AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾವನ್ನು ನಿಷೇಧಿಸಿದ ಇಸ್ರೇಲ್, ಮುಂಬೈ ದಾಳಿಯೇ ಕಾರಣ

Lashkar-e-Taiba, LeT ban: ಇಸ್ರೇಲ್​​, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (Lashkar-e-Taiba)ವನ್ನು ನಿಷೇಧಿಸಿದೆ. ನವೆಂಬರ್​​​ 26ರಂದು ಭಾರತದ ಮುಂಬೈ ಹೊಟೇಲ್​​​ ಮೇಲೆ ದಾಳಿ ಮಾಡಿದ ಈ ಸಂಘಟನೆಯನ್ನು ನಿಷೇಧಿಸಲು ಇಸ್ರೇಲ್​​​ ಮುಂದಾಗಿದೆ. ಇದರ ಜತೆಗೆ ಲಷ್ಕರ್-ಎ-ತೊಯ್ಬಾವನ್ನು ಇಸ್ರೇಲ್​​ ತನ್ನ ಭಯೋತ್ಪಾದನ ಪಟ್ಟಿಯಲ್ಲಿ ಸೇರಿಸಿದ್ದು, ಈ ಬಗ್ಗೆ ಇಸ್ರೇಲ್​​​ ರಾಯಭಾರಿ ಕಚೇರಿ ಒಂದು ವರದಿಯನ್ನು ಭಾರತ ಸರ್ಕಾರಕ್ಕೆ ನೀಡಿದೆ. ಲಷ್ಕರ್-ಎ-ತೈಬಾವನ್ನು ಇಸ್ರೇಲಿ ಕಾನೂನುಬಾಹಿರ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾವನ್ನು ನಿಷೇಧಿಸಿದ ಇಸ್ರೇಲ್, ಮುಂಬೈ ದಾಳಿಯೇ ಕಾರಣ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 21, 2023 | 2:32 PM

Share

ಇಸ್ರೇಲ್​​, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (Lashkar-e-Taiba)ವನ್ನು ನಿಷೇಧಿಸಿದೆ. ನವೆಂಬರ್​​​ 26ರಂದು ಭಾರತದ ಮುಂಬೈ ಹೊಟೇಲ್​​​ ಮೇಲೆ ದಾಳಿ ಮಾಡಿದ ಈ ಸಂಘಟನೆಯನ್ನು ನಿಷೇಧಿಸಲು ಇಸ್ರೇಲ್​​​ ಮುಂದಾಗಿದೆ. ಇದರ ಜತೆಗೆ ಲಷ್ಕರ್-ಎ-ತೊಯ್ಬಾವನ್ನು ಇಸ್ರೇಲ್​​ ತನ್ನ ಭಯೋತ್ಪಾದನ ಪಟ್ಟಿಯಲ್ಲಿ ಸೇರಿಸಿದ್ದು, ಈ ಬಗ್ಗೆ ಇಸ್ರೇಲ್​​​ ರಾಯಭಾರಿ ಕಚೇರಿ ಒಂದು ವರದಿಯನ್ನು ಭಾರತ ಸರ್ಕಾರಕ್ಕೆ ನೀಡಿದೆ. ಲಷ್ಕರ್-ಎ-ತೈಬಾವನ್ನು ಇಸ್ರೇಲಿ ಕಾನೂನುಬಾಹಿರ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಇದರ ಬಗ್ಗೆ ಭಾರತ ಸರ್ಕಾರವು ಒಂದು ನಿರ್ಧಾರಕ್ಕೆ ಬರಬೇಕು ಎಂದು ಹೇಳಿದೆ. ಈ ಕ್ರಮಕ್ಕೆ ಭಾರತದ ಯಾವುದೇ ಒತ್ತಡ ಇಲ್ಲ, ನಾವೇ ಸ್ವತಃ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನವೆಂಬರ್​​​ 26ರಂದು ಭಾರತದ ಮುಂಬೈ ಮೇಲೆ ದಾಳಿ ಮಾಡಿ, ಅನೇಕ ಭಾರತೀಯರ ಹತ್ಯೆ ಕಾರಣವಾಗಿದ್ದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾವನ್ನು ನಿಷೇಧಿಸಲು ಭಾರತದ ಕೂಡ ನಮ್ಮ ಜತೆಗೆ ಇದೆ ಎಂದು ಹೇಳಿದೆ.

ಈಗಾಗಲೇ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾವನ್ನು ನಿಷೇಧ ಮಾಡಲು ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಔಪಚಾರಿಕ ಕಾರ್ಯವಿಧಾನವನ್ನು ತಯಾರಿಸಲಾಗಿದೆ ಎಂದು ಇಸ್ರೇಲ್​​​ ಹೇಳಿದೆ. ಜತೆಗೆ ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಪ್ರತಿಕಾ ಪ್ರಕಟನೆಯನ್ನು ಕಳುಹಿಸಲಾಗಿದೆ ಎಂದು ಹೇಳಿದೆ.

ಇಸ್ರೇಲ್ ತನ್ನ ಗಡಿಯೊಳಗೆ ಅಥವಾ ಅದರ ಸುತ್ತಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಮಾತ್ರ ನಿಷೇಧಿಸಲು ಪಟ್ಟಿ ಮಾಡುತ್ತದೆ. ಆದರೆ ಇದೇ ಮೊದಲು ವಿದೇಶಿ ರಾಷ್ಟ್ರಕ್ಕೆ ತೊಂದರೆ ನೀಡಿದ ಸಂಘಟನೆಯನ್ನು ಪಟ್ಟಿ ಮಾಡಿದೆ. ಇನ್ನು ಈ ನಿಷೇಧವನ್ನು ನವೆಂಬರ್​​ 26ರಂದು ಮಾಡಲಿದೆ. ಈ ದಿನ ಭಾರತಕ್ಕೆ ಅತಂತ್ಯ ಕರಾಳ ದಿನವಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಇಸ್ರೇಲ್ ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ

ನವೆಂಬರ್​​ 26ರಂದು ಭಾರತದ ಮುಂಬೈನಲ್ಲಿರುವ ತಾಜ್​​​​​ ಹೊಟೇಲ್​​ ಮೇಲೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಗ್ರರು ದಾಳಿ ಮಾಡಿದ್ದಾರೆ. ಇದರಿಂದ ಅನೇಕ ಭಾರತೀಯರ ಹತ್ಯೆಗೆ ಕಾರಣವಾಗಿದೆ. ಇಂತಹ ಕೃತ್ಯವನ್ನು ಎಲ್ಲ ದೇಶಗಳು ಖಂಡಿಸಬೇಕು ಅದಕ್ಕಾಗಿ ಈ ಸಂಘಟನೆಯನ್ನು ನಿಷೇಧ ಮಾಡಲು ಮುಂದಾಗಿದ್ದೇವೆ. ನಾವು ಕೂಡ ಭಾರತದ ಜತೆಗೆ ಇದ್ದೇವೆ ಎಂಬುದನ್ನು ಇಸ್ರೇಲ್​​ ಮತ್ತೊಮ್ಮೆ ಸಾಬೀತು ಪಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:27 pm, Tue, 21 November 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ