AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮೇಲೆ ಇಸ್ರೇಲ್ ಹಠಾತ್ ದಾಳಿ: ಪರಮಾಣು ನೆಲೆಗಳೇ ಗುರಿ

ಇರಾನ್ ಮೇಲೆ ಇಸ್ರೇಲ್ ಶುಕ್ರವಾರ ಹಠಾತ್ ಬಾಂಬ್ ದಾಳಿ ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್​ ಹಾಗೂ ಪರಮಾಣು ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆದಿದೆ ಎಂದು ವರದಿಯಾಗಿದ್ದು, ಟೆಹ್ರಾನ್​​ನಲ್ಲಿ ಬೆಳ್ಳಂಬೆಳಗ್ಗೆಯೇ ದಟ್ಟ ಹೊಗೆ ಕಾಣಿಸಿಕೊಂಡಿದೆ. ಅನೇಕ ಸ್ಥಳಗಳಲ್ಲಿ ಸ್ಫೋಟಗಳ ಸದ್ದು ಕೇಳಿವೆ. ಇರಾನ್​​ನ ಪರಮಾಣು ಮತ್ತು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಇರಾನ್ ಮೇಲೆ ಇಸ್ರೇಲ್ ಹಠಾತ್ ದಾಳಿ: ಪರಮಾಣು ನೆಲೆಗಳೇ ಗುರಿ
ಇಸ್ರೇಲ್ ಹಠಾತ್ ದಾಳಿಗೆ ಬೆಚ್ಚಿಬಿದ್ದ ಇರಾನ್
ಗಣಪತಿ ಶರ್ಮಾ
|

Updated on:Jun 13, 2025 | 8:07 AM

Share

ಜೆರುಸಲೇಂ, ಜೂನ್ 13: ಇರಾನ್‌ನ (Iran) ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ (Isrel) ಸೇನೆಯು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ (Preemptive Strike) ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ ಹಠಾತ್ ದಾಳಿ ನಡೆಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ ಎಂದೂ ಅವರು ಘೋಷಿಸಿದ್ದಾರೆ. ಆದಾಗ್ಯೂ, ಇರಾನ್ ಮೇಲೆ ದಾಳಿ ಮಾಡಿದ ನಂತರ, ಇಸ್ರೇಲ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ.

ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ. ಇರಾನ್ ಶೀಘ್ರದಲ್ಲೇ ಅತ್ಯಂತ ಬಲಿಷ್ಠ ಪರಮಾಣು ಶಕ್ತಿಯಾಗಲಿದೆ ಎಂಬ ವರದಿಗಳು ಇತ್ತೀಚೆಗೆ ನಿರಂತರವಾಗಿ ಬಿತ್ತರವಾಗುತ್ತಿದ್ದವು. ಇರಾನ್ ಈ ದಿಕ್ಕಿನಲ್ಲಿ ವೇಗವಾಗಿ ಕೆಲಸ ಮಾಡುತ್ತಿತ್ತು. ಇದರ ಬೆನ್ನಲ್ಲೇ ಇಸ್ರೇಲ್ ಈಗ ಆ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡಿದೆ.

ಇದನ್ನೂ ಓದಿ
Image
ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್​​ಗೆ ಆಹ್ವಾನ, ಭಾರತ, ಚೀನಾಗೆ ಆತಂಕ
Image
ಚೀನಾದಿಂದ ಅಪರೂಪದ ಖನಿಜಗಳ ಪೂರೈಕೆ; ಒಪ್ಪಂದ ಮುಗಿದಿದೆ ಎಂದ ಟ್ರಂಪ್
Image
ಕ್ಷಿಪಣಿ ಅಲ್ಲ, ಬಾಂಬ್‌ಗಳೂ ಅಲ್ಲ; ಈ ತಪ್ಪು ಇರಾನ್ ನಾಶಕ್ಕೆ ಕಾರಣವಾಗಬಹುದು!
Image
ರಹಸ್ಯವಾಗಿ ಇರಾನ್ ಸರ್ವೋಚ್ಚ ನಾಯಕನ ಉತ್ತರಾಧಿಕಾರಿ ಆಯ್ಕೆ

ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಬಿಡುವುದಿಲ್ಲ ಎಂದು ಇಸ್ರೇಲ್ ಕೆಲವು ವರ್ಷಗಳಿಂದಲೂ ಎಚ್ಚರಿಕೆ ನೀಡುತ್ತಾ ಬಂದಿತ್ತು. ಇದೀಗ ಇಸ್ರೇಲ್ ಅದರಂತೆಯೇ ಕಾರ್ಯಪ್ರವೃತ್ತವಾಗಿದೆ. ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಪ್ರತೀಕಾರ ತೀರಿಸಿಕೊಳ್ಳುವುದೇ ಇರಾನ್?

ತಮ್ಮ ಮೇಲೆ ದಾಳಿ ನಡೆದದರೆ ಸೂಕ್ತ ತಿರುಗೇಟು ನೀಡಲಾಗವುದು ಎಂದು ಇರಾನ್ ಕೂಡ ಈಗಾಗಲೇ ಎಚ್ಚರಿಕೆ ನೀಡಿದೆ. ಇದೀಗ ಇಸ್ರೇಲ್ ದಾಳಿಯ ನಂತರ, ಇರಾನ್ ಪ್ರತೀಕಾರದ ಕ್ರಮಕ್ಕೆ ಮುಂದಾಗಬಹುದು ಎನ್ನಲಾಗಿದೆ. ಇದನ್ನು ಖುದ್ದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಕೂಡ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸೇನಾ ದಿನ: ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್​​ಗೆ ಆಹ್ವಾನ, ಭಾರತ, ಚೀನಾಗೆ ಆತಂಕ

ಇರಾನ್​​ನ ಸಂಭಾವ್ಯ ದಾಳಿ ಎದುರಿಸಲು ಇಸ್ರೇಲ್ ಸನ್ನದ್ಧವಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ತಿಳಿಸಿದ್ದಾರೆ. ಅಲ್ಲದೆ, ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸುವ ವಿಶೇಷ ಆದೇಶಕ್ಕೆ ಕಾಟ್ಜ್ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:06 am, Fri, 13 June 25

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?