AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​-ಹಮಾಸ್ ನಡುವೆ 4 ದಿನಗಳ ಕದನ ವಿರಾಮ, ಇಂದು 13 ಒತ್ತೆಯಾಳುಗಳ ಬಿಡುಗಡೆ

ಇಸ್ರೇಲ್ ಹಮಾಸ್ ನಡುವೆ ಇಂದಿನಿಂದ 4 ದಿನಗಳ ಕಾಲ ಕದನ ವಿರಾಮವಿರಲಿದ್ದು, ಇಂದು 13 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. 13 ಇಸ್ರೇಲಿ ಮಹಿಳೆಯರು ಮತ್ತು ಮಕ್ಕಳ ಒತ್ತೆಯಾಳುಗಳ ಮೊದಲ ತಂಡವನ್ನು ಆ ದಿನದ ನಂತರ ಬಿಡುಗಡೆ ಮಾಡಲಾಗುತ್ತದೆ.ಸಂಜೆಯ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕತಾರ್ ಹೇಳಿದೆ. ಇಂದು 7 ಗಂಟೆಯಿಂದ ಕದನವಿರಾಮ ಆರಂಭವಾಗಿದೆ.

ಇಸ್ರೇಲ್​-ಹಮಾಸ್ ನಡುವೆ 4 ದಿನಗಳ ಕದನ ವಿರಾಮ, ಇಂದು 13 ಒತ್ತೆಯಾಳುಗಳ ಬಿಡುಗಡೆ
ಸಂಘರ್ಷImage Credit source: India Today
ನಯನಾ ರಾಜೀವ್
|

Updated on: Nov 24, 2023 | 8:43 AM

Share

ಇಸ್ರೇಲ್(Israel) ಹಾಗೂ  ಹಮಾಸ್(Hamas) ನಡುವೆ ಇಂದಿನಿಂದ 4 ದಿನಗಳ ಕಾಲ ಕದನ ವಿರಾಮವಿರಲಿದ್ದು, ಇಂದು 13 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. 13 ಇಸ್ರೇಲಿ ಮಹಿಳೆಯರು ಮತ್ತು ಮಕ್ಕಳ ಒತ್ತೆಯಾಳುಗಳ ಮೊದಲ ತಂಡವನ್ನು ಆ ದಿನದ ನಂತರ ಬಿಡುಗಡೆ ಮಾಡಲಾಗುತ್ತದೆ.ಸಂಜೆಯ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕತಾರ್ ಹೇಳಿದೆ. ಇಂದು 7 ಗಂಟೆಯಿಂದ ಕದನವಿರಾಮ ಆರಂಭವಾಗಿದೆ.

ಬಿಡುಗಡೆ ಮಾಡಬೇಕಾದ ಒತ್ತೆಯಾಳುಗಳ ಪಟ್ಟಿಯನ್ನು ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ಗೆ ಹಸ್ತಾಂತರಿಸಲಾಗಿದೆ ಎಂದು ಮಜೀದ್ ಅಲ್ ಅನ್ಸಾರಿ ಹೇಳಿದ್ದಾರೆಂದು ಸಿಎನ್‌ಎನ್ ವರದಿ ಮಾಡಿದೆ. ಇದರೊಂದಿಗೆ ಅಕ್ಟೋಬರ್ 7 ರಂದು ಇಸ್ರೇಲ್ ಮತ್ತು ಹಮಾಸ್ ನಡುವೆ ಆರಂಭವಾದ ಯುದ್ಧಕ್ಕೆ ಮೊದಲ ಬಾರಿಗೆ ವಿರಾಮ ದೊರೆಯಲಿದೆ. ವಾಸ್ತವವಾಗಿ, ಒಪ್ಪಂದದ ಅಡಿಯಲ್ಲಿ ಕದನ ವಿರಾಮವು ಗುರುವಾರದಿಂದಲೇ ಪ್ರಾರಂಭವಾಗಬೇಕಿತ್ತು, ಆದರೆ ಅದು ಸಾಧ್ಯವಾಗಲಿಲ್ಲ.

ಇಸ್ರೇಲ್ ಮತ್ತು ಹಮಾಸ್ ನಾಲ್ಕು ದಿನಗಳ ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಒಪ್ಪಂದದ ಪ್ರಕಾರ, 150 ಪ್ಯಾಲೆಸ್ತೀನ್ ಕೈದಿಗಳ ಬಿಡುಗಡೆಗೆ ಬದಲಾಗಿ ಹಮಾಸ್ 50 ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ. ಕತಾರ್, ಈಜಿಪ್ಟ್ ಮತ್ತು ಅಮೆರಿಕದ ಮಧ್ಯಸ್ಥಿಕೆ ಒಪ್ಪಂದವನ್ನು ಇಸ್ರೇಲಿ ಕ್ಯಾಬಿನೆಟ್ ಮೂರಕ್ಕೆ 35 ಮತಗಳಿಂದ ಅನುಮೋದಿಸಿತು. ರಾಷ್ಟ್ರೀಯ ಭದ್ರತಾ ಸಚಿವ ಇತಾಮರ್ ಬೆನ್ ಗ್ವಿರ್ ಸೇರಿದಂತೆ ಬಲಪಂಥೀಯ ಒಟ್ಜ್ಮಾ ಯೆಹುದಿತ್ ಪಕ್ಷದ ಸಚಿವರು ಇದರ ವಿರುದ್ಧ ಮತ ಚಲಾಯಿಸಿದರು.

ಮತ್ತಷ್ಟು ಓದಿ: ಇಸ್ರೇಲ್-ಹಮಾಸ್ ಸಂಘರ್ಷ: ನವೆಂಬರ್​ 30ರವರೆಗೆ ಟೆಲ್ ಅವೀವ್​ಗೆ ವಿಮಾನ ಸೇವೆಯನ್ನು ಸ್ಥಗಿತಗೊಳಿಸಿದ ಏರ್​ ಇಂಡಿಯಾ

ಗಾಜಾದಲ್ಲಿ ಒತ್ತೆಯಾಳಾಗಿದ್ದ 50 ಮಹಿಳೆಯರು ಮತ್ತು ಮಕ್ಕಳನ್ನು ನಾಲ್ಕು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಪ್ರಧಾನಿ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿತ್ತು. ಈ ಅವಧಿಯಲ್ಲಿ ಕದನ ವಿರಾಮ ಇರುತ್ತದೆ. ಬಿಡುಗಡೆಯಾದ ಪ್ರತಿ 10 ಹೆಚ್ಚುವರಿ ಒತ್ತೆಯಾಳುಗಳಿಗೆ ಮರುದಿನವೂ ಕದನ ವಿರಾಮವನ್ನು ವಿಸ್ತರಿಸಲಾಗುವುದು ಎಂದು ಹೇಳಿಕೆ ತಿಳಿಸಿದೆ.

ಅಕ್ಟೋಬರ್ 7ರ ಬೆಳಗ್ಗೆ ರಾಕೆಟ್ ದಾಳಿಯೊಂದಿಗೆ ಹಮಾಸ್ ಇಸ್ರೇಲ್ ನುಸುಳಿತ್ತು. ಇದಾದ ಬಳಿಕ ಇಸ್ರೇಲ್ ಕೂಡ ಪ್ರತಿದಾಳಿ ನಡೆಸಿದ್ದು, ನಾವು ಯುದ್ಧದಲ್ಲಿದ್ದೇವೆ, ಗೆಲ್ಲುತ್ತೇವೆ ಎಂದು ಹೇಳಿತ್ತು. ಅಲ್ ಜಜೀರಾ ವರದಿಯ ಪ್ರಕಾರ, ಯುದ್ಧದ ನಂತರ ಗಾಜಾದಲ್ಲಿ 14 ಸಾವಿರದ 500 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದೇ ಸಮಯದಲ್ಲಿ, ಹಮಾಸ್‌ನ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ 1,200 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು