AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ಥ್ಯಾಂಕ್ಸ್; ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಘೋಷಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಪ್ರಾಸ್ಟೇಟ್ ಕ್ಯಾನ್ಸರ್ ಉಂಟಾಗಿತ್ತು. ಆದರೆ, ಈ ವಿಷಯವನ್ನು ಅವರು ಜಗತ್ತಿಗೆ ಮುಚ್ಚಿಟ್ಟಿದ್ದರು. ಆರಂಭಿಕ ಹಂತದಲ್ಲೇ ಈ ಕ್ಯಾನ್ಸರ್ ಪತ್ತೆಯಾಗಿದ್ದರಿಂದ ಅವರು ಸೂಕ್ತ ಚಿಕಿತ್ಸೆ ಪಡೆದು ಕ್ಯಾನ್ಸರ್​​ನಿಂದ ಪಾರಾಗಿದ್ದಾರೆ. ನೆತನ್ಯಾಹು ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದಿದ್ದಾರೆ. ತಮ್ಮ ವೈದ್ಯಕೀಯ ವರದಿಯ ವಿವರಗಳನ್ನು ಬಿಡುಗಡೆ ಮಾಡಲು ಅವರು ಏಕೆ ವಿಳಂಬ ಮಾಡಿದರು ಎಂಬುದರ ಬಗ್ಗೆಯೂ ನೆತನ್ಯಾಹು ಮಾತನಾಡಿದ್ದಾರೆ.

ದೇವರಿಗೆ ಥ್ಯಾಂಕ್ಸ್; ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಘೋಷಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು
NetanyahuImage Credit source: PTI
ಸುಷ್ಮಾ ಚಕ್ರೆ
|

Updated on: Apr 24, 2026 | 10:02 PM

Share

ನವದೆಹಲಿ, ಏಪ್ರಿಲ್ 24: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಪ್ರಾಸ್ಟೇಟ್ ಕ್ಯಾನ್ಸರ್​ಗೆ ತುತ್ತಾಗಿದ್ದರು ಎಂಬ ವಿಷಯ ಹೊರಬಿದ್ದಿದೆ. ಆದರೆ, ಅವರು ಈ ವಿಷಯವನ್ನು ಗುಟ್ಟಾಗಿಟ್ಟಿದ್ದರು. ಚಿಕಿತ್ಸೆ ಪಡೆದು ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಅವರು ಈ ವಿಷಯವನ್ನು ಖುದ್ದಾಗಿ ಬಹಿರಂಗಪಡಿಸಿದ್ದಾರೆ. ಎಕ್ಸ್​​ನಲ್ಲಿನ ಪೋಸ್ಟ್‌ನಲ್ಲಿ ಅವರು ತಮ್ಮ ಪ್ರಾಸ್ಟೇಟ್‌ ಕ್ಯಾನ್ಸರ್​​ಗೆ ಸಂಬಂಧಿಸಿದ ಸಣ್ಣ ವೈದ್ಯಕೀಯ ಸಮಸ್ಯೆಯನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈಗ ಸಂಪೂರ್ಣವಾಗಿ ಚಿಕಿತ್ಸೆ ನೀಡಲಾಗಿದೆ. ನಾನು ಕ್ಯಾನ್ಸರ್​​ ಅನ್ನು ಜಯಿಸಿದ್ದೇನೆ. ದೇವರಿಗೆ ಧನ್ಯವಾದಗಳು ಎಂದು ನೆತನ್ಯಾಹು ಪೋಸ್ಟ್ ಮಾಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ತೀವ್ರ ಸಂಘರ್ಷದ ಕಾರಣದಿಂದ ನನ್ನ ಆರೋಗ್ಯದ ಬಗ್ಗೆ ಅಪ್​ಡೇಟ್ ನೀಡಲು ಸ್ವಲ್ಪ ಸಮಯ ತೆಗೆದುಕೊಂಡೆ ಎಂದು ನೆತನ್ಯಾಹು ಎಕ್ಸ್​​ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ. “ನಾನು ನಿಮ್ಮೊಂದಿಗೆ ಮೂರು ವಿಷಯಗಳನ್ನು ಹಂಚಿಕೊಳ್ಳಲು ಕೇಳಿಕೊಳ್ಳುತ್ತೇನೆ. 1 – ದೇವರಿಗೆ ಧನ್ಯವಾದಗಳು, ನಾನು ಆರೋಗ್ಯವಾಗಿದ್ದೇನೆ. 2 – ನಾನು ಅತ್ಯುತ್ತಮ ದೈಹಿಕ ಸ್ಥಿತಿಯಲ್ಲಿದ್ದೇನೆ. 3 – ನನ್ನ ಪ್ರಾಸ್ಟೇಟ್‌ನಲ್ಲಿ ನನಗೆ ಸಣ್ಣ ವೈದ್ಯಕೀಯ ಸಮಸ್ಯೆ ಇತ್ತು, ಅದಕ್ಕೆ ಸಂಪೂರ್ಣವಾಗಿ ಚಿಕಿತ್ಸೆ ನೀಡಲಾಯಿತು. ನನ್ನ ಜೊತೆಗೆ ಇದ್ದಿದ್ದಕ್ಕೆ ದೇವರಿಗೆ ಧನ್ಯವಾದಗಳು” ಎಂದು ನೆತನ್ಯಾಹು ಹೇಳಿದ್ದಾರೆ.

ಇದನ್ನೂ ಓದಿ: ಲೆಬನಾನ್‌ನೊಂದಿಗೆ ಶೀಘ್ರದಲ್ಲೇ ಇಸ್ರೇಲ್ ನೇರ ಮಾತುಕತೆ; ನೆತನ್ಯಾಹು ಘೋಷಣೆ

“ದೇವರಿಗೆ ಧನ್ಯವಾದಗಳು, ನಾನು ಇದನ್ನೂ ಸಹ ಜಯಿಸಿದೆ. ಜೆರುಸಲೆಮ್‌ನ ಹಡಸ್ಸಾ ಆಸ್ಪತ್ರೆಯ ವೈದ್ಯರು ಮತ್ತು ಅದ್ಭುತ ವೈದ್ಯಕೀಯ ತಂಡಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇಸ್ರೇಲ್ ನಾಗರಿಕರೇ, ನಿಮಗೆ ನನಗೆ ಒಂದೇ ಒಂದು ವಿನಂತಿ ಇದೆ. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ. ತಪಾಸಣೆಗೆ ಒಳಗಾಗಿ ಮತ್ತು ವೈದ್ಯರ ಸೂಚನೆಗಳನ್ನು ಅನುಸರಿಸಿ” ಎಂದು ನೆತನ್ಯಾಹು ತಮ್ಮ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಕ್ಯಾನ್ಸರ್ ಇದ್ದಂತೆ : ಪಾಕ್ ಸಚಿವ ಖ್ವಾಜಾ ಆಸಿಫ್ ವಿವಾದಾತ್ಮಕ ಹೇಳಿಕೆ, ನೆತನ್ಯಾಹು ತೀವ್ರ ವಾಗ್ದಾಳಿ

ಇಸ್ರೇಲ್​ನ ಪ್ರಧಾನ ಮಂತ್ರಿ ಕಚೇರಿ ಬಿಡುಗಡೆ ಮಾಡಿದ ಮತ್ತು ದಿ ಜೆರುಸಲೆಮ್ ಪೋಸ್ಟ್ ಉಲ್ಲೇಖಿಸಿದ ಅಧಿಕೃತ ವೈದ್ಯಕೀಯ ವರದಿಯ ಪ್ರಕಾರ, ನೆತನ್ಯಾಹು ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆ ಪಡೆದಿದ್ದಾರೆ. ಏಪ್ರಿಲ್ 20, 2026ರ ದಿನಾಂಕದ ವರದಿಯು ಇಸ್ರೇಲಿ ಪ್ರಧಾನಿ ಈ ಹಿಂದೆ ಡಿಸೆಂಬರ್ 29, 2024ರಂದು ಪ್ರಾಸ್ಟೇಟ್ ಹೈಪರ್‌ಪ್ಲಾಸಿಯಾಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಸೂಚಿಸುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ