AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್, ಹಮಾಸ್ ನಡುವಿನ ತಾತ್ಕಾಲಿಕ ಕದನ ವಿರಾಮ ಅಂತ್ಯ, ಗಾಜಾದಲ್ಲಿ ಘರ್ಷಣೆ ಆರಂಭ

ಇಸ್ರೇಲ್​(Israel) ಹಾಗೂ ಹಮಾಸ್(Hamas)​ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡಿದ್ದು, ಗಾಜಾದಲ್ಲಿ ಮತ್ತೆ ಘರ್ಷಣೆ ಪ್ರಾರಂಭವಾಗಿದೆ. ನವೆಂಬರ್ 24 ರಂದು ಮೊದಲು ನಾಲ್ಕು ದಿನಗಳ ಕದನ ವಿರಾಮ ಘೋಷಿಸಲಾಗಿತ್ತು, ಅದಾದ ಬಳಿಕ ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು. ಇದೀಗ ಒಂದು ವಾರದ ಬಳಿಕ ಒಪ್ಪಂದ ಅಂತ್ಯಗೊಂಡಿದೆ.

ಇಸ್ರೇಲ್, ಹಮಾಸ್ ನಡುವಿನ ತಾತ್ಕಾಲಿಕ ಕದನ ವಿರಾಮ ಅಂತ್ಯ, ಗಾಜಾದಲ್ಲಿ ಘರ್ಷಣೆ ಆರಂಭ
ಗಾಜಾ
ನಯನಾ ರಾಜೀವ್
|

Updated on: Dec 01, 2023 | 11:42 AM

Share

ಇಸ್ರೇಲ್​(Israel) ಹಾಗೂ ಹಮಾಸ್(Hamas)​ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಂಡಿದ್ದು, ಗಾಜಾದಲ್ಲಿ ಮತ್ತೆ ಘರ್ಷಣೆ ಪ್ರಾರಂಭವಾಗಿದೆ. ನವೆಂಬರ್ 24 ರಂದು ಮೊದಲು ನಾಲ್ಕು ದಿನಗಳ ಕದನ ವಿರಾಮ ಘೋಷಿಸಲಾಗಿತ್ತು, ಅದಾದ ಬಳಿಕ ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು. ಇದೀಗ ಒಂದು ವಾರದ ಬಳಿಕ ಒಪ್ಪಂದ ಅಂತ್ಯಗೊಂಡಿದೆ.

ಇಂದು ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಪಟ್ಟಿಯನ್ನು ಬೆಳಗ್ಗೆ 7 ಗಂಟೆಯೊಳಗೆ ಹಮಾಸ್ ಇಸ್ರೇಲ್ಗೆ ನೀಡಿಲ್ಲ ಎಂದು ಇಸ್ರೇಲಿ ಮಾಧ್ಯಮ ಹೇಳಿದೆ. ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಮತ್ತು ಹೆಚ್ಚುವರಿಯಾಗಿ ಇಸ್ರೇಲ್ ಮೇಲೆ ರಾಕೆಟ್ ಹಾರಿಸಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿದೆ.

ಎಂಟು ಇಸ್ರೇಲಿ ಒತ್ತೆಯಾಳುಗಳನ್ನು ಏಳು ದಿನಗಳ ಕಾಲ ನಡೆದ ತಾತ್ಕಾಲಿಕ ಕದನ ವಿರಾಮ ಒಪ್ಪಂದದ ಭಾಗವಾಗಿ ಗಾಜಾ ಪಟ್ಟಿಯಲ್ಲಿರುವ ಹಮಾಸ್ ಸೆರೆಯಿಂದ ಬಿಡುಗಡೆ ಮಾಡಲಾಯಿತು. ಇಸ್ರೇಲ್ ಮತ್ತು ಪ್ಯಾಲೇಸ್ಟಿನಿಯನ್ನರ ನಡುವಿನ ದಶಕಗಳಲ್ಲಿ ಮಾರಣಾಂತಿಕ ಹೋರಾಟವನ್ನು ವಿರಾಮಗೊಳಿಸಿರುವ ಒಪ್ಪಂದದ ಒಪ್ಪಂದದ ಅಡಿಯಲ್ಲಿ ಇಸ್ರೇಲ್ ಶುಕ್ರವಾರ ಮುಂಜಾನೆ 30 ಪ್ಯಾಲೇಸ್ಟಿನಿಯನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

ಮತ್ತಷ್ಟು ಓದಿ: ಇಸ್ರೇಲ್​-ಹಮಾಸ್ ನಡುವೆ 4 ದಿನಗಳ ಕದನ ವಿರಾಮ, ಇಂದು 13 ಒತ್ತೆಯಾಳುಗಳ ಬಿಡುಗಡೆ

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ 5000 ರಾಕೆಟ್​ಗಳಿಂದ ದಾಳಿ ನಡೆಸಿ 1,500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಬಳಿಕ ಇಸ್ರೇಲ್ ನಡೆಸಿದ ಪ್ರತಿದಾಳೀಯಲ್ಲಿ ಗಾಜಾದಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು.

ಹಮಾಸ್​ನ್ನು ಹತ್ತಿಕ್ಕುವವರೆಗೂ ಯುದ್ಧ ನಿಲ್ಲುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುದ್ಧವನ್ನು ಆರಂಭಿಸಿದವರು ನಾವಲ್ಲ ಆದರೆ ನಮ್ಮಿಂದಲೇ ಅಂತ್ಯವಾಗುತ್ತದೆ ಎಂದು ಕೂಡ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?