AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್‌ ಮೇಲೆ ಇಸ್ರೇಲ್ ಪ್ರತೀಕಾರದ ದಾಳಿ ಪ್ರಾರಂಭ; ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ, ಸೈನಿಕರ ಸಾವು

ಇತ್ತೀಚಿನ ಇಸ್ರೇಲಿ ದಾಳಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಏಕೆಂದರೆ ಇರಾನ್ ಅಧಿಕಾರಿಗಳು ಇಸ್ರೇಲ್ ದಾಳಿಯನ್ನು ಪ್ರಾರಂಭಿಸುವುದರ ವಿರುದ್ಧ ಪದೇ ಪದೇ ಎಚ್ಚರಿಸಿದ್ದಾರೆ. ಇಸ್ರೇಲಿ ಮಿಲಿಟರಿಯು ಇರಾನ್‌ನಲ್ಲಿನ ಸೇನಾ ನೆಲೆಗಳ ಮೇಲೆ ದಾಳಿಗಳನ್ನು ಪ್ರಾರಂಭಿಸಿತು. ಇಲಾಮ್, ಖುಜೆಸ್ತಾನ್ ಮತ್ತು ಟೆಹ್ರಾನ್‌ನಲ್ಲಿ ಹಲವಾರು ಗಂಟೆಗಳ ಕಾಲ ಸುಮಾರು 20 ಬಾರಿ ದಾಳಿ ನಡೆದಿದೆ.

ಇರಾನ್‌ ಮೇಲೆ ಇಸ್ರೇಲ್ ಪ್ರತೀಕಾರದ ದಾಳಿ ಪ್ರಾರಂಭ; ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ, ಸೈನಿಕರ ಸಾವು
ಇರಾನ್‌ ಮೇಲೆ ಇಸ್ರೇಲ್ ಪ್ರತೀಕಾರದ ದಾಳಿ
ಸುಷ್ಮಾ ಚಕ್ರೆ
|

Updated on: Oct 26, 2024 | 4:37 PM

Share

ಟೆಹ್ರಾನ್: ಇಂದು ಇರಾನ್ ಮೇಲೆ ನಡೆದ ದಾಳಿಗಳು ಇಸ್ರೇಲ್​ನ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿವೆ. ಈ ದಾಳಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸೇನೆಯು ದೃಢಪಡಿಸಿದೆ. ಇಸ್ರೇಲಿ ಸೇನೆಯು ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಇರಾನ್‌ನ ವಾಯು ರಕ್ಷಣಾ ಕೇಂದ್ರ ಕಚೇರಿಯು “ಇಸ್ರೇಲ್​ನ ಆಕ್ರಮಣಕಾರಿ ಕ್ರಮವನ್ನು ದೇಶದ ಸಮಗ್ರ ವಾಯು ರಕ್ಷಣಾ ವ್ಯವಸ್ಥೆಯಿಂದ ಯಶಸ್ವಿಯಾಗಿ ತಡೆಹಿಡಿಯಲಾಗಿದೆ ಮತ್ತು ಎದುರಿಸಲಾಗಿದೆ” ಎಂದು ಹೇಳಿದೆ.

ಇಸ್ರೇಲ್‌ನ ಮೇಲೆ ನಡೆದ ಟೆಹ್ರಾನ್‌ನ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಇರಾನ್​ನ ಮಿಲಿಟರಿ ಗುರಿಗಳ ವಿರುದ್ಧ ದಾಳಿಗಳನ್ನು ನಡೆಸಿದೆ ಎಂದು ಹೇಳಿಕೊಂಡಿದೆ. ಟೆಹ್ರಾನ್‌ನ ದಾಳಿಯ ನಂತರ ಯುದ್ಧ ಉಲ್ಬಣಗೊಳ್ಳುವ ಆತಂಕದ ಬೆನ್ನಲ್ಲೇ ಈ ದಾಳಿ ನಡೆದಿದೆ.

ಇದನ್ನೂ ಓದಿ: ಹಮಾಸ್ ಮುಖ್ಯಸ್ಥನ ಹತ್ಯೆ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆ ಮೇಲೆ ಡ್ರೋನ್ ದಾಳಿ

ಅಕ್ಟೋಬರ್ 1ರಂದು ಇಸ್ರೇಲ್ ಮೇಲೆ ಸುಮಾರು 200 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಲಾಯಿತು. 6 ತಿಂಗಳ ಅವಧಿಯಲ್ಲಿ ಇರಾನ್ ಇಸ್ರೇಲ್​ನ ಮೇಲೆ ಎರಡನೇ ನೇರ ದಾಳಿ ನಡೆಸಿತ್ತು. ಇದೀಗ ಇಸ್ರೇಲ್ ರಕ್ಷಣಾ ಪಡೆಗಳು ಇರಾನ್‌ನಲ್ಲಿನ ಮಿಲಿಟರಿ ಗುರಿಗಳ ಮೇಲೆ ದಾಳಿಗಳನ್ನು ನಡೆಸುತ್ತಿದೆ.

ಟೆಹ್ರಾನ್‌ನಲ್ಲಿನ ದಾಳಿಗಳನ್ನು ಕ್ಯಾಂಪ್ ರಾಬಿನ್‌ನಲ್ಲಿರುವ ಇಸ್ರೇಲಿ ವಾಯುಪಡೆಯ ಭೂಗತ ಕಮಾಂಡ್ ಸೆಂಟರ್‌ನಿಂದ ಜನರಲ್ ಸ್ಟಾಫ್ ಮುಖ್ಯಸ್ಥ ಎಲ್‌ಟಿಜಿ ಹರ್ಝಿ ನೇತೃತ್ವ ವಹಿಸಿದ್ದರು. ಟೆಹ್ರಾನ್‌ನಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡ ಕಾರ್ಯಾಚರಣೆ ಕೇಂದ್ರದಲ್ಲಿದ್ದರು. ಅವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ