AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾವನ್ನು ನಿಷೇಧಿಸಿದ ಇಸ್ರೇಲ್, ಮುಂಬೈ ದಾಳಿಯೇ ಕಾರಣ

Lashkar-e-Taiba, LeT ban: ಇಸ್ರೇಲ್​​, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (Lashkar-e-Taiba)ವನ್ನು ನಿಷೇಧಿಸಿದೆ. ನವೆಂಬರ್​​​ 26ರಂದು ಭಾರತದ ಮುಂಬೈ ಹೊಟೇಲ್​​​ ಮೇಲೆ ದಾಳಿ ಮಾಡಿದ ಈ ಸಂಘಟನೆಯನ್ನು ನಿಷೇಧಿಸಲು ಇಸ್ರೇಲ್​​​ ಮುಂದಾಗಿದೆ. ಇದರ ಜತೆಗೆ ಲಷ್ಕರ್-ಎ-ತೊಯ್ಬಾವನ್ನು ಇಸ್ರೇಲ್​​ ತನ್ನ ಭಯೋತ್ಪಾದನ ಪಟ್ಟಿಯಲ್ಲಿ ಸೇರಿಸಿದ್ದು, ಈ ಬಗ್ಗೆ ಇಸ್ರೇಲ್​​​ ರಾಯಭಾರಿ ಕಚೇರಿ ಒಂದು ವರದಿಯನ್ನು ಭಾರತ ಸರ್ಕಾರಕ್ಕೆ ನೀಡಿದೆ. ಲಷ್ಕರ್-ಎ-ತೈಬಾವನ್ನು ಇಸ್ರೇಲಿ ಕಾನೂನುಬಾಹಿರ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾವನ್ನು ನಿಷೇಧಿಸಿದ ಇಸ್ರೇಲ್, ಮುಂಬೈ ದಾಳಿಯೇ ಕಾರಣ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 21, 2023 | 2:32 PM

ಇಸ್ರೇಲ್​​, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (Lashkar-e-Taiba)ವನ್ನು ನಿಷೇಧಿಸಿದೆ. ನವೆಂಬರ್​​​ 26ರಂದು ಭಾರತದ ಮುಂಬೈ ಹೊಟೇಲ್​​​ ಮೇಲೆ ದಾಳಿ ಮಾಡಿದ ಈ ಸಂಘಟನೆಯನ್ನು ನಿಷೇಧಿಸಲು ಇಸ್ರೇಲ್​​​ ಮುಂದಾಗಿದೆ. ಇದರ ಜತೆಗೆ ಲಷ್ಕರ್-ಎ-ತೊಯ್ಬಾವನ್ನು ಇಸ್ರೇಲ್​​ ತನ್ನ ಭಯೋತ್ಪಾದನ ಪಟ್ಟಿಯಲ್ಲಿ ಸೇರಿಸಿದ್ದು, ಈ ಬಗ್ಗೆ ಇಸ್ರೇಲ್​​​ ರಾಯಭಾರಿ ಕಚೇರಿ ಒಂದು ವರದಿಯನ್ನು ಭಾರತ ಸರ್ಕಾರಕ್ಕೆ ನೀಡಿದೆ. ಲಷ್ಕರ್-ಎ-ತೈಬಾವನ್ನು ಇಸ್ರೇಲಿ ಕಾನೂನುಬಾಹಿರ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಇದರ ಬಗ್ಗೆ ಭಾರತ ಸರ್ಕಾರವು ಒಂದು ನಿರ್ಧಾರಕ್ಕೆ ಬರಬೇಕು ಎಂದು ಹೇಳಿದೆ. ಈ ಕ್ರಮಕ್ಕೆ ಭಾರತದ ಯಾವುದೇ ಒತ್ತಡ ಇಲ್ಲ, ನಾವೇ ಸ್ವತಃ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ನವೆಂಬರ್​​​ 26ರಂದು ಭಾರತದ ಮುಂಬೈ ಮೇಲೆ ದಾಳಿ ಮಾಡಿ, ಅನೇಕ ಭಾರತೀಯರ ಹತ್ಯೆ ಕಾರಣವಾಗಿದ್ದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾವನ್ನು ನಿಷೇಧಿಸಲು ಭಾರತದ ಕೂಡ ನಮ್ಮ ಜತೆಗೆ ಇದೆ ಎಂದು ಹೇಳಿದೆ.

ಈಗಾಗಲೇ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾವನ್ನು ನಿಷೇಧ ಮಾಡಲು ಎಲ್ಲ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಔಪಚಾರಿಕ ಕಾರ್ಯವಿಧಾನವನ್ನು ತಯಾರಿಸಲಾಗಿದೆ ಎಂದು ಇಸ್ರೇಲ್​​​ ಹೇಳಿದೆ. ಜತೆಗೆ ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಪ್ರತಿಕಾ ಪ್ರಕಟನೆಯನ್ನು ಕಳುಹಿಸಲಾಗಿದೆ ಎಂದು ಹೇಳಿದೆ.

ಇಸ್ರೇಲ್ ತನ್ನ ಗಡಿಯೊಳಗೆ ಅಥವಾ ಅದರ ಸುತ್ತಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು ಮಾತ್ರ ನಿಷೇಧಿಸಲು ಪಟ್ಟಿ ಮಾಡುತ್ತದೆ. ಆದರೆ ಇದೇ ಮೊದಲು ವಿದೇಶಿ ರಾಷ್ಟ್ರಕ್ಕೆ ತೊಂದರೆ ನೀಡಿದ ಸಂಘಟನೆಯನ್ನು ಪಟ್ಟಿ ಮಾಡಿದೆ. ಇನ್ನು ಈ ನಿಷೇಧವನ್ನು ನವೆಂಬರ್​​ 26ರಂದು ಮಾಡಲಿದೆ. ಈ ದಿನ ಭಾರತಕ್ಕೆ ಅತಂತ್ಯ ಕರಾಳ ದಿನವಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಇಸ್ರೇಲ್ ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಶೋಪಿಯಾನ್​ನಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಉಗ್ರರ ಎನ್​ಕೌಂಟರ್; ಶಸ್ತ್ರಾಸ್ತ್ರಗಳು ವಶಕ್ಕೆ

ನವೆಂಬರ್​​ 26ರಂದು ಭಾರತದ ಮುಂಬೈನಲ್ಲಿರುವ ತಾಜ್​​​​​ ಹೊಟೇಲ್​​ ಮೇಲೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಉಗ್ರರು ದಾಳಿ ಮಾಡಿದ್ದಾರೆ. ಇದರಿಂದ ಅನೇಕ ಭಾರತೀಯರ ಹತ್ಯೆಗೆ ಕಾರಣವಾಗಿದೆ. ಇಂತಹ ಕೃತ್ಯವನ್ನು ಎಲ್ಲ ದೇಶಗಳು ಖಂಡಿಸಬೇಕು ಅದಕ್ಕಾಗಿ ಈ ಸಂಘಟನೆಯನ್ನು ನಿಷೇಧ ಮಾಡಲು ಮುಂದಾಗಿದ್ದೇವೆ. ನಾವು ಕೂಡ ಭಾರತದ ಜತೆಗೆ ಇದ್ದೇವೆ ಎಂಬುದನ್ನು ಇಸ್ರೇಲ್​​ ಮತ್ತೊಮ್ಮೆ ಸಾಬೀತು ಪಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:27 pm, Tue, 21 November 23

ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ