AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಆಕಸ್ಮಿಕವಾಗಿ ಹತ್ಯೆಗೈದ ಇಸ್ರೇಲ್ ಸೇನೆ, ನೇತನ್ಯಾಹು ಹೇಳಿದ್ದೇನು?

ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ, ಶುಕ್ರವಾರ (ಡಿಸೆಂಬರ್ 15) ಇಸ್ರೇಲ್ ಸೇನೆಯು ಆಕಸ್ಮಿಕವಾಗಿ ತನ್ನದೇ ದೇಶದ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದಿದೆ. ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಈ ಮಾಹಿತಿ ನೀಡಿದ್ದಾರೆ. ಇಸ್ರೇಲಿ ಸೈನಿಕರು ಮೂವರು ಇಸ್ರೇಲಿ ಒತ್ತೆಯಾಳುಗಳನ್ನು ತಮಗೆ ಅಪಾಯ ಎಂದು ತಪ್ಪಾಗಿ ಭಾವಿಸಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಗಾಜಾದಲ್ಲಿ ಮೂವರು ಒತ್ತೆಯಾಳುಗಳನ್ನು ಆಕಸ್ಮಿಕವಾಗಿ ಹತ್ಯೆಗೈದ ಇಸ್ರೇಲ್ ಸೇನೆ, ನೇತನ್ಯಾಹು ಹೇಳಿದ್ದೇನು?
ಬೆಂಜಮಿನ್ ನೇತನ್ಯಾಹುImage Credit source: Hindustan Times
ನಯನಾ ರಾಜೀವ್
|

Updated on: Dec 16, 2023 | 8:08 AM

Share

ಇಸ್ರೇಲ್(Israel) ಮತ್ತು ಹಮಾಸ್(Hamas) ನಡುವೆ ನಡೆಯುತ್ತಿರುವ ಯುದ್ಧದಲ್ಲಿ, ಶುಕ್ರವಾರ (ಡಿಸೆಂಬರ್ 15) ಇಸ್ರೇಲ್ ಸೇನೆಯು ಆಕಸ್ಮಿಕವಾಗಿ ತನ್ನದೇ ದೇಶದ ಮೂವರು ಒತ್ತೆಯಾಳುಗಳನ್ನು ಹತ್ಯೆಗೈದಿದೆ. ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಈ ಮಾಹಿತಿ ನೀಡಿದ್ದಾರೆ. ಇಸ್ರೇಲಿ ಸೈನಿಕರು ಮೂವರು ಇಸ್ರೇಲಿ ಒತ್ತೆಯಾಳುಗಳನ್ನು ತಮಗೆ ಅಪಾಯ ಎಂದು ತಪ್ಪಾಗಿ ಭಾವಿಸಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದು ನಮಗೆಲ್ಲರಿಗೂ ದುಃಖಕರ ಮತ್ತು ನೋವಿನ ಘಟನೆಯಾಗಿದೆ ಮತ್ತು ಈ ಘಟನೆಗೆ ಎಲ್ಲದಕ್ಕೂ IDF ಕಾರಣವಾಗಿದೆ ಎಂದು ಹಗರಿ ಹೇಳಿದ್ದಾರೆ. ಅಕ್ಟೋಬರ್ 7 ರಂದು ದಕ್ಷಿಣ ಇಸ್ರೇಲ್‌ನಲ್ಲಿ ಹಮಾಸ್ ಮಾರಣಾಂತಿಕ ದಾಳಿಯನ್ನು ನಡೆಸಿತು, ಇದರಲ್ಲಿ ಅನೇಕ ಜನರು ಸಾವನ್ನಪ್ಪಿದರು ಮತ್ತು ಇನ್ನೂರಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದರು.

ಮತರನ್ನು ಸಮರ್ ತಲಲ್ಕಾ, 22, ಯೋಟಮ್ ಹೈಮ್, 28, ಮತ್ತು ಅಲೋನ್ ಶಮ್ರಿಜ್, 26 ಎಂದು ಗುರುತಿಸಲಾಗಿದೆ. ದೊಡ್ಡ ಪ್ರಮಾದ ನಡೆದುಹೋಗಿದೆ, ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಹಿಂದಿರುಗಿಸುವ ಅತ್ಯುನ್ನತ ಪ್ರಯತ್ನದೊಂದಿಗೆ ಮುಂದುವರಿಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಪ್ರತಿಜ್ಞೆ ಮಾಡಿದರು.

ಮತ್ತಷ್ಟು ಓದಿ: ಗಾಜಾ ಪಟ್ಟಿಯಲ್ಲಿ ಹಮಾಸ್​ 16 ವರ್ಷಗಳ ಆಳ್ವಿಕೆ ಅಂತ್ಯ, ಗಾಜಾ ನಮ್ಮ ವಶ: ಇಸ್ರೇಲ್​​ ರಕ್ಷಣಾ ಸಚಿವ

ಹಮಾಸ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ಸೇನಾ ಕಾರ್ಯಾಚರಣೆಯನ್ನು ಆರಂಭಿಸಿತು. ಅಂದಿನಿಂದ, ಒಂದು ವಾರದ ಕದನ ವಿರಾಮ ಹೊರತುಪಡಿಸಿ ಯುದ್ಧ ಮುಂದುವರೆದಿದೆ.

ಅಕ್ಟೋಬರ್ 7 ರಿಂದ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 18,787 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ಇಸ್ರೇಲ್​ನಲ್ಲಿ ಸಾವಿನ ಸಂಖ್ಯೆ ಸುಮಾರು 1,200 ಆಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್