AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲ್ಲುವವರೆಗೆ ಯುದ್ಧ ಮುಂದುವರೆಯುತ್ತೆ, ಕದನ ವಿರಾಮ ಕುರಿತು ತನ್ನ ನಿಲುವು ಸ್ಪಷ್ಟಪಡಿಸಿದ ಇಸ್ರೇಲ್

ಕಳೆದ ಹಲವು ದಿನಗಳಿಂದ ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ನಡೆಯುತ್ತಿದ್ದು, ಇದುವರೆಗೆ ಒಂಬತ್ತು ಸಾವಿರ ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ದೇಶದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಗೆಲ್ಲುವವರೆಗೆ ಯುದ್ಧ ಮುಂದುವರೆಯುತ್ತೆ, ಕದನ ವಿರಾಮ ಕುರಿತು ತನ್ನ ನಿಲುವು ಸ್ಪಷ್ಟಪಡಿಸಿದ ಇಸ್ರೇಲ್
ಇಸ್ರೇಲ್Image Credit source: The Economic Times
ನಯನಾ ರಾಜೀವ್
|

Updated on: Oct 31, 2023 | 8:19 AM

Share

ಕಳೆದ ಹಲವು ದಿನಗಳಿಂದ ಇಸ್ರೇಲ್(Israel) ಮತ್ತು ಹಮಾಸ್(Hamas) ನಡುವೆ ಯುದ್ಧ ನಡೆಯುತ್ತಿದ್ದು, ಇದುವರೆಗೆ ಒಂಬತ್ತು ಸಾವಿರ ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು(Benjamin Netanyahu) ದೇಶದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಅಮೆರಿಕದ 9/11 ದಾಳಿಯಂತಹ ಕದನ ವಿರಾಮಕ್ಕೆ ಒಪ್ಪುವುದಿಲ್ಲ ಏಕೆಂದರೆ ಅದು ಶರಣಾಗತಿಯಂತಿದೆ ಎಂದಿದ್ದಾರೆ. ಅಕ್ಟೋಬರ್ 7 ರಂದು ಪ್ರಾರಂಭವಾದ ಯುದ್ಧದಲ್ಲಿ ಇಸ್ರೇಲ್ ಕದನ ವಿರಾಮವನ್ನು ಘೋಷಿಸಲು ಸಾಧ್ಯವಿಲ್ಲ. ಕದನ ವಿರಾಮಕ್ಕೆ ಕರೆ ನೀಡುವುದು ಇಸ್ರೇಲ್‌ ಹಮಾಸ್​ಗೆ ಶರಣಾದಂತೆ ಭಾಸವಾಗುತ್ತದೆ ಎಂದಿದ್ದಾರೆ. ಭಯೋತ್ಪಾದನೆಗೆ ಶರಣಾದಂತೆ ಹಾಗಾಗಿ ಗೆಲ್ಲುವವರೆಗೆ ಯುದ್ಧ ಮುಂದುವರೆಸಲಾಗುವುದು ಎಂದರು.

ಜನರು ಭವಿಷ್ಯಕ್ಕಾಗಿ ಹೋರಾಡಲು ಸಿದ್ಧರಿದ್ದಾರೆಯೇ ಅಥವಾ ದಬ್ಬಾಳಿಕೆ ಮತ್ತು ಭಯೋತ್ಪಾದನೆಗೆ ಶರಣಾಗುತ್ತಾರೆಯೇ ಎಂದು ನಿರ್ಧರಿಸುವ ಸಮಯ ಇದೀಗ ಬಂದಿದೆ ಎಂದು ನೆತನ್ಯಾಹು ಹೇಳಿದರು.

ಅಕ್ಟೋಬರ್ 7 ರಂದು ಹಮಾಸ್ ಮೊದಲ ಬಾರಿಗೆ ನಮ್ಮ ಮೇಲೆ ದಾಳಿ ನಡೆಸಿತು, ಹಲವು ಮುಗ್ಧ ಜೀವಗಳನ್ನು ಹತ್ಯೆ ಮಾಡಿತ್ತು. ನಮ್ಮ ನಾಗರಿಕರ ರಕ್ಷಣೆ ಕೂಡ ನಮ್ಮ ಹೊಣೆ. ನಮಗೆ ಯುದ್ಧ ಬೇಡ. ಆದರೆ ನಾವು ಈ ಯುದ್ಧವನ್ನು ಗೆಲ್ಲುತ್ತೇವೆ ಎಂದರು.

ಮತ್ತಷ್ಟು ಓದಿ: ನುಡಿದಂತೆ ನಡೆದ ಇಸ್ರೇಲ್​​​: ಹಮಾಸ್​​​​ ಸುರಂಗದ ಮೇಲೆ ದಾಳಿ, 150 ಉಗ್ರರ ಹತ್ಯೆ

ಹಮಾಸ್ ಚಿಕ್ಕ ಮಕ್ಕಳನ್ನು ಅವರ ತಾಯಂದಿರಿಂದ ಕಸಿದುಕೊಂಡಿತು. ಹಮಾಸ್ ಉಗ್ರರು ಜನರನ್ನು ಜೀವಂತ ಸುಟ್ಟು ಹಾಕಿದರು. ಮಹಿಳೆಯರ ಮೇಲೆ ಅತ್ಯಾಚಾರ. ಪುರುಷರ ಶಿರಚ್ಛೇದ. ಯಹೂದಿಗಳ ನರಮೇಧ. ಮಕ್ಕಳನ್ನು ಅಪಹರಿಸಿದ್ದಾರೆ. ಇದು ಒಳ್ಳೆಯದು ಹಾಗೂ ಕೆಟ್ಟದ್ದರ ನಡುವೆ ನಡೆಯುತ್ತಿರುವ ಯುದ್ಧ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ಹಮಾಸ್ ಮಾತುಕತೆಯಲ್ಲಿ ಆಸಕ್ತಿ ಹೊಂದಿಲ್ಲ. ಹಮಾಸ್‌ನ ಏಕೈಕ ಆಸಕ್ತಿ ಯಹೂದಿಗಳನ್ನು ನಾಶಮಾಡುವುದು. ಹಮಾಸ್ ಕಳೆದ 16 ವರ್ಷಗಳಿಂದ ಫೆಲೆಸ್ತೀನಿಯರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. 2007 ರಲ್ಲಿ ಗಾಜಾದಲ್ಲಿ ಅಧಿಕಾರವನ್ನು ಪಡೆದಾಗ, ನೂರಾರು ಪ್ಯಾಲೆಸ್ತೀನ್ ನಾಗರಿಕರು ಕೊಲ್ಲಲ್ಪಟ್ಟರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!