AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್, ಹಮಾಸ್ ನಡುವಿನ ತಾತ್ಕಾಲಿಕ ಕದನ ವಿರಾಮ ಅಂತ್ಯ, ಗಾಜಾದಲ್ಲಿ ಘರ್ಷಣೆ ಆರಂಭ

ಇಸ್ರೇಲ್​(Israel) ಹಾಗೂ ಹಮಾಸ್(Hamas)​ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡಿದ್ದು, ಗಾಜಾದಲ್ಲಿ ಮತ್ತೆ ಘರ್ಷಣೆ ಪ್ರಾರಂಭವಾಗಿದೆ. ನವೆಂಬರ್ 24 ರಂದು ಮೊದಲು ನಾಲ್ಕು ದಿನಗಳ ಕದನ ವಿರಾಮ ಘೋಷಿಸಲಾಗಿತ್ತು, ಅದಾದ ಬಳಿಕ ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು. ಇದೀಗ ಒಂದು ವಾರದ ಬಳಿಕ ಒಪ್ಪಂದ ಅಂತ್ಯಗೊಂಡಿದೆ.

ಇಸ್ರೇಲ್, ಹಮಾಸ್ ನಡುವಿನ ತಾತ್ಕಾಲಿಕ ಕದನ ವಿರಾಮ ಅಂತ್ಯ, ಗಾಜಾದಲ್ಲಿ ಘರ್ಷಣೆ ಆರಂಭ
ಗಾಜಾ
ನಯನಾ ರಾಜೀವ್
|

Updated on: Dec 01, 2023 | 11:42 AM

Share

ಇಸ್ರೇಲ್​(Israel) ಹಾಗೂ ಹಮಾಸ್(Hamas)​ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡಿದ್ದು, ಗಾಜಾದಲ್ಲಿ ಮತ್ತೆ ಘರ್ಷಣೆ ಪ್ರಾರಂಭವಾಗಿದೆ. ನವೆಂಬರ್ 24 ರಂದು ಮೊದಲು ನಾಲ್ಕು ದಿನಗಳ ಕದನ ವಿರಾಮ ಘೋಷಿಸಲಾಗಿತ್ತು, ಅದಾದ ಬಳಿಕ ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು. ಇದೀಗ ಒಂದು ವಾರದ ಬಳಿಕ ಒಪ್ಪಂದ ಅಂತ್ಯಗೊಂಡಿದೆ.

ಇಂದು ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿಯನ್ನು ಬೆಳಗ್ಗೆ 7 ಗಂಟೆಯೊಳಗೆ ಹಮಾಸ್ ಇಸ್ರೇಲ್ಗೆ ನೀಡಿಲ್ಲ ಎಂದು ಇಸ್ರೇಲಿ ಮಾಧ್ಯಮ ಹೇಳಿದೆ. ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಮತ್ತು ಹೆಚ್ಚುವರಿಯಾಗಿ ಇಸ್ರೇಲ್ ಮೇಲೆ ರಾಕೆಟ್ ಹಾರಿಸಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿದೆ.

ಎಂಟು ಇಸ್ರೇಲಿ ಒತ್ತೆಯಾಳುಗಳನ್ನು ಏಳು ದಿನಗಳ ಕಾಲ ನಡೆದ ತಾತ್ಕಾಲಿಕ ಕದನ ವಿರಾಮ ಒಪ್ಪಂದದ ಭಾಗವಾಗಿ ಗಾಜಾ ಪಟ್ಟಿಯಲ್ಲಿರುವ ಹಮಾಸ್ ಸೆರೆಯಿಂದ ಬಿಡುಗಡೆ ಮಾಡಲಾಯಿತು. ಇಸ್ರೇಲ್ ಮತ್ತು ಪ್ಯಾಲೇಸ್ಟಿನಿಯನ್ನರ ನಡುವಿನ ದಶಕಗಳಲ್ಲಿ ಮಾರಣಾಂತಿಕ ಹೋರಾಟವನ್ನು ವಿರಾಮಗೊಳಿಸಿರುವ ಒಪ್ಪಂದದ ಒಪ್ಪಂದದ ಅಡಿಯಲ್ಲಿ ಇಸ್ರೇಲ್ ಶುಕ್ರವಾರ ಮುಂಜಾನೆ 30 ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

ಮತ್ತಷ್ಟು ಓದಿ: ಇಸ್ರೇಲ್​-ಹಮಾಸ್ ನಡುವೆ 4 ದಿನಗಳ ಕದನ ವಿರಾಮ, ಇಂದು 13 ಒತ್ತೆಯಾಳುಗಳ ಬಿಡುಗಡೆ

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ 5000 ರಾಕೆಟ್​ಗಳಿಂದ ದಾಳಿ ನಡೆಸಿ 1,500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಬಳಿಕ ಇಸ್ರೇಲ್ ನಡೆಸಿದ ಪ್ರತಿದಾಳೀಯಲ್ಲಿ ಗಾಜಾದಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು.

ಹಮಾಸ್​ನ್ನು ಹತ್ತಿಕ್ಕುವವರೆಗೂ ಯುದ್ಧ ನಿಲ್ಲುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುದ್ಧವನ್ನು ಆರಂಭಿಸಿದವರು ನಾವಲ್ಲ ಆದರೆ ನಮ್ಮಿಂದಲೇ ಅಂತ್ಯವಾಗುತ್ತದೆ ಎಂದು ಕೂಡ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?