Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ

ಇಸ್ರೇಲ್(Israel)-ಪ್ಯಾಲೆಸ್ತೀನ್(Palestine) ಸಂಘರ್ಷಕ್ಕೆ ಇಲ್ಲಿಯವರೆಗೆ 1,600 ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ
ಯುದ್ಧImage Credit source: India Today
Follow us
ನಯನಾ ರಾಜೀವ್
|

Updated on: Oct 10, 2023 | 10:07 AM

ಇಸ್ರೇಲ್(Israel)-ಪ್ಯಾಲೆಸ್ತೀನ್(Palestine) ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ಕು ದಿನಗಳ ಅವಧಿಯಲ್ಲಿ ದಾಳಿಯಲ್ಲಿ 4,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದಲ್ಲದೆ, ಹಮಾಸ್ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 2,600 ಜನರು ಗಾಯಗೊಂಡಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಮತ್ತಷ್ಟು ಓದಿ: ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ

ಇಸ್ರೇಲ್‌ನ ನಿರಂತರ ದಾಳಿಗಳು ಮುಂದುವರೆದಿದೆ, ಗಾಜಾದ 187,500 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು 687 ಜನರು ಸಾವನ್ನಪ್ಪಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಬ್ರಿಟನ್ ನಾಯಕರು ಇಸ್ರೇಲ್​ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ನಾವು ಯುದ್ಧವನ್ನು ಪ್ರಾರಂಭಿಸಿಲ್ಲ ಆದರೆ ಅದನ್ನು ನಾವೇ ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. ಹಮಾಸ್​ ಅನ್ನು ಐಸಿಸ್ ಉಗ್ರರಿಗೆ ಹೋಲಿಸಿರುವ ನೇತನ್ಯಾಹು , ಅವರ ವಿರುದ್ಧ ಜನರು ಒಗ್ಗೂಡಿ ಸೋಲಿಸಬೇಕೆಂದು ಕರೆ ನೀಡಿದರು.

ಅಲ್ ಜಜೀರಾ ವರದಿಯ ಪ್ರಕಾರ, ಗಾಜಾ ಎನ್‌ಕ್ಲೇವ್‌ನ ಪಶ್ಚಿಮ ಭಾಗದಲ್ಲಿರುವ ವಸತಿ ಕಟ್ಟಡದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಪತ್ರಕರ್ತರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಟರ್ಕಿಯ ಅನಡೋಲು ಏಜೆನ್ಸಿ ಇಬ್ಬರು ಪತ್ರಕರ್ತರನ್ನು ಸಯೀದ್ ಅಲ್-ತವೀಲ್ ಮತ್ತು ಮೊಹಮ್ಮದ್ ಸೊಬ್ ಎಂದು ಗುರುತಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ