AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19 ವಿರುದ್ಧ ಫೈಝರ್ ಲಸಿಕೆ ಹಾಕಿಸಿಕೊಂಡ ಇಸ್ರೇಲ್ ಪ್ರಧಾನಿ ನೆತನ್ಯಾಹು

ರಮಾತ್ ಗಾನ್​ನಲ್ಲಿರುವ ಶೆಬಾ ವೈದ್ಯಕೀಯ ಕೇಂದ್ರದಲ್ಲಿ ಪ್ರಧಾನಿ ನೆತನ್ಯಾಹು ಮತ್ತು ಇಸ್ರೇಲ್ ಆರೋಗ್ಯ ಸಚಿವ ಯುಲಿ ಎಡೆಲ್​ಸ್ಟಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಕೊವಿಡ್-19 ವಿರುದ್ಧ ಫೈಝರ್ ಲಸಿಕೆ ಹಾಕಿಸಿಕೊಂಡ ಇಸ್ರೇಲ್ ಪ್ರಧಾನಿ ನೆತನ್ಯಾಹು
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೊವಿಡ್-19 ಲಸಿಕೆ ಪಡೆಯುತ್ತಿರುವುದು.
TV9 Web
| Edited By: |

Updated on:Apr 06, 2022 | 11:31 PM

Share

ಟೆಲ್​ಅವೀವ್: ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಕೊವಿಡ್-19 ಲಸಿಕೆ ಹಾಕಿಸಿಕೊಂಡಿದ್ದಾರೆ. ಆ ಮೂಲಕ ಕೊರೊನಾ ವಿರುದ್ಧ ಲಸಿಕೆ ಚುಚ್ಚಿಸಿಕೊಂಡ ಇಸ್ರೇಲ್​ನ ಮೊದಲ ಪ್ರಜೆ ಅನಿಸಿಕೊಂಡಿದ್ದಾರೆ. ದೇಶವ್ಯಾಪಿ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ರಮಾತ್ ಗಾನ್​ನಲ್ಲಿರುವ ಶೆಬಾ ವೈದ್ಯಕೀಯ ಕೇಂದ್ರದಲ್ಲಿ ಪ್ರಧಾನಿ ನೆತನ್ಯಾಹು ಮತ್ತು ಇಸ್ರೇಲ್ ಆರೋಗ್ಯ ಸಚಿವ ಯುಲಿ ಎಡೆಲ್​ಸ್ಟಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಲಸಿಕೆ ಹಾಕಿಸಿಕೊಳ್ಳಲು ನಾನು ವೈಯಕ್ತಿಕ ಉದಾಹರಣೆಯಾಗಿದ್ದೇನೆ ಮತ್ತು ನಿಮ್ಮನ್ನೂ ಲಸಿಕೆ ಪಡೆಯುವಂತೆ ಪ್ರೋತ್ಸಾಹಿಸುತ್ತೇನೆ ಎಂದು ನೆತನ್ಯಾಹು ಹೇಳಿದ್ದಾರೆ.

ಈ ತಿಂಗಳ ಅಂತ್ಯದೊಳಗಾಗಿ ಹತ್ತು ಲಕ್ಷದಷ್ಟು ಕೊವಿಡ್-19 ಲಸಿಕೆಗಳು ಲಭ್ಯವಾಗಲಿವೆ ಎಂಬ ಮಾಹಿತಿಯನ್ನೂ ಪ್ರಧಾನಿ ನೀಡಿದ್ದಾರೆ. ಶನಿವಾರ ನಡೆದ ಕಾರ್ಯಕ್ರಮ ಟಿವಿಯಲ್ಲೂ ಪ್ರಧಾನಿ ಲಸಿಕೆ ಹಾಕಿಸಿಕೊಳ್ಳುವ ದೃಶ್ಯ ನೇರಪ್ರಸಾರವಾಗಿದೆ.

ಫೆಬ್ರವರಿಯಲ್ಲಿ ಮೊದಲ ಕೋವಿಡ್-19 ಪ್ರಕರಣ ಎದುರಿಸಿದ ಇಸ್ರೇಲ್, ಇದುವರೆಗೆ 3 ಲಕ್ಷದ 72 ಸಾವಿರದಷ್ಟು ಕೊವಿಡ್ ಪ್ರಕರಣಗಳನ್ನು ದಾಖಲಿಸಿದೆ. 3,070 ಮಂದಿ ಕೊರೊನಾ ವೈರಾಣು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೀಗ, ಇಸ್ರೇಲ್ ಫೈಝರ್-ಬಯೊಎನ್​ಟೆಕ್ ಲಸಿಕೆಯನ್ನು ಜನರಿಗೆ ಹಾಕುವ ಪ್ರಕ್ರಿಯೆ ಆರಂಭಿಸಿದೆ.

ಅಮೆರಿಕಾ, ರಷ್ಯಾ, ಬ್ರಿಟನ್ ಕೂಡ ಲಸಿಕೆ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಅಮೆರಿಕಾ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಪತ್ನಿ ಕೂಡ ಸೋಮವಾರ ಕೊವಿಡ್-19 ವಿರುದ್ಧದ ಫೈಝರ್ ಲಸಿಕೆ ಹಾಕಿಸಿಕೊಳ್ಳಲಿದ್ದಾರೆ.

Published On - 12:55 pm, Sun, 20 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್