AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಕದನ: ಹಮಾಸ್ ಕುರಿತು ಉಲ್ಲೇಖಿಸದ ವಿಶ್ವಸಂಸ್ಥೆ ನಿರ್ಣಯ, ಮತದಾನದಿಂದ ದೂರವುಳಿದ ಭಾರತ

ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದವು, ಅದರ ವಿರುದ್ಧ 14 ರಾಷ್ಟ್ರಗಳು ಮತ ಚಲಾಯಿಸಿದರೆ, 45 ದೇಶಗಳು ಮತದಾನದಿಂದ ದೂರ ಉಳಿದವು. ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ಮತದಾನದಿಂದ ದೂರ ಉಳಿದಿವೆ.

ಇಸ್ರೇಲ್ ಕದನ: ಹಮಾಸ್ ಕುರಿತು ಉಲ್ಲೇಖಿಸದ ವಿಶ್ವಸಂಸ್ಥೆ ನಿರ್ಣಯ, ಮತದಾನದಿಂದ ದೂರವುಳಿದ ಭಾರತ
ವಿಶ್ವಸಂಸ್ಥೆಯಲ್ಲಿ ಭಾರತದ ಉಪ ಖಾಯಂ ಪ್ರತಿನಿಧಿ ಯೋಜನಾ ಪಟೇಲ್Image Credit source: UNGA
ಗಣಪತಿ ಶರ್ಮಾ
|

Updated on: Oct 28, 2023 | 10:15 AM

Share

ನವದೆಹಲಿ, ಅಕ್ಟೋಬರ್ 28: ಇಸ್ರೇಲ್-ಹಮಾಸ್ ಸಂಘರ್ಷ (Israel Hamas war) ಕೊನೆಗೊಳಿಸಿ ತಕ್ಷಣ ಮಾನವೀಯ ನೆಲೆಯಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ನಿರ್ಣಯದ (UN Resolution) ಮೇಲಿನ ಮತದಾನದಿಂದ ಭಾರತ ದೂರ ಉಳಿದಿದೆ. ಜೋರ್ಡಾನ್ ದೇಶವು ರಚಿಸಿದ ನಿರ್ಣಯವು ಗಾಜಾ ಪಟ್ಟಿಯಲ್ಲಿ ಅಡೆತಡೆಯಿಲ್ಲದ ಮಾನವೀಯ ಪ್ರವೇಶಕ್ಕೆ ಕರೆ ನೀಡಿದೆ. ಆದರೆ ಹಮಾಸ್ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ.

ಈ ಮಧ್ಯೆ, ನಿರ್ಣಯದಲ್ಲಿ ಹಮಾಸ್‌ನಿಂದ ಭಯೋತ್ಪಾದಕ ದಾಳಿಗಳನ್ನು ಖಂಡಿಸುವ ಪ್ಯಾರಾಗ್ರಾಫ್ ಅನ್ನು ಸೇರಿಸುವ ತಿದ್ದುಪಡಿಯನ್ನು ಕೆನಡಾ ಪ್ರಸ್ತಾಪಿಸಿದೆ. ಇತರ 87 ರಾಷ್ಟ್ರಗಳೊಂದಿಗೆ ಭಾರತವು ಕೆನಡಾದ ಪ್ರಸ್ತಾವಿತ ತಿದ್ದುಪಡಿಯ ಪರವಾಗಿ ಮತ ಚಲಾಯಿಸಿತು. ಆದರೆ ಮೂರನೇ ಎರಡರಷ್ಟು ಬಹುಮತ ಇಲ್ಲದ ಕಾರಣ ಅದನ್ನು ಅಂಗೀಕರಿಸಲಾಗಲಿಲ್ಲ.

ಕೊನೆಯದಾಗಿ ‘ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವುದು’ ಎಂಬ ಶೀರ್ಷಿಕೆಯ ಜೋರ್ಡಾನ್ ಮಂಡಿಸಿದ ಕರಡು ನಿರ್ಣಯವನ್ನು ವಿಶ್ವಸಂಸ್ಥೆಯಲ್ಲಿ ಅಂಗೀಕರಿಸಲಾಯಿತು, ಅದರ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದವು, ಅದರ ವಿರುದ್ಧ 14 ರಾಷ್ಟ್ರಗಳು ಮತ ಚಲಾಯಿಸಿದರೆ, 45 ದೇಶಗಳು ಮತದಾನದಿಂದ ದೂರ ಉಳಿದವು. ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ಮತದಾನದಿಂದ ದೂರ ಉಳಿದಿವೆ.

ಹಮಾಸ್ ಕ್ರೌರ್ಯ ಉಲ್ಲೇಖಿಸದ್ದಕ್ಕೆ ಅಮೆರಿಕ ರಾಯಭಾರಿ ವಿರೋಧ

ಹಮಾಸ್ ಮತ್ತು ಒತ್ತೆಯಾಳು ಎಂಬ ಎರಡು ಪ್ರಮುಖ ಪದಗಳು ನಿರ್ಣಯದಿಂದ ಕಾಣೆಯಾಗಿವೆ ಎಂದು ವಿಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್ ಮತದಾನದ ಮೊದಲು ಹೇಳಿದರು. ಅಲ್ಲದೆ, ನಿರ್ಣಯವನ್ನು ವಿರೋಧಿಸಿದರು.

ನಾವು ಗಮನಿಸಿದಂತೆ, ನಮ್ಮ ಮುಂದಿರುವ ನಿಲುವಳಿಯಲ್ಲಿ ಎರಡು ಪ್ರಮುಖ ಪದಗಳು ಕಾಣೆಯಾಗಿವೆ. ಮೊದಲನೆಯದು ಹಮಾಸ್. ಈ ನಿರ್ಣಯವು ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಹೆಸರಿಸಲು ವಿಫಲವಾಗಿದೆ. ಇದು ಅತಿರೇಕವಾಗಿದೆ ಎಂದು ಲಿಂಡಾ ಥಾಮಸ್ ಹೇಳಿದರು.

ಇದನ್ನೂ ಓದಿ: Qatar Court Verdict: ಹೀಗಿರುತ್ತದೆ ಕತಾರ್​​​ನಲ್ಲಿ ಮರಣದಂಡನೆ ಶಿಕ್ಷೆ

ಈ ನಿರ್ಣಯವು ಮುಗ್ಧ ಜನರ ಬಗ್ಗೆ ಯಾವುದೇ ಉಲ್ಲೇಖವನ್ನು ನೀಡುವುದಿಲ್ಲ. ಇಲ್ಲಿ ಸೇರಿರುವ ದೇಶಗಳ ಅನೇಕ ನಾಗರಿಕರು ಸೇರಿದಂತೆ, ಅನೇಕರು ಇಂದು ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳಿಂದ ಒತ್ತೆಯಾಳುಗಳಾಗಿದ್ದಾರೆ ಎಂದು ಲಿಂಡಾ ಹೇಳಿದರು. ಇವು ಗಂಭೀರ ಲೋಪವಾಗಿದೆ. ಅವರು ಹಮಾಸ್‌ನ ಕ್ರೌರ್ಯಕ್ಕೆ ರಕ್ಷಣೆ ನೀಡುತ್ತಾರೆ ಮತ್ತು ಅಧಿಕಾರ ನೀಡುತ್ತಾರೆ ಎಂದು ಅವರು ಹೇಳಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​