AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ

ಇಸ್ರೇಲ್(Israel)-ಪ್ಯಾಲೆಸ್ತೀನ್(Palestine) ಸಂಘರ್ಷಕ್ಕೆ ಇಲ್ಲಿಯವರೆಗೆ 1,600 ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿ
ಯುದ್ಧImage Credit source: India Today
ನಯನಾ ರಾಜೀವ್
|

Updated on: Oct 10, 2023 | 10:07 AM

Share

ಇಸ್ರೇಲ್(Israel)-ಪ್ಯಾಲೆಸ್ತೀನ್(Palestine) ಸಂಘರ್ಷಕ್ಕೆ ಇಲ್ಲಿಯವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಯಾವುದೇ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ಹಮಾಸ್ ಭಯೋತ್ಪಾದಕರು ಒತ್ತೆಯಾಳಾಗಿರಿಸಿಕೊಂಡಿರುವ ಇಸ್ರೇಲಿ ನಾಗರಿಕರನ್ನು ಒಬ್ಬೊಬ್ಬರನ್ನಾಗಿಯೇ ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ಕು ದಿನಗಳ ಅವಧಿಯಲ್ಲಿ ದಾಳಿಯಲ್ಲಿ 4,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದಲ್ಲದೆ, ಹಮಾಸ್ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಕನಿಷ್ಠ 900 ಜನರು ಸಾವನ್ನಪ್ಪಿದ್ದಾರೆ ಮತ್ತು 2,600 ಜನರು ಗಾಯಗೊಂಡಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಮತ್ತಷ್ಟು ಓದಿ: ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ

ಇಸ್ರೇಲ್‌ನ ನಿರಂತರ ದಾಳಿಗಳು ಮುಂದುವರೆದಿದೆ, ಗಾಜಾದ 187,500 ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು 687 ಜನರು ಸಾವನ್ನಪ್ಪಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಬ್ರಿಟನ್ ನಾಯಕರು ಇಸ್ರೇಲ್​ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ನಾವು ಯುದ್ಧವನ್ನು ಪ್ರಾರಂಭಿಸಿಲ್ಲ ಆದರೆ ಅದನ್ನು ನಾವೇ ಕೊನೆಗೊಳಿಸುತ್ತೇವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ. ಹಮಾಸ್​ ಅನ್ನು ಐಸಿಸ್ ಉಗ್ರರಿಗೆ ಹೋಲಿಸಿರುವ ನೇತನ್ಯಾಹು , ಅವರ ವಿರುದ್ಧ ಜನರು ಒಗ್ಗೂಡಿ ಸೋಲಿಸಬೇಕೆಂದು ಕರೆ ನೀಡಿದರು.

ಅಲ್ ಜಜೀರಾ ವರದಿಯ ಪ್ರಕಾರ, ಗಾಜಾ ಎನ್‌ಕ್ಲೇವ್‌ನ ಪಶ್ಚಿಮ ಭಾಗದಲ್ಲಿರುವ ವಸತಿ ಕಟ್ಟಡದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಇಬ್ಬರು ಪತ್ರಕರ್ತರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಟರ್ಕಿಯ ಅನಡೋಲು ಏಜೆನ್ಸಿ ಇಬ್ಬರು ಪತ್ರಕರ್ತರನ್ನು ಸಯೀದ್ ಅಲ್-ತವೀಲ್ ಮತ್ತು ಮೊಹಮ್ಮದ್ ಸೊಬ್ ಎಂದು ಗುರುತಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ