AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್ ಮೇಲೆ ಇಸ್ರೇಲ್ ಹಠಾತ್ ದಾಳಿ: ಪರಮಾಣು ನೆಲೆಗಳೇ ಗುರಿ

ಇರಾನ್ ಮೇಲೆ ಇಸ್ರೇಲ್ ಶುಕ್ರವಾರ ಹಠಾತ್ ಬಾಂಬ್ ದಾಳಿ ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್​ ಹಾಗೂ ಪರಮಾಣು ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆದಿದೆ ಎಂದು ವರದಿಯಾಗಿದ್ದು, ಟೆಹ್ರಾನ್​​ನಲ್ಲಿ ಬೆಳ್ಳಂಬೆಳಗ್ಗೆಯೇ ದಟ್ಟ ಹೊಗೆ ಕಾಣಿಸಿಕೊಂಡಿದೆ. ಅನೇಕ ಸ್ಥಳಗಳಲ್ಲಿ ಸ್ಫೋಟಗಳ ಸದ್ದು ಕೇಳಿವೆ. ಇರಾನ್​​ನ ಪರಮಾಣು ಮತ್ತು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಇರಾನ್ ಮೇಲೆ ಇಸ್ರೇಲ್ ಹಠಾತ್ ದಾಳಿ: ಪರಮಾಣು ನೆಲೆಗಳೇ ಗುರಿ
ಇಸ್ರೇಲ್ ಹಠಾತ್ ದಾಳಿಗೆ ಬೆಚ್ಚಿಬಿದ್ದ ಇರಾನ್
Ganapathi Sharma
|

Updated on:Jun 13, 2025 | 8:07 AM

Share

ಜೆರುಸಲೇಂ, ಜೂನ್ 13: ಇರಾನ್‌ನ (Iran) ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ (Isrel) ಸೇನೆಯು ಶುಕ್ರವಾರ ಬೆಳಗಿನ ಜಾವ ಹಠಾತ್ ದಾಳಿ (Preemptive Strike) ನಡೆಸಿದೆ. ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಕಡೆಗಳಲ್ಲಿ ಸ್ಫೋಟದ ಸದ್ದುಗಳು ಕೇಳಿವೆ. ಈ ದಾಳಿಯಲ್ಲಿ ಇರಾನ್ ಸೇನೆಯ ಪ್ರಮುಖ ಅಧಿಕಾರಿಗಳು, ಪರಮಾಣು ವಿಜ್ಞಾನಿಗಳು ಸೇರಿದಂತೆ ಅನೇಕ ಪ್ರಮುಖರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ ಇರಾನ್‌ಗೆ ಭಾರೀ ಹಾನಿಯಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ನಮ್ಮ ಸೇನೆ ಹಠಾತ್ ದಾಳಿ ನಡೆಸಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇರಾನ್ ಮೇಲಿನ ದಾಳಿ ಮುಂದುವರಿಯಲಿದೆ ಎಂದೂ ಅವರು ಘೋಷಿಸಿದ್ದಾರೆ. ಆದಾಗ್ಯೂ, ಇರಾನ್ ಮೇಲೆ ದಾಳಿ ಮಾಡಿದ ನಂತರ, ಇಸ್ರೇಲ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ.

ಪರಮಾಣು ಚಟುವಟಿಕೆಗಳನ್ನು ಇರಾನ್ ಹೆಚ್ಚಿಸಿರುವುದು ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ. ಇರಾನ್ ಶೀಘ್ರದಲ್ಲೇ ಅತ್ಯಂತ ಬಲಿಷ್ಠ ಪರಮಾಣು ಶಕ್ತಿಯಾಗಲಿದೆ ಎಂಬ ವರದಿಗಳು ಇತ್ತೀಚೆಗೆ ನಿರಂತರವಾಗಿ ಬಿತ್ತರವಾಗುತ್ತಿದ್ದವು. ಇರಾನ್ ಈ ದಿಕ್ಕಿನಲ್ಲಿ ವೇಗವಾಗಿ ಕೆಲಸ ಮಾಡುತ್ತಿತ್ತು. ಇದರ ಬೆನ್ನಲ್ಲೇ ಇಸ್ರೇಲ್ ಈಗ ಆ ಪರಮಾಣು ನೆಲೆಗಳನ್ನು ಗುರಿಯಾಗಿಸಿಕೊಂಡಿದೆ.

ಇದನ್ನೂ ಓದಿ
Image
ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್​​ಗೆ ಆಹ್ವಾನ, ಭಾರತ, ಚೀನಾಗೆ ಆತಂಕ
Image
ಚೀನಾದಿಂದ ಅಪರೂಪದ ಖನಿಜಗಳ ಪೂರೈಕೆ; ಒಪ್ಪಂದ ಮುಗಿದಿದೆ ಎಂದ ಟ್ರಂಪ್
Image
ಕ್ಷಿಪಣಿ ಅಲ್ಲ, ಬಾಂಬ್‌ಗಳೂ ಅಲ್ಲ; ಈ ತಪ್ಪು ಇರಾನ್ ನಾಶಕ್ಕೆ ಕಾರಣವಾಗಬಹುದು!
Image
ರಹಸ್ಯವಾಗಿ ಇರಾನ್ ಸರ್ವೋಚ್ಚ ನಾಯಕನ ಉತ್ತರಾಧಿಕಾರಿ ಆಯ್ಕೆ

ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಬಿಡುವುದಿಲ್ಲ ಎಂದು ಇಸ್ರೇಲ್ ಕೆಲವು ವರ್ಷಗಳಿಂದಲೂ ಎಚ್ಚರಿಕೆ ನೀಡುತ್ತಾ ಬಂದಿತ್ತು. ಇದೀಗ ಇಸ್ರೇಲ್ ಅದರಂತೆಯೇ ಕಾರ್ಯಪ್ರವೃತ್ತವಾಗಿದೆ. ಇರಾನ್ ಪರಮಾಣು ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಪ್ರತೀಕಾರ ತೀರಿಸಿಕೊಳ್ಳುವುದೇ ಇರಾನ್?

ತಮ್ಮ ಮೇಲೆ ದಾಳಿ ನಡೆದದರೆ ಸೂಕ್ತ ತಿರುಗೇಟು ನೀಡಲಾಗವುದು ಎಂದು ಇರಾನ್ ಕೂಡ ಈಗಾಗಲೇ ಎಚ್ಚರಿಕೆ ನೀಡಿದೆ. ಇದೀಗ ಇಸ್ರೇಲ್ ದಾಳಿಯ ನಂತರ, ಇರಾನ್ ಪ್ರತೀಕಾರದ ಕ್ರಮಕ್ಕೆ ಮುಂದಾಗಬಹುದು ಎನ್ನಲಾಗಿದೆ. ಇದನ್ನು ಖುದ್ದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಕೂಡ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕ ಸೇನಾ ದಿನ: ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನೀರ್​​ಗೆ ಆಹ್ವಾನ, ಭಾರತ, ಚೀನಾಗೆ ಆತಂಕ

ಇರಾನ್​​ನ ಸಂಭಾವ್ಯ ದಾಳಿ ಎದುರಿಸಲು ಇಸ್ರೇಲ್ ಸನ್ನದ್ಧವಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ತಿಳಿಸಿದ್ದಾರೆ. ಅಲ್ಲದೆ, ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸುವ ವಿಶೇಷ ಆದೇಶಕ್ಕೆ ಕಾಟ್ಜ್ ಸಹಿ ಹಾಕಿದ್ದಾರೆ ಎಂದು ವರದಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:06 am, Fri, 13 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ