AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaza Violence: ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇಸ್ರೇಲ್​ಗೆ ಇದೆ: ಅಮೆರಿಕ ಅಧ್ಯಕ್ಷ ಜೊ ಬೈಡನ್

Gaza violence: ಸೋಮವಾರ ತಡರಾತ್ರಿ ಹಿಂಸಾಚಾರ ಹಠಾತ್ತನೆ ಸ್ಫೋಟಗೊಂಡಾಗಿನಿಂದ ಗಾಜಾದಲ್ಲಿ 60 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದ ಜನರು ಮತ್ತು ಇಸ್ರೇಲ್‌ನಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ.

Gaza Violence: ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಹಕ್ಕು ಇಸ್ರೇಲ್​ಗೆ ಇದೆ: ಅಮೆರಿಕ ಅಧ್ಯಕ್ಷ ಜೊ ಬೈಡನ್
ಅಮೆರಿಕ ಅಧ್ಯಕ್ಷ ಜೋ ಬೈಡೆನ್ (ಸಂಗ್ರಹ ಚಿತ್ರ)
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 13, 2021 | 12:47 PM

Share

ವಾಷಿಂಗ್ಟನ್: ಹಮಾಸ್ ಆಡಳಿತದ ಗಾಜಾ ಪಟ್ಟಿಯಲ್ಲಿ ಇಸ್ರೇಲಿ ಮಿಲಿಟರಿ ಮತ್ತು ಪ್ಯಾಲೆಸ್ತೀನ್ ರಾಕೆಟ್ ಪಡೆಗಳ ನಡುವೆ ತೀವ್ರ ಘರ್ಷಣೆಯು 2014 ರ ಯುದ್ಧದ ನಂತರ ಈ ಪ್ರದೇಶವನ್ನು ಸೆಳೆದುಕೊಳ್ಳುವ ಅತ್ಯಂತ ಗಂಭೀರವಾದ ಹೋರಾಟವಾಗಿದೆ. ಇದು ಶೀಘ್ರದಲ್ಲೇ ಮುಗಿಯಲಿದೆ ಎಂಬುದು ನನ್ನ ನಿರೀಕ್ಷೆ ಮತ್ತು ಭರವಸೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಆದರೆ ತಮ್ಮ ಪ್ರದೇಶಕ್ಕೆ ಸಾವಿರಾರು ರಾಕೆಟ್‌ಗಳು ಹಾರಿದಾಗ ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದಿದ್ದಾರೆ ಬೈಡನ್. ಅಮೆರಿಕ ಈ ಪ್ರದೇಶಕ್ಕೆ ರಾಯಭಾರಿಯನ್ನು ಕಳುಹಿಸಿದೆ. ಇಸ್ರೇಲ್​ನ ವಾಯುದಾಳಿಗಳು ಮತ್ತು ಪ್ಯಾಲೇಸ್ತೀನಿಯನ್ ರಾಕೆಟ್ ದಾಳಿಯಿಂದಾಗಿ ಸಾವಿನ ಸಂಖ್ಯೆ ಏರಿದ್ದು ಈಜಿಪ್ಟ್ ಮತ್ತು ಕತಾರ್ ಮಧ್ಯಸ್ಥಿಗೆ ಸಹಾಯ ಮಾಡಬೇಕು ಎಂದು ಕೋರಿದ್ದವು. ಸೋಮವಾರ ತಡರಾತ್ರಿ ಹಿಂಸಾಚಾರ ಹಠಾತ್ತನೆ ಸ್ಫೋಟಗೊಂಡಾಗಿನಿಂದ ಗಾಜಾದಲ್ಲಿ 60 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯಾದ ಜನರು ಮತ್ತು ಇಸ್ರೇಲ್‌ನಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ.

ಇಸ್ರೇಲ್ ನ ವಾಣಿಜ್ಯ ಕೇಂದ್ರವಾದ ಮೆಟ್ರೋಪಾಲಿಟನ್ ಟೆಲ್ ಅವೀವ್ ಮೇಲೆ   ರಾಕೆಟ್ ದಾಳಿ ಬುಧವಾರ ಸಂಜೆವರೆಗೂ ಮುಂದುವರಿದಿತ್ತು. ದಕ್ಷಿಣಭಾಗದಲ್ಲಿ ಕ್ಷಿಪಣಿ ದಾಳಿ ನಡೆದಿದ್ದು ಸೈರನ್‌ಗಳು ಉತ್ತರದಲ್ಲಿಯೂ ಕೇಳಿಬಂದವು. ಹಮಾಸ್ ತನ್ನ ಆಕ್ರಮಣಶೀಲತೆಗೆ ಭಾರಿ ಬೆಲೆ ತೆರಲಿದೆ ಎಂದು ನೆತನ್ಯಾಹು ಎಚ್ಚರಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಬುಧವಾರ ಕತಾರಿ ವಿದೇಶಾಂಗ ಸಚಿವ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್-ಥಾನಿ ಅವರೊಂದಿಗೆ ಮಾತನಾಡಿದ್ದಾರೆ. ಅದೇ ವೇಳೆ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರು ನೆತನ್ಯಾಹು ಅವರೊಂದಿಗೆ ಮಾತನಾಡಿದ ನಂತರ ಪ್ಯಾಲೇಸ್ತೀನಿಯನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು ಈಗ ಘರ್ಷಣೆಯ ಪ್ರಮಾಣವನ್ನು ಕಡಿಮೆ ಮಾಡುವುದು ಬಹಳ ಮುಖ್ಯ ಎಂದು ಹೇಳಿದರು.

ರಾತ್ರಿ ಪ್ರಕಟವಾದ ಚಿತ್ರಗಳನ್ನು ನೋಡುವಾಗ ನೋವನ್ನುಂಟುಮಾಡುತ್ತವೆ. ಯಾವುದೇ ನಾಗರಿಕ ಜೀವವನ್ನು ಕಳೆದುಕೊಳ್ಳುವುದು ದುರಂತ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಬುಧವಾರ ಹೇಳಿದ್ದಾರೆ.

ಇಸ್ರೇಲಿ ಮತ್ತು ಪ್ಯಾಲೇಸ್ಟಿನಿಯನ್ ನಾಯಕರನ್ನು ಭೇಟಿ ಮಾಡಲು ತಕ್ಷಣ ಈ ಪ್ರದೇಶಕ್ಕೆ ಹೋಗಬೇಕೆಂದು ನಾನು ಉಪ ಸಹಾಯಕ ಕಾರ್ಯದರ್ಶಿ ಹ್ಯಾಡಿ ಅಮರ್ ಅವರಿಗೆ ಹೇಳಿದ್ದೇನೆ ಎಂದಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ಮಹತ್ವದ ತಿರುವು ತರುವಲ್ಲಿ ಈಜಿಪ್ಟಿನ ಪ್ರಯತ್ನಗಳು ವಿಫಲವಾಗಿವೆ ಎಂದು ಹಲವಾರು ಇಸ್ರೇಲಿ ಮತ್ತು ಅರಬ್ ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ನಡೆದ ಹಮಾಸ್ ಮಿಲಿಟರಿ ಕಮಾಂಡರ್ಗ​ಳನ್ನು ಹತ್ಯೆಗೆ ಪ್ರತಿಕ್ರಿಯೆಯಾಗಿ ರಾತ್ರಿ ಹೊತ್ತಲ್ಲಿ 1,500 ಕ್ಕೂ ಹೆಚ್ಚು ರಾಕೆಟ್ ದಾಳಿಯನ್ನು ಇಸ್ರೇಲ್ ನಡೆಸಿದೆ. ಇಸ್ರೇಲಿ ದಾಳಿಗಳಲ್ಲಿ 550 ಕ್ಕೂ ಹೆಚ್ಚು ಸರ್ಕಾರಿ ಮತ್ತು ವಸತಿ ಕಟ್ಟಡಗಳನ್ನು ಗುರಿಯಾಗಿಸಲಾಗಿದೆ ಎಂದು ಹಮಾಸ್ ತಿಳಿಸಿದೆ.

ಇದನ್ನೂ ಓದಿ: ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ರಾಕೆಟ್ ದಾಳಿ: ಕೇರಳ ಮೂಲದ ಮಹಿಳೆ ಸಾವು

(Israel has a right to defend itself when thousands of rockets flying into territory says US president Joe Biden)

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು