AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaza Violence: ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇಸ್ರೇಲ್​ಗೆ ಇದೆ: ಅಮೆರಿಕ ಅಧ್ಯಕ್ಷ ಜೊ ಬೈಡನ್

Gaza violence: ಸೋಮವಾರ ತಡರಾತ್ರಿ ಹಿಂಸಾಚಾರ ಹಠಾತ್ತನೆ ಸ್ಫೋಟಗೊಂಡಾಗಿನಿಂದ ಗಾಜಾದಲ್ಲಿ 60 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದ ಜನರು ಮತ್ತು ಇಸ್ರೇಲ್‌ನಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ.

Gaza Violence: ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇಸ್ರೇಲ್​ಗೆ ಇದೆ: ಅಮೆರಿಕ ಅಧ್ಯಕ್ಷ ಜೊ ಬೈಡನ್
ಅಮೆರಿಕ ಅಧ್ಯಕ್ಷ ಜೋ ಬೈಡೆನ್ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
|

Updated on: May 13, 2021 | 12:47 PM

Share

ವಾಷಿಂಗ್ಟನ್: ಹಮಾಸ್ ಆಡಳಿತದ ಗಾಜಾ ಪಟ್ಟಿಯಲ್ಲಿ ಇಸ್ರೇಲಿ ಮಿಲಿಟರಿ ಮತ್ತು ಪ್ಯಾಲೆಸ್ತೀನ್ ರಾಕೆಟ್ ಪಡೆಗಳ ನಡುವೆ ತೀವ್ರ ಘರ್ಷಣೆಯು 2014 ರ ಯುದ್ಧದ ನಂತರ ಈ ಪ್ರದೇಶವನ್ನು ಸೆಳೆದುಕೊಳ್ಳುವ ಅತ್ಯಂತ ಗಂಭೀರವಾದ ಹೋರಾಟವಾಗಿದೆ. ಇದು ಶೀಘ್ರದಲ್ಲೇ ಮುಗಿಯಲಿದೆ ಎಂಬುದು ನನ್ನ ನಿರೀಕ್ಷೆ ಮತ್ತು ಭರವಸೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆದರೆ ತಮ್ಮ ಪ್ರದೇಶಕ್ಕೆ ಸಾವಿರಾರು ರಾಕೆಟ್‌ಗಳು ಹಾರಿದಾಗ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದಿದ್ದಾರೆ ಬೈಡನ್. ಅಮೆರಿಕ ಈ ಪ್ರದೇಶಕ್ಕೆ ರಾಯಭಾರಿಯನ್ನು ಕಳುಹಿಸಿದೆ. ಇಸ್ರೇಲ್​ನ ವಾಯುದಾಳಿಗಳು ಮತ್ತು ಪ್ಯಾಲೇಸ್ತೀನಿಯನ್ ರಾಕೆಟ್ ದಾಳಿಯಿಂದಾಗಿ ಸಾವಿನ ಸಂಖ್ಯೆ ಏರಿದ್ದು ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಿಗೆ ಸಹಾಯ ಮಾಡಬೇಕು ಎಂದು ಕೋರಿದ್ದವು. ಸೋಮವಾರ ತಡರಾತ್ರಿ ಹಿಂಸಾಚಾರ ಹಠಾತ್ತನೆ ಸ್ಫೋಟಗೊಂಡಾಗಿನಿಂದ ಗಾಜಾದಲ್ಲಿ 60 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದ ಜನರು ಮತ್ತು ಇಸ್ರೇಲ್‌ನಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ.

ಇಸ್ರೇಲ್ ನ ವಾಣಿಜ್ಯ ಕೇಂದ್ರವಾದ ಮೆಟ್ರೋಪಾಲಿಟನ್ ಟೆಲ್ ಅವೀವ್ ಮೇಲೆ   ರಾಕೆಟ್ ದಾಳಿ ಬುಧವಾರ ಸಂಜೆವರೆಗೂ ಮುಂದುವರಿದಿತ್ತು. ದಕ್ಷಿಣಭಾಗದಲ್ಲಿ ಕ್ಷಿಪಣಿ ದಾಳಿ ನಡೆದಿದ್ದು ಸೈರನ್‌ಗಳು ಉತ್ತರದಲ್ಲಿಯೂ ಕೇಳಿಬಂದವು. ಹಮಾಸ್ ತನ್ನ ಆಕ್ರಮಣಶೀಲತೆಗೆ ಭಾರಿ ಬೆಲೆ ತೆರಲಿದೆ ಎಂದು ನೆತನ್ಯಾಹು ಎಚ್ಚರಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಬುಧವಾರ ಕತಾರಿ ವಿದೇಶಾಂಗ ಸಚಿವ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್-ಥಾನಿ ಅವರೊಂದಿಗೆ ಮಾತನಾಡಿದ್ದಾರೆ. ಅದೇ ವೇಳೆ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರು ನೆತನ್ಯಾಹು ಅವರೊಂದಿಗೆ ಮಾತನಾಡಿದ ನಂತರ ಪ್ಯಾಲೇಸ್ತೀನಿಯನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು ಈಗ ಘರ್ಷಣೆಯ ಪ್ರಮಾಣವನ್ನು ಕಡಿಮೆ ಮಾಡುವುದು ಬಹಳ ಮುಖ್ಯ ಎಂದು ಹೇಳಿದರು.

ರಾತ್ರಿ ಪ್ರಕಟವಾದ ಚಿತ್ರಗಳನ್ನು ನೋಡುವಾಗ ನೋವನ್ನುಂಟುಮಾಡುತ್ತವೆ. ಯಾವುದೇ ನಾಗರಿಕ ಜೀವವನ್ನು ಕಳೆದುಕೊಳ್ಳುವುದು ದುರಂತ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಬುಧವಾರ ಹೇಳಿದ್ದಾರೆ.

ಇಸ್ರೇಲಿ ಮತ್ತು ಪ್ಯಾಲೇಸ್ಟಿನಿಯನ್ ನಾಯಕರನ್ನು ಭೇಟಿ ಮಾಡಲು ತಕ್ಷಣ ಈ ಪ್ರದೇಶಕ್ಕೆ ಹೋಗಬೇಕೆಂದು ನಾನು ಉಪ ಸಹಾಯಕ ಕಾರ್ಯದರ್ಶಿ ಹ್ಯಾಡಿ ಅಮರ್ ಅವರಿಗೆ ಹೇಳಿದ್ದೇನೆ ಎಂದಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ಮಹತ್ವದ ತಿರುವು ತರುವಲ್ಲಿ ಈಜಿಪ್ಟಿನ ಪ್ರಯತ್ನಗಳು ವಿಫಲವಾಗಿವೆ ಎಂದು ಹಲವಾರು ಇಸ್ರೇಲಿ ಮತ್ತು ಅರಬ್ ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ನಡೆದ ಹಮಾಸ್ ಮಿಲಿಟರಿ ಕಮಾಂಡರ್ಗ​ಳನ್ನು ಹತ್ಯೆಗೆ ಪ್ರತಿಕ್ರಿಯೆಯಾಗಿ ರಾತ್ರಿ ಹೊತ್ತಲ್ಲಿ 1,500 ಕ್ಕೂ ಹೆಚ್ಚು ರಾಕೆಟ್ ದಾಳಿಯನ್ನು ಇಸ್ರೇಲ್ ನಡೆಸಿದೆ. ಇಸ್ರೇಲಿ ದಾಳಿಗಳಲ್ಲಿ 550 ಕ್ಕೂ ಹೆಚ್ಚು ಸರ್ಕಾರಿ ಮತ್ತು ವಸತಿ ಕಟ್ಟಡಗಳನ್ನು ಗುರಿಯಾಗಿಸಲಾಗಿದೆ ಎಂದು ಹಮಾಸ್ ತಿಳಿಸಿದೆ.

ಇದನ್ನೂ ಓದಿ: ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ರಾಕೆಟ್ ದಾಳಿ: ಕೇರಳ ಮೂಲದ ಮಹಿಳೆ ಸಾವು

(Israel has a right to defend itself when thousands of rockets flying into territory says US president Joe Biden)

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ