಮ್ಮ ನಾಯಕರಿಗೆ ಅಗೌರವ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

ಟ್ರಂಪ್ ಒಪ್ಪಂದವನ್ನು ಬಯಸುವುದು ನಿಜವಾಗಿದ್ದರೆ, ಅವರು ಇರಾನ್‌ನ ಸರ್ವೋಚ್ಚ ನಾಯಕ ಗ್ರ್ಯಾಂಡ್ ಅಯತೊಲ್ಲಾ ಖಮೇನಿ ಬಗ್ಗೆ ಇಂತಹ ಮಾತುಗಳನ್ನು ಹೇಳುತ್ತಿರಲಿಲ್ಲ. ನಮ್ಮ ನಾಯಕ ಲಕ್ಷಾಂತರ ಜನರ ಮನಸ್ಸಿನಲ್ಲಿದ್ದರೆ, ಅವರನ್ನು ಅವಮಾನಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಈಗಲೇ ಇಂತಹ ಹೇಳಿಕೆ ನೀಡುವುದನ್ನು ಬಿಡಬೇಕು ಎಂದು ಹೇಳಿದ್ದಾರೆ. ನಮ್ಮ ಕ್ಷಿಪಣಿ ದಾಳಿಯಿಂದ ತಪ್ಪಿಸಿಕೊಳ್ಳಲು ಇಸ್ರೇಲಿ ಆಡಳಿತಕ್ಕೆ ‘ಅಪ್ಪ’ನ ಬಳಿಗೆ ಓಡುವುದನ್ನು ಬಿಟ್ಟು ಬೇರೆ ದಾರಿ ಇರಲಿಲ್ಲ ಎಂದು ಎಕ್ಸ್​​ನಲ್ಲಿ ಟ್ವೀಟ್​ ಮಾಡಿದ್ದಾರೆ. ಈ ಭಯವನ್ನು ಇಡೀ ಜಗತ್ತಿಗೆ ತೋರಿಸಿದೆ ಇರಾನ್​​​, ಇಂತಹ ಅವಮಾನಗಳನ್ನು ಶಾಂತಿಯಿಂದ ಅಲ್ಲ. ಯುದ್ಧದಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ವಿರುದ್ಧ ಚೀನಾ ಗೌಪ್ಯ ಮಾಹಿತಿ ನೀಡಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್

ಇದನ್ನೂ ಓದಿ
Image
ಟ್ರಂಪ್​ಗೆ ಶಾಂತಿ ಪುರಸ್ಕಾರ ಘೋಷಿಸಿ, ಈಗ ಪ್ರತಿಭಟನೆ ಮಾಡಿದ ಪಾಕಿಸ್ತಾನ
Image
ಇರಾನ್ ಮೇಲೆ ದಾಳಿ ನಡೆಸಿ ಸುಮ್ಮನಾದ ಟ್ರಂಪ್, ರಷ್ಯಾಗೆ ಹೊರಟ ಅಬ್ಬಾಸ್
Image
ಅಮೆರಿಕ-ಇರಾನ್ ನಡುವೆ ಹೆಚ್ಚಿದ ಉದ್ವಿಗ್ನತೆ, ರಷ್ಯಾದ ಮೊರೆ ಹೋದ ಇರಾನ್
Image
ಅಮೆರಿಕ ದೊಡ್ಡ ತಪ್ಪು ಮಾಡಿದೆ, ತಕ್ಕ ಶಿಕ್ಷೆ ಅನುಭವಿಸಲಿದೆ: ಖಮೇನಿ

ಕಳೆದ ವಾರ ಅಮೆರಿಕವು ಇರಾನಿನ ಮೂರು ಪರಮಾಣು ತಾಣಗಳ ಮೇಲೆ ದಾಳಿ ನಡೆಸಿತು, ಅದು ತುಂಬಾ ದೊಡ್ಡ ದಾಳಿ ಕೂಡ ಆಗಿತ್ತು. ಜೂನ್ 13 ರಂದು ಪ್ರಾರಂಭವಾದ 12 ದಿನಗಳ ಸಂಘರ್ಷದಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮದ ಮೇಲೆ ಇಸ್ರೇಲ್ ಬಾಂಬ್​​ ದಾಳಿಯನ್ನು ನಡೆಸಿತ್ತು. ಇದರ ಜತೆಗೆ ಅಮೆರಿಕ ಕೂಡ ಇದಕ್ಕೆ ಕೈಜೋಡಿಸಿತ್ತು. ಟ್ರಂಪ್ ತಮ್ಮ ಟ್ರೂತ್ ಖಾತೆಯಲ್ಲಿ ಇರಾನ್ ನಾಯಕನನ್ನು ಹತ್ಯೆಯಿಂದ ರಕ್ಷಿಸಿದ್ದೇನೆ ಎಂದು ಬರೆದುಕೊಂಡಿದ್ದರು. ಆದರೆ ಇದನ್ನು ಇರಾನ್​​ ನಾಯಕರು ವಿರೋಧಿಸಿದ್ದಾರೆ. ಅಯತೊಲ್ಲಾ ಅಲಿ ಖಮೇನಿ ಎಲ್ಲಿ ಆಶ್ರಯ ಪಡೆದಿದ್ದಾರೆಂದು ನನಗೆ ನಿಖರವಾಗಿ ತಿಳಿದಿತ್ತು, ಮತ್ತು ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಶಕ್ತಿಶಾಲಿಯಾದ ಇಸ್ರೇಲ್ ಹಾಗೂ ಅಮೆರಿಕದ ಸಶಸ್ತ್ರ ಪಡೆಗಳು ಅವರ ಜೀವನವನ್ನು ಕೊನೆಗೊಳಿಸಲು ಬಿಡಲಿಲ್ಲ ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Sat, 28 June 25

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!