AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ

ಇಸ್ರೇಲ್(Israel)-ಪ್ಯಾಲೆಸ್ತೀನ್(Palestine) ಸಂಘರ್ಷಕ್ಕೆ ಇಲ್ಲಿಯವರೆಗೆ 1,600 ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ
ಯುದ್ಧImage Credit source: India Today
ನಯನಾ ರಾಜೀವ್
|

Updated on: Oct 10, 2023 | 10:07 AM

Share

ಇಸ್ರೇಲ್(Israel)-ಪ್ಯಾಲೆಸ್ತೀನ್(Palestine) ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ಕು ದಿನಗಳ ಅವಧಿಯಲ್ಲಿ ದಾಳಿಯಲ್ಲಿ 4,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದಲ್ಲದೆ, ಹಮಾಸ್ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 2,600 ಜನರು ಗಾಯಗೊಂಡಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಮತ್ತಷ್ಟು ಓದಿ: ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ

ಇಸ್ರೇಲ್‌ನ ನಿರಂತರ ದಾಳಿಗಳು ಮುಂದುವರೆದಿದೆ, ಗಾಜಾದ 187,500 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು 687 ಜನರು ಸಾವನ್ನಪ್ಪಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಬ್ರಿಟನ್ ನಾಯಕರು ಇಸ್ರೇಲ್​ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ನಾವು ಯುದ್ಧವನ್ನು ಪ್ರಾರಂಭಿಸಿಲ್ಲ ಆದರೆ ಅದನ್ನು ನಾವೇ ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. ಹಮಾಸ್​ ಅನ್ನು ಐಸಿಸ್ ಉಗ್ರರಿಗೆ ಹೋಲಿಸಿರುವ ನೇತನ್ಯಾಹು , ಅವರ ವಿರುದ್ಧ ಜನರು ಒಗ್ಗೂಡಿ ಸೋಲಿಸಬೇಕೆಂದು ಕರೆ ನೀಡಿದರು.

ಅಲ್ ಜಜೀರಾ ವರದಿಯ ಪ್ರಕಾರ, ಗಾಜಾ ಎನ್‌ಕ್ಲೇವ್‌ನ ಪಶ್ಚಿಮ ಭಾಗದಲ್ಲಿರುವ ವಸತಿ ಕಟ್ಟಡದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಪತ್ರಕರ್ತರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಟರ್ಕಿಯ ಅನಡೋಲು ಏಜೆನ್ಸಿ ಇಬ್ಬರು ಪತ್ರಕರ್ತರನ್ನು ಸಯೀದ್ ಅಲ್-ತವೀಲ್ ಮತ್ತು ಮೊಹಮ್ಮದ್ ಸೊಬ್ ಎಂದು ಗುರುತಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ